BREAKING NEWS

ಕಂಚಮಳ್ಳಿ ಗೇಟ್ ಬಳಿ ಗೇಟ್‌ ಬಳಿ ಮತ್ತೆ ಚಿರತೆ ಪತ್ತೆ

ಮೈಸೂರು: ಮೈಸೂರು- ಮಾನಂದವಾಡಿ ಹೆದ್ದಾರಿಯ ಕಂಚಮಳ್ಳಿ ಗೇಟ್ ಬಳಿ 4 ನೇ ದಿನ ವೂ ಚಿರತೆ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ಹಂಪಾಪುರ ಅರಣ್ಯ ಪ್ರದೇಶ ಮತ್ತು ವಿಧಾನ ಪರಿಷತ್‌ ಸದಸ್ಯ ಸಿ.ಎನ್ ಮಂಜೇಗೌಡರ ಫಾರಂ‌ಹೌಸ್ ಸುತ್ತಮುತ್ತ ಚಿರತೆ ಪ್ರತ್ಯಕ್ಷವಾಗಿರುವುದು ಜನರಲ್ಲಿ ಭೀತಿ ಮೂಡಿಸಿದೆ.

ಮೂರ್ನಾಲ್ಕು ದಿನಗಳ ಹಿಂದೆಯೇ ಸ್ಥಳೀಯರು ಚಿರತೆಯನ್ನು ಕಂಡಿದ್ದರು. ಆದರೆ ಚಿರತೆ ಓಡಾಟದ ಯಾವುದೇ ದೃಶ್ಯಗಳು ಸಿಕ್ಕಿರಲಿಲ್ಲ. ಬುಧವಾರ ಬೆಳಿಗ್ಗೆ ಅಂಬ್ಯುಲೆನ್ಸ್ ಚಾಲಕ ರಾಜೇಶ್ ಎಂಬುವವರು ಚಿರತೆ ರಸ್ತೆ ದಾಟುತ್ತಿರುವ ದೃಶ್ಯವನ್ನು ಚಿತ್ರೀಕರಿಸಿದ್ದು ಚಿರತೆಯ ಇರುವಿಕೆಗೆ ಅಧಿಕೃತ ಸಾಕ್ಷ್ಯ ಸಿಕ್ಕಿದೆ.

ಕಳೆದ ನಾಲ್ಕು ದಿನಗಳಿಂದಲೂ ಚಿರತೆ ಕಂಚಮಳ್ಳಿ ಗೇಟ್ ಸ್ವಾಗತ ಕಮಾನು ಬಳಿ ಕಾಣಿಸಿಕೊಳ್ಳುತ್ತಿದೆ. ಇದರಿಂದ ಸ್ಥಳೀಯರು ಇನ್ನಷ್ಟು ಆತಂಕಕ್ಕೀಡಾಗಿದ್ದಾರೆ. ಇದೀಗ ಹಂಪಾಪುರ ಅರಣ್ಯ ಪ್ರದೇಶದಲ್ಲಿ ಬೋನು ಇಡುವ ಮೂಲಕ ಚಿರತೆ ಸೆರೆಗೆ ಅರಣ್ಯ ಅಧಿಕಾರಿಗಳು ಮುಂದಾಗಿದ್ದಾರೆ. ಕಂಚಮಳ್ಳಿ, ಚಿಕ್ಕನಂದಿ ಹಿರೇನಂದಿ ಭಾಗದಲ್ಲಿ ಚಿರತೆ ಸೆರೆ ಕಾರ್ಯಾಚರಣೆ ಮುಂದುವರೆದಿದೆ.

” ನನ್ನ ಫಾರಂ ಹೌಸ್ ಬಳಿ ಕಳೆದ 3 ದಿನದಿಂದಲೂ ಚಿರತೆ ಸಂಚರಿಸುತ್ತಿದ್ದು ಈಗಾಗಲೇ ಅರಣ್ಯ ಇಲಾಖೆಯವರು ಬೋನು ಇಟ್ಟು ಚಿರತೆ ಹಿಡಿಯುವ ಪ್ರಯತ್ನದಲ್ಲಿದ್ದಾರೆ. ಹಾಗಾಗಿ ಸಾರ್ವಜನಿಕರು ಆದಷ್ಟು ಜಾಗರೂಕತೆಯಿಂದ ಓಡಾಡಬೇಕು.ಜೊತೆಗೆ ಚಿರತೆ ಹಿಡಿಯುವ ತನಕ ರಾತ್ರಿ ವೇಳೆ ಸಂಚರಿಸದೇ ಇರುವುದು ಉತ್ತಮ – ಎಂದು ಎಂಎಲ್‌ ಸಿ ಸಿ.ಎನ್ ಮಂಜೇಗೌಡ ಜನರಿಗೆ ಮನವಿ ಮಾಡಿದ್ದಾರೆ.

” ನಾವು ಚಿರತೆ ಕಂಡ ಮೊದಲ ದಿನವೇ ಬೋನು ಇಟ್ಟು ಸೆರೆ ಹಿಡಿಯುವ ಕಾರ್ಯಚರಣೆ ಆರಂಭಿಸಿದ್ದೇವೆ. ಆದರೆ ನಮ್ಮ ಸಿಬ್ಬಂದಿ ಕಣ್ಣಿಗೆ ಚಿರತೆ ಕಾಣಿಸಿಲ್ಲ. ರಸ್ತೆಯಲ್ಲಿ ಓಡಾಡುವವರಷ್ಟೇ ಚಿರತೆ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾರ್ಯಚರಣೆ ಇನ್ನಷ್ಟು ಚುರುಕುಗೊಳಿಸಿ ಚಿರತೆ ಸೆರೆಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹಂಪಾಪುರ ಅರಣ್ಯ ಆರ್ ಎಫ್ ಓ ನೀತಾ ಡಿ ತಿಳಿಸಿದ್ದಾರೆ.

andolanait

Recent Posts

ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…

2 hours ago

ಯುವಜನತೆಯು ಜ್ಞಾನ ಕೌಶಲ್ಯಗಳನ್ನು ಬೆಳೆಸಿಕೊಳ್ಳಿ ಮತ್ತು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…

2 hours ago

ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷ ಕಾಳಜಿ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ…

2 hours ago

ಕೆಲಸ ಅಂದರೆ ಬರೀ ವರ್ಗಾವಣೆ ಮಾಡಿಸೋದಾ?: ಯತೀಂದ್ರ ಸಿದ್ದರಾಮಯ್ಯಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ತಿರುಗೇಟು

ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್‌ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ…

2 hours ago

ಬಿಜೆಪಿ ಶಾಸಕ ಭೈರತಿ ಬಸವರಾಜು ಜೈಲುಪಾಲು: ಫೆ.26ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್‌…

3 hours ago

ವಿಧಾನಸೌಧದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಂತಿದೆ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

4 hours ago