BREAKING NEWS

ಹೊಸಬೂದನೂರು ಗ್ರಾಮದ ಕಬ್ಬಿನ ಗದ್ದೆಯಲ್ಲಿ ಐದು ಆನೆಗಳ ಹಿಂಡು ಪ್ರತ್ಯಕ್ಷ

ಮಂಡ್ಯ : ತಾಲ್ಲೂಕಿನ ಹೊಸ ಬೂದನೂರು ಹಾಗೂ ಹಳೆಬೂದನೂರು ನಡುವೆ ಇರುವ ಕಬ್ಬಿನ ಗದ್ದೆಯಲ್ಲಿ ಐದು ಆನೆಗಳು ಪ್ರತ್ಯಕ್ಷವಾಗಿವೆ.

ಚನ್ನಪಟ್ಟಣದ ಅರಣ್ಯ ಪ್ರದೇಶಗಳಿಂದ ಆಗಮಿಸಿರುವ ಈ ಆನೆಗಳ ಹಿಂಡು ಶನಿವಾರ ರಾತ್ರಿ ತಾಲೂಕಿನ ಅಂಬರ ಹಳ್ಳಿ ಸಮೀಪದ ಜಮೀನುಗಳಲ್ಲಿ ಕಾಣಿಸಿಕೊಂಡ ಆನೆಗಳನ್ನು ಕಾಡಿಗೆ ಹಟ್ಟಲು ಅರಣ್ಯ ಇಲಾಖೆಯ ಸಿಬ್ಬಂದಿ ಪ್ರಯತ್ನಿಸಿದರಾದರೂ ಈ ಆನೆಗಳ ಹಿಂಡು, ಕಾಡಿನತ್ತ ಹೋಗದೆ ಮತ್ತೆ ನಾಡಿನತ್ತ ಬಂದು ಕಬ್ಬಿನ ಗದ್ದೆಯನ್ನು ಸೇರಿಕೊಂಡವು.

ಮಧ್ಯರಾತ್ರಿವರೆಗೂ ಮಂಡ್ಯ ಅರಣ್ಯ ಇಲಾಖೆಯ ಎಸಿಎಫ್ ಮಹದೇವಸ್ವಾಮಿ ಮತ್ತು ತಂಡ ಆನೆಗಳನ್ನು ಕಾಡಿನತ್ತ ಅಟ್ಟಲು ಪ್ರಯತ್ನಿಸಿದರಾದರು ಅದು ಸಫಲವಾಗಲಿಲ್ಲ. ಇದರಿಂದಾಗಿ ಭಾನುವಾರ ಕಾರ್ಯಾಚರಣೆ ನಡೆಸಲು ನಿರ್ಧರಿಸಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದರು.

ಭಾನುವಾರ ಬೆಳಿಗ್ಗೆ ತಾಲೂಕಿನ ಹೊಸ ಬೂದನೂರು ಗ್ರಾಮದ ಸಮೀಪವಿರುವ ಲೆಮನ್ ಗ್ರಾಸ್ ಹೋಟೆಲ್ ಹಿಂಭಾಗದ ಜಮೀನುಗಳಲ್ಲಿ ಕಾಣಿಸಿಕೊಂಡ ಆನೆಗಳ ಹಿಂಡನ್ನು ನೋಡಿ ಸಾರ್ವಜನಿಕರು ಭಯಭೀತರಾಗಿ ತಕ್ಷಣ ಅರಣ್ಯ ಇಲಾಖೆಯವರಿಗೆ ವಿಷಯ ಮುಟ್ಟಿಸಿದರು.

ತಕ್ಷಣ ಎಸಿಎಫ್ ಮಹಾದೇವಸ್ವಾಮಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದರಾದರು ಆನೆಗಳ ಹಿಂಡು, ಕಬ್ಬಿನ ಗದ್ದೆಯನ್ನು ಸೇರಿಕೊಂಡವು ಇದರಿಂದಾಗಿ ಅವುಗಳನ್ನು ಕಾಡಿಗೆ ಅಟ್ಟಲು ಸಾಧ್ಯವಾಗಲಿಲ್ಲ ಇದರಿಂದಾಗಿ ಸಂಜೆ ಕಾರ್ಯಾಚರಣೆ ನಡೆಸಿ ಮಳವಳ್ಳಿ ತಾಲೂಕಿನ ಮುತ್ತತ್ತಿ ಅರಣ್ಯ ಪ್ರದೇಶ ಅಥವಾ ಚನ್ನಪಟ್ಟಣದ ಅರಣ್ಯ ಪ್ರದೇಶಕ್ಕೆ ಅಟ್ಟಲು ನಿರ್ಧರಿಸಿದರು.

ಸಂಜೆ 6 ನಂತರ ಕಾರ್ಯಾಚರಣೆ ನಡೆಸಿ ಕಾಡಿನತ್ತ ಕಳುಹಿಸಲು ನಿರ್ಧರಿಸಿದ್ದಾರೆ. ವಿಷಯ ತಿಳಿದು ಮಂಡ್ಯ ತಾಲೂಕು ತಹಸಿಲ್ದಾರ್ ಬಿರಾದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಥಳದಲ್ಲೇ ಎಸಿಎಫ್ ಮಹಾದೇವಸ್ವಾಮಿ ಹಾಗೂ ಸಿಬ್ಬಂದಿ ಮೊಕ್ಕಾಂ ಹೂಡಿದ್ದು ಜನರು ಆನೆಗಳತ್ತ ಸುಳಿಯದಂತೆ ಎಚ್ಚರಿಕೆ ವಹಿಸಿದ್ದಾರೆ.

lokesh

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

8 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

10 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

11 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

12 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

14 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

14 hours ago