BREAKING NEWS

ಹೊಸಬೂದನೂರು ಗ್ರಾಮದ ಕಬ್ಬಿನ ಗದ್ದೆಯಲ್ಲಿ ಐದು ಆನೆಗಳ ಹಿಂಡು ಪ್ರತ್ಯಕ್ಷ

ಮಂಡ್ಯ : ತಾಲ್ಲೂಕಿನ ಹೊಸ ಬೂದನೂರು ಹಾಗೂ ಹಳೆಬೂದನೂರು ನಡುವೆ ಇರುವ ಕಬ್ಬಿನ ಗದ್ದೆಯಲ್ಲಿ ಐದು ಆನೆಗಳು ಪ್ರತ್ಯಕ್ಷವಾಗಿವೆ.

ಚನ್ನಪಟ್ಟಣದ ಅರಣ್ಯ ಪ್ರದೇಶಗಳಿಂದ ಆಗಮಿಸಿರುವ ಈ ಆನೆಗಳ ಹಿಂಡು ಶನಿವಾರ ರಾತ್ರಿ ತಾಲೂಕಿನ ಅಂಬರ ಹಳ್ಳಿ ಸಮೀಪದ ಜಮೀನುಗಳಲ್ಲಿ ಕಾಣಿಸಿಕೊಂಡ ಆನೆಗಳನ್ನು ಕಾಡಿಗೆ ಹಟ್ಟಲು ಅರಣ್ಯ ಇಲಾಖೆಯ ಸಿಬ್ಬಂದಿ ಪ್ರಯತ್ನಿಸಿದರಾದರೂ ಈ ಆನೆಗಳ ಹಿಂಡು, ಕಾಡಿನತ್ತ ಹೋಗದೆ ಮತ್ತೆ ನಾಡಿನತ್ತ ಬಂದು ಕಬ್ಬಿನ ಗದ್ದೆಯನ್ನು ಸೇರಿಕೊಂಡವು.

ಮಧ್ಯರಾತ್ರಿವರೆಗೂ ಮಂಡ್ಯ ಅರಣ್ಯ ಇಲಾಖೆಯ ಎಸಿಎಫ್ ಮಹದೇವಸ್ವಾಮಿ ಮತ್ತು ತಂಡ ಆನೆಗಳನ್ನು ಕಾಡಿನತ್ತ ಅಟ್ಟಲು ಪ್ರಯತ್ನಿಸಿದರಾದರು ಅದು ಸಫಲವಾಗಲಿಲ್ಲ. ಇದರಿಂದಾಗಿ ಭಾನುವಾರ ಕಾರ್ಯಾಚರಣೆ ನಡೆಸಲು ನಿರ್ಧರಿಸಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದರು.

ಭಾನುವಾರ ಬೆಳಿಗ್ಗೆ ತಾಲೂಕಿನ ಹೊಸ ಬೂದನೂರು ಗ್ರಾಮದ ಸಮೀಪವಿರುವ ಲೆಮನ್ ಗ್ರಾಸ್ ಹೋಟೆಲ್ ಹಿಂಭಾಗದ ಜಮೀನುಗಳಲ್ಲಿ ಕಾಣಿಸಿಕೊಂಡ ಆನೆಗಳ ಹಿಂಡನ್ನು ನೋಡಿ ಸಾರ್ವಜನಿಕರು ಭಯಭೀತರಾಗಿ ತಕ್ಷಣ ಅರಣ್ಯ ಇಲಾಖೆಯವರಿಗೆ ವಿಷಯ ಮುಟ್ಟಿಸಿದರು.

ತಕ್ಷಣ ಎಸಿಎಫ್ ಮಹಾದೇವಸ್ವಾಮಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದರಾದರು ಆನೆಗಳ ಹಿಂಡು, ಕಬ್ಬಿನ ಗದ್ದೆಯನ್ನು ಸೇರಿಕೊಂಡವು ಇದರಿಂದಾಗಿ ಅವುಗಳನ್ನು ಕಾಡಿಗೆ ಅಟ್ಟಲು ಸಾಧ್ಯವಾಗಲಿಲ್ಲ ಇದರಿಂದಾಗಿ ಸಂಜೆ ಕಾರ್ಯಾಚರಣೆ ನಡೆಸಿ ಮಳವಳ್ಳಿ ತಾಲೂಕಿನ ಮುತ್ತತ್ತಿ ಅರಣ್ಯ ಪ್ರದೇಶ ಅಥವಾ ಚನ್ನಪಟ್ಟಣದ ಅರಣ್ಯ ಪ್ರದೇಶಕ್ಕೆ ಅಟ್ಟಲು ನಿರ್ಧರಿಸಿದರು.

ಸಂಜೆ 6 ನಂತರ ಕಾರ್ಯಾಚರಣೆ ನಡೆಸಿ ಕಾಡಿನತ್ತ ಕಳುಹಿಸಲು ನಿರ್ಧರಿಸಿದ್ದಾರೆ. ವಿಷಯ ತಿಳಿದು ಮಂಡ್ಯ ತಾಲೂಕು ತಹಸಿಲ್ದಾರ್ ಬಿರಾದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಥಳದಲ್ಲೇ ಎಸಿಎಫ್ ಮಹಾದೇವಸ್ವಾಮಿ ಹಾಗೂ ಸಿಬ್ಬಂದಿ ಮೊಕ್ಕಾಂ ಹೂಡಿದ್ದು ಜನರು ಆನೆಗಳತ್ತ ಸುಳಿಯದಂತೆ ಎಚ್ಚರಿಕೆ ವಹಿಸಿದ್ದಾರೆ.

lokesh

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

3 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

3 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

4 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

4 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

9 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

9 hours ago