BREAKING NEWS

ಅಕ್ರಮ ಹಣ, ಮದ್ಯ, ಸರಕುಗಳ ಸಾಗಟದ ಮೇಲೆ ಖಾಕಿ ಹದ್ದಿನ ಕಣ್ಣು

ಬೆಂಗಳೂರು-ರಾಜ್ಯ ಚುನಾವಣೆ ಸಮೀಪಿಸುತ್ತಿದ್ದು, ಕೆಲ ದಿನಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆಗಳಿವೆ. ಇದಕ್ಕೂ ಮೊದಲೇ ರಾಜ್ಯದಾದ್ಯಂತ ಅಕ್ರಮ ಹಣ, ಮದ್ಯ, ಸರಕುಗಳನ್ನು ಸಾಗಟದ ಮೇಲೆ ಹದ್ದಿನ ಕಣ್ಣಿಡಲಾಗಿದೆ.
ಚುನಾವಣೆ ಎಂದರೆ, ಅಕ್ರಮ ಹಣ, ಮದ್ಯ ಹಂಚಿಕೆ ಮಾಮೂಲಿ. ಜತೆಗೆ ಮತದಾರರನ್ನು ಓಲೈಸಿಕೊಳ್ಳಲು ಹಲವು ಮಾದರಿಯ ಗಿಫ್ಟ್‌ ಗಳನ್ನು ನೀಡಲಾಗುತ್ತದೆ. ಆದರೆ, ಈ ಬಾರಿ ಅಕ್ರಮ ನಗದು, ಮದ್ಯ, ಗಿಫ್ಟ್ ಹಂಚುವುದಕ್ಕೆ ಕಡಿವಾಣ ಹಾಕಲು ರಾಜ್ಯ ಚುನಾವಣಾ ಆಯೋಗವು ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಎಲ್ಲಾ ನಗರಗಳು, ಹೆದ್ದಾರಿಗಳು, ಸುಂಕ ಸಂಗ್ರಹ ಕೇಂದ್ರ (ಟೋಲ್) ಸೇರಿದಂತೆ ಹಲವು ಕಡೆಗಳಲ್ಲಿ ತಪಾಸಣಾ ಕೇಂದ್ರಗಳನ್ನು (ಚೆಕ್‌ ಪೋಸ್ಟ್‌) ಕಾರ್ಯಾರಂಭಿಸಲಾಗಿದೆ.
ರಾಜ್ಯಾದ್ಯಂತ ಸ್ಥಾಪಿಸಿರುವ ಚೆಕ್‌ ಪೋಸ್ಟ್‌ ಗಳಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಸೂಕ್ತ ದಾಖಲೆ ಇಲ್ಲದೇ ಹಣವನ್ನು ಸಾಗಣೆ ಮಾಡುತ್ತಿದ್ದರೆ ಹಣದ ಬಗ್ಗೆ ಮಾಹಿತಿ ಕೇಳುತ್ತಿದ್ದಾರೆ. ಒಂದು ವೇಳೆ ಹಣದ ದಾಖಲೆ ನೀಡದಿದ್ದರೆ ಕೂಡಲೇ ಹಣ ಮತ್ತು ಆ ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ.
ಚುನಾವಣಾ ನೀತಿ ಸಂಹಿತೆ ಜಾರಿಗೂ ಮುನ್ನವೇ ಬಿಗಿ ಭದ್ರತೆ ಇರುವುದರಿಂದ ಯಾವುದೇ ವ್ಯಕ್ತಿಯು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸ್ವಂತ ಹಣವನ್ನೂ ಕೂಡಾ ಸಾಗಿಸುವಾಗಿ ಎಚ್ಚರ ವಹಿಸಬೇಕಿದೆ. ಹಣದ ಜತೆ ಬ್ಯಾಂಕ್ ದಾಖಲೆ ಅಥವಾ ಹಣದ ಮೂಲದ ಬಗ್ಗೆ ದಾಖಲೆ, ರಶೀದಿ ಹೊಂದಿರಲೇಬೇಕಿದೆ. ಒಂದು ವೇಳೆ ಮರೆತರೇ ಹಣ ಪೊಲೀಸರ ವಶಕ್ಕೆ ಹೋಗಲಿದೆ ಜೋಕೆ ಎನ್ನತ್ತಾರೆ ಚೆಕ್ ಪೋಸ್ಟ್ ಪೊಲೀಸ್ ಸಿಬ್ಬಂದಿ.
ಒಂದು ಕಡೆಯಿಂದ ಮತ್ತೊಂದು ಕಡೆಗೆ ಯಾವುದೇ ಉಡುಗೊರೆಗಳನ್ನು ದೊಡ್ಡ ಪ್ರಮಾಣದಲ್ಲಿ ಸಾಗಿಸುತ್ತಿದ್ದರೂ ಪೊಲೀಸರು ತಪಾಸಣೆ ನಡೆಸಲಿದ್ದಾರೆ. ಆ ಉಡುಗೊರೆ ಸಾಮಗ್ರಿ ಕೊಂಡುಕೊಂಡ ಬಗ್ಗೆ ರಶೀದಿ ನೀಡಬೇಕು. ಅದಕ್ಕೆ ಸರಕು ಸಾಗಣೆ ತೆರಿಗೆ (ಜಿಎಸ್‌ ಟಿ) ಪಾವತಿಸಿರುವ ಬಗ್ಗೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ.

lokesh

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

1 hour ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

2 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

2 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

2 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

2 hours ago