BREAKING NEWS

ಕಂಚಮಳ್ಳಿ ಗೇಟ್ ಬಳಿ ಗೇಟ್‌ ಬಳಿ ಮತ್ತೆ ಚಿರತೆ ಪತ್ತೆ

ಮೈಸೂರು: ಮೈಸೂರು- ಮಾನಂದವಾಡಿ ಹೆದ್ದಾರಿಯ ಕಂಚಮಳ್ಳಿ ಗೇಟ್ ಬಳಿ 4 ನೇ ದಿನ ವೂ ಚಿರತೆ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ಹಂಪಾಪುರ ಅರಣ್ಯ ಪ್ರದೇಶ ಮತ್ತು ವಿಧಾನ ಪರಿಷತ್‌ ಸದಸ್ಯ ಸಿ.ಎನ್ ಮಂಜೇಗೌಡರ ಫಾರಂ‌ಹೌಸ್ ಸುತ್ತಮುತ್ತ ಚಿರತೆ ಪ್ರತ್ಯಕ್ಷವಾಗಿರುವುದು ಜನರಲ್ಲಿ ಭೀತಿ ಮೂಡಿಸಿದೆ.

ಮೂರ್ನಾಲ್ಕು ದಿನಗಳ ಹಿಂದೆಯೇ ಸ್ಥಳೀಯರು ಚಿರತೆಯನ್ನು ಕಂಡಿದ್ದರು. ಆದರೆ ಚಿರತೆ ಓಡಾಟದ ಯಾವುದೇ ದೃಶ್ಯಗಳು ಸಿಕ್ಕಿರಲಿಲ್ಲ. ಬುಧವಾರ ಬೆಳಿಗ್ಗೆ ಅಂಬ್ಯುಲೆನ್ಸ್ ಚಾಲಕ ರಾಜೇಶ್ ಎಂಬುವವರು ಚಿರತೆ ರಸ್ತೆ ದಾಟುತ್ತಿರುವ ದೃಶ್ಯವನ್ನು ಚಿತ್ರೀಕರಿಸಿದ್ದು ಚಿರತೆಯ ಇರುವಿಕೆಗೆ ಅಧಿಕೃತ ಸಾಕ್ಷ್ಯ ಸಿಕ್ಕಿದೆ.

ಕಳೆದ ನಾಲ್ಕು ದಿನಗಳಿಂದಲೂ ಚಿರತೆ ಕಂಚಮಳ್ಳಿ ಗೇಟ್ ಸ್ವಾಗತ ಕಮಾನು ಬಳಿ ಕಾಣಿಸಿಕೊಳ್ಳುತ್ತಿದೆ. ಇದರಿಂದ ಸ್ಥಳೀಯರು ಇನ್ನಷ್ಟು ಆತಂಕಕ್ಕೀಡಾಗಿದ್ದಾರೆ. ಇದೀಗ ಹಂಪಾಪುರ ಅರಣ್ಯ ಪ್ರದೇಶದಲ್ಲಿ ಬೋನು ಇಡುವ ಮೂಲಕ ಚಿರತೆ ಸೆರೆಗೆ ಅರಣ್ಯ ಅಧಿಕಾರಿಗಳು ಮುಂದಾಗಿದ್ದಾರೆ. ಕಂಚಮಳ್ಳಿ, ಚಿಕ್ಕನಂದಿ ಹಿರೇನಂದಿ ಭಾಗದಲ್ಲಿ ಚಿರತೆ ಸೆರೆ ಕಾರ್ಯಾಚರಣೆ ಮುಂದುವರೆದಿದೆ.

” ನನ್ನ ಫಾರಂ ಹೌಸ್ ಬಳಿ ಕಳೆದ 3 ದಿನದಿಂದಲೂ ಚಿರತೆ ಸಂಚರಿಸುತ್ತಿದ್ದು ಈಗಾಗಲೇ ಅರಣ್ಯ ಇಲಾಖೆಯವರು ಬೋನು ಇಟ್ಟು ಚಿರತೆ ಹಿಡಿಯುವ ಪ್ರಯತ್ನದಲ್ಲಿದ್ದಾರೆ. ಹಾಗಾಗಿ ಸಾರ್ವಜನಿಕರು ಆದಷ್ಟು ಜಾಗರೂಕತೆಯಿಂದ ಓಡಾಡಬೇಕು.ಜೊತೆಗೆ ಚಿರತೆ ಹಿಡಿಯುವ ತನಕ ರಾತ್ರಿ ವೇಳೆ ಸಂಚರಿಸದೇ ಇರುವುದು ಉತ್ತಮ – ಎಂದು ಎಂಎಲ್‌ ಸಿ ಸಿ.ಎನ್ ಮಂಜೇಗೌಡ ಜನರಿಗೆ ಮನವಿ ಮಾಡಿದ್ದಾರೆ.

” ನಾವು ಚಿರತೆ ಕಂಡ ಮೊದಲ ದಿನವೇ ಬೋನು ಇಟ್ಟು ಸೆರೆ ಹಿಡಿಯುವ ಕಾರ್ಯಚರಣೆ ಆರಂಭಿಸಿದ್ದೇವೆ. ಆದರೆ ನಮ್ಮ ಸಿಬ್ಬಂದಿ ಕಣ್ಣಿಗೆ ಚಿರತೆ ಕಾಣಿಸಿಲ್ಲ. ರಸ್ತೆಯಲ್ಲಿ ಓಡಾಡುವವರಷ್ಟೇ ಚಿರತೆ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾರ್ಯಚರಣೆ ಇನ್ನಷ್ಟು ಚುರುಕುಗೊಳಿಸಿ ಚಿರತೆ ಸೆರೆಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹಂಪಾಪುರ ಅರಣ್ಯ ಆರ್ ಎಫ್ ಓ ನೀತಾ ಡಿ ತಿಳಿಸಿದ್ದಾರೆ.

andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

4 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

5 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

5 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

5 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

5 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

5 hours ago