BREAKING NEWS

ಅಕ್ರಮ ಹಣ, ಮದ್ಯ, ಸರಕುಗಳ ಸಾಗಟದ ಮೇಲೆ ಖಾಕಿ ಹದ್ದಿನ ಕಣ್ಣು

ಬೆಂಗಳೂರು-ರಾಜ್ಯ ಚುನಾವಣೆ ಸಮೀಪಿಸುತ್ತಿದ್ದು, ಕೆಲ ದಿನಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆಗಳಿವೆ. ಇದಕ್ಕೂ ಮೊದಲೇ ರಾಜ್ಯದಾದ್ಯಂತ ಅಕ್ರಮ ಹಣ, ಮದ್ಯ, ಸರಕುಗಳನ್ನು ಸಾಗಟದ ಮೇಲೆ ಹದ್ದಿನ ಕಣ್ಣಿಡಲಾಗಿದೆ.
ಚುನಾವಣೆ ಎಂದರೆ, ಅಕ್ರಮ ಹಣ, ಮದ್ಯ ಹಂಚಿಕೆ ಮಾಮೂಲಿ. ಜತೆಗೆ ಮತದಾರರನ್ನು ಓಲೈಸಿಕೊಳ್ಳಲು ಹಲವು ಮಾದರಿಯ ಗಿಫ್ಟ್‌ ಗಳನ್ನು ನೀಡಲಾಗುತ್ತದೆ. ಆದರೆ, ಈ ಬಾರಿ ಅಕ್ರಮ ನಗದು, ಮದ್ಯ, ಗಿಫ್ಟ್ ಹಂಚುವುದಕ್ಕೆ ಕಡಿವಾಣ ಹಾಕಲು ರಾಜ್ಯ ಚುನಾವಣಾ ಆಯೋಗವು ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಎಲ್ಲಾ ನಗರಗಳು, ಹೆದ್ದಾರಿಗಳು, ಸುಂಕ ಸಂಗ್ರಹ ಕೇಂದ್ರ (ಟೋಲ್) ಸೇರಿದಂತೆ ಹಲವು ಕಡೆಗಳಲ್ಲಿ ತಪಾಸಣಾ ಕೇಂದ್ರಗಳನ್ನು (ಚೆಕ್‌ ಪೋಸ್ಟ್‌) ಕಾರ್ಯಾರಂಭಿಸಲಾಗಿದೆ.
ರಾಜ್ಯಾದ್ಯಂತ ಸ್ಥಾಪಿಸಿರುವ ಚೆಕ್‌ ಪೋಸ್ಟ್‌ ಗಳಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಸೂಕ್ತ ದಾಖಲೆ ಇಲ್ಲದೇ ಹಣವನ್ನು ಸಾಗಣೆ ಮಾಡುತ್ತಿದ್ದರೆ ಹಣದ ಬಗ್ಗೆ ಮಾಹಿತಿ ಕೇಳುತ್ತಿದ್ದಾರೆ. ಒಂದು ವೇಳೆ ಹಣದ ದಾಖಲೆ ನೀಡದಿದ್ದರೆ ಕೂಡಲೇ ಹಣ ಮತ್ತು ಆ ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ.
ಚುನಾವಣಾ ನೀತಿ ಸಂಹಿತೆ ಜಾರಿಗೂ ಮುನ್ನವೇ ಬಿಗಿ ಭದ್ರತೆ ಇರುವುದರಿಂದ ಯಾವುದೇ ವ್ಯಕ್ತಿಯು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸ್ವಂತ ಹಣವನ್ನೂ ಕೂಡಾ ಸಾಗಿಸುವಾಗಿ ಎಚ್ಚರ ವಹಿಸಬೇಕಿದೆ. ಹಣದ ಜತೆ ಬ್ಯಾಂಕ್ ದಾಖಲೆ ಅಥವಾ ಹಣದ ಮೂಲದ ಬಗ್ಗೆ ದಾಖಲೆ, ರಶೀದಿ ಹೊಂದಿರಲೇಬೇಕಿದೆ. ಒಂದು ವೇಳೆ ಮರೆತರೇ ಹಣ ಪೊಲೀಸರ ವಶಕ್ಕೆ ಹೋಗಲಿದೆ ಜೋಕೆ ಎನ್ನತ್ತಾರೆ ಚೆಕ್ ಪೋಸ್ಟ್ ಪೊಲೀಸ್ ಸಿಬ್ಬಂದಿ.
ಒಂದು ಕಡೆಯಿಂದ ಮತ್ತೊಂದು ಕಡೆಗೆ ಯಾವುದೇ ಉಡುಗೊರೆಗಳನ್ನು ದೊಡ್ಡ ಪ್ರಮಾಣದಲ್ಲಿ ಸಾಗಿಸುತ್ತಿದ್ದರೂ ಪೊಲೀಸರು ತಪಾಸಣೆ ನಡೆಸಲಿದ್ದಾರೆ. ಆ ಉಡುಗೊರೆ ಸಾಮಗ್ರಿ ಕೊಂಡುಕೊಂಡ ಬಗ್ಗೆ ರಶೀದಿ ನೀಡಬೇಕು. ಅದಕ್ಕೆ ಸರಕು ಸಾಗಣೆ ತೆರಿಗೆ (ಜಿಎಸ್‌ ಟಿ) ಪಾವತಿಸಿರುವ ಬಗ್ಗೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ.

lokesh

Recent Posts

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

3 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

4 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

4 hours ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

4 hours ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

4 hours ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

4 hours ago