ಮಂಡ್ಯ : ಕಾಡಿನತ್ತ ತೆರಳದ ಕಾಡಾನೆಗಳ ಹಿಂಡು ರೈತರ ಜಮೀನಿಗೆ ಲಗ್ಗೆ ಇಡುತ್ತಿದ್ದು, ಇದೀಗ ಚಿಕ್ಕ ಮಂಡ್ಯ ಸಮೀಪದ ಕಬ್ಬಿನ ಗದ್ದೆಯಲ್ಲಿ ಸೋಮವಾರ ಬೆಳಗ್ಗೆ ಪ್ರತ್ಯಕ್ಷವಾಗಿವೆ.
ಸೋಮವಾರ ಬೆಳ್ಳಂ ಬೆಳಗ್ಗೆ ರಾಮಕೃಷ್ಣ ಚಿತ್ರಮಂದಿರವಾಗಿದ್ದ ಕಟ್ಟಡದ ಹಿಂಬದಿಯ ಪ್ರದೇಶದ ಜಮೀನಿನಲ್ಲಿ ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಪುಟ್ಟಸ್ವಾಮಿ ಅವರಿಗೆ ಸೇರಿದ ಜಮೀನಿನಲ್ಲಿ ಬೀಡು ಬಿಟ್ಟಿವೆ.
ಮಂಡ್ಯ ನಗರಕ್ಕೆ ಸಮೀಪವೇ ಕಾಡಾನೆಗಳು ಪ್ರತ್ಯಕ್ಷ ಗೊಂಡಿರುವುದರಿಂದ ಸಾರ್ವಜನಿಕರು ಆನೆ ನೋಡಲು ಮುಗಿಬಿದ್ದಿದ್ದಾರೆ ಸುತ್ತಮುತ್ತಲ ಪ್ರದೇಶದ ಜನತೆ ಬೈಪಾಸ್ ರಸ್ತೆ ಹಾಗೂ ಮಂಡ್ಯ – ಚಿಕ್ಕ ಮಂಡ್ಯ ರಸ್ತೆಯಲ್ಲಿ ಜಮಾಯಿಸಿದ್ದು, ಪೊಲೀಸರು ಆನೆಗಳ ಹಿಂಡಿನತ್ತ ಸಾರ್ವಜನಿಕರು ತೆರಳದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ.
ಹೊಸ ಬೂದನೂರು ಗ್ರಾಮದಲ್ಲಿ ಭಾನುವಾರ ಪ್ರತ್ಯಕ್ಷಗೊಂಡಿದ್ದ ಆನೆಗಳ ಹಿಂಡು ರಾತ್ರಿ ವೇಳೆ ಚಿಕ್ಕ ಮಂಡ್ಯ ದತ್ತ ಬಂದಿವೆ.ಅರಣ್ಯ ಪ್ರದೇಶದಿಂದ ನಾಡಿನತ್ತ ಮುಖ ಮಾಡಿರುವ ಆನೆಗಳ ಹಿಂಡು ಶನಿವಾರ ರಾತ್ರಿ ಅಂಬರಹಳ್ಳಿ ಸಮೀಪದ ಜಮೀನುಗಳಲ್ಲಿ ಕಾಣಿಸಿ ಕೊಂಡಿದ್ದವು.ಭಾನುವಾರ ಹೊಸ ಬೂದನೂರು ಗ್ರಾಮದ ಬೆಂಗಳೂರು-ಮೈಸೂರು ಹೆದ್ದಾರಿ ಬದಿಯ ಕಬ್ಬಿನ ಗದ್ದೆಗೆ ಲಗ್ಗೆ ಇಟ್ಟಿದ್ದವು, ಇದೀಗ ಮಂಡ್ಯ ನಗರ ಸಮೀಪ ಕಾಣಿಸಿಕೊಂಡಿವೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…