ಶ್ರೀನಗರ : ಜಾಮೀನಿನ ಮೇಲೆ ಬಿಡುಗಡೆಯಾದ ಶಂಕಿತ ಉಗ್ರರ ಮೇಲೆ ನಿಗಾ ಇಡಲು ಅವರ ಕಾಲಿಗೆ ಜಿಪಿಎಸ್ ಆಧಾರಿತ ಬಳೆಯನ್ನು ಜಮ್ಮು ಕಾಶ್ಮೀರ ಪೊಲೀಸರು ಪರಿಚಯಿಸಿದ್ದಾರೆ. ಈ ಮೂಲಕ ದೇಶದಲ್ಲಿ ಮೊದಲ ಬಾರಿಗೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಅಡಿ ಬಂಧನಕ್ಕೆ ಒಳಗಾದ ಜಿಪಿಎಸ್ ಟ್ರ್ಯಾಕರ್ ಅಳವಡಿಸಿದ ದೇಶದ ಮೊದಲ ಪೊಲೀಸ್ ಪಡೆ ಎಂಬ ಹೆಗ್ಗಳಿಗೆ ಜಮ್ಮು ಕಾಶ್ಮೀರ ಪೊಲೀಸರು ಪಾತ್ರರಾಗಿದ್ದಾರೆ.
ಜಿಪಿಎಸ್ ಟ್ರ್ಯಾಕರ್ ಆಂಕ್ಲೆಟ್ ವ್ಯಕ್ತಿಯ ಪಾದದ ಸುತ್ತಲೂ ಧರಿಸಬಹುದಾದ ಸಾಧನವಾಗಿದ್ದು, ಮೇಲ್ವಿಚಾರಣೆ ಮಾಡಲು ಮತ್ತು ಅವರ ಚಲನೆಯನ್ನು ಟ್ರ್ಯಾಕ್ ಮಾಡುತ್ತದೆ. ಜಾಮೀನು, ಪೆರೋಲ್ ಮತ್ತು ಗೃಹಬಂಧನದಲ್ಲಿರುವ ಆರೋಪಿಗಳ ಚಲನವಲನವನ್ನು ಪತ್ತೆಹಚ್ಚಲು ಮತ್ತು ಜೈಲುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದಟ್ಟಣೆಯನ್ನು ಕಡಿಮೆ ಮಾಡಲು ಈ ಸಾಧನವನ್ನು ಈಗಾಗಲೇ ಅಮೆರಿಕ, ಯುನೈಟೆಡ್ ಕಿಂಗ್ಡಮ್, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ನಲ್ಲಿ ಬಳಸಲಾಗುತ್ತಿದೆ.
ಹಲವು ಉಗ್ರ ಸಂಘಟನೆಯ ಜೊತೆ ಸಂಪರ್ಕ ಹೊಂದಿದ್ದ ಗುಲಾಂ ಮೊಹಮ್ಮದ್ ಭಟ್ ಮೇಲೆ ದೇಶದ್ರೋಹದ ಪ್ರಕರಣ ದಾಖಲಾಗಿತ್ತು. ಈತನ ಜಾಮೀನು ಅರ್ಜಿಯನ್ನು ಆಲಿಸಿದ ಜಮ್ಮು ಕಾಶ್ಮೀರದಲ್ಲಿರುವ ರಾಷ್ಟ್ರೀಯ ತನಿಖಾ ದಳದ ನ್ಯಾಯಾಲಯ ಪೊಲೀಸರಿಗೆ ಜಿಪಿಎಸ್ ಆಧಾರಿತ ಸಾಧನ ಅಳವಡಿಸಲು ಸೂಚಿಸಿ ಜಾಮೀನು ಮಂಜೂರು ಮಾಡಿತು. ಪ್ರಸ್ತುತ ಈ ಸಾಧನವನ್ನು ದೇಶದ್ರೋಹ ಪ್ರಕರಣದಡಿ ಬಂಧಿತರಾಗುವ ಆರೋಪಿಗಳಿಗೆ ಮಾತ್ರ ಬಳಸಲು ನಿರ್ಧರಿಸಲಾಗಿದೆ.
ಆರೋಪಿ ಗುಲಾಂ ಮೊಹಮ್ಮದ್ ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಹಿಜ್ಬುಲ್ ಮುಜಾಹಿದ್ದೀನ್ನ ಆಜ್ಞೆಯ ಮೇರೆಗೆ ಭಯೋತ್ಪಾದನಾ ಸಂಘಟನೆಗೆ ಹಣಕಾಸಿನ ನೆರವು ನೀಡುವಲ್ಲಿ ತೊಡಗಿಸಿಕೊಂಡಿದ್ದ. ಉಗ್ರರಿಗೆ 2.5 ಲಕ್ಷ ರೂ. ಹಣವನ್ನು ಸಾಗಿಸಲು ಪ್ರಯತ್ನಿಸುತ್ತಿದ್ದಾಗ ಆತನನ್ನು ಬಂಧಿಸಲಾಗಿತ್ತು.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…