BREAKING NEWS

ಲಂಚ ಕೇಳಿದ ಪೊಲೀಸರ ಚಳಿ ಬಿಡಿಸಲು ಟವೆಲ್‌ ಸುತ್ತಿಕೊಂಡು ಠಾಣೆಗೆ ಬಂದ ವ್ಯಕ್ತಿ!

ರಾಯಪುರ : ಕಳ್ಳತನದ ಆರೋಪದಡಿ ಪೊಲೀಸರು ವಶಕ್ಕೆ ಪಡೆದಿದ್ದ ಮಗನನ್ನು ಬಿಡಿಸಿಕೊಂಡು ಬರಲು ತಂದೆ ಟವೆಲ್‌ ಕಟ್ಟಿಕೊಂಡು ಠಾಣೆಗೆ ಬಂದು, ನಡು ರಸ್ತೆಯಲ್ಲಿ ರಂಪಾಟ ನಡೆಸಿದ ವಿಚಿತ್ರ ಘಟನೆ ಛತ್ತೀಸ್‌ಗಢದ ಕೊರ್ಬಾದಲ್ಲಿ ನಡೆದಿದೆ. ವ್ಯಕ್ತಿಯ ಈ ವಿಚಿತ್ರ ವರ್ತನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.
ಕಳ್ಳತನ ಪ್ರಕರಣದಲ್ಲಿ 14 ವರ್ಷದ ಬಾಲಕನನ್ನು ವಶಕ್ಕೆ ಪಡೆದು ಪೊಲೀಸ್‌ ಠಾಣೆಯಲ್ಲಿ ಕೂಡಿಹಾಕಿದ್ದರು. ಇದರಿಂದ ರೊಚ್ಚಿಗೆದ್ದ ಬಾಲಕನ ತಂದೆ ರಾಜ್‌ ಕುಮಾರ್‌ ನೇತಮ್‌ ಬರೀ ಟವೆಲ್‌ ಕಟ್ಟಿಕೊಂಡು ಕಾರಿನಲ್ಲಿ ಠಾಣೆಗೆ ಬಂದರು. ಕಾರನ್ನು ರಸ್ತೆ ಮಧ್ಯೆ ನಿಲ್ಲಿಸಿ, ಠಾಣೆಗೆ ನಡೆದುಕೊಂಡು ಹೋಗುತ್ತಿದ್ದರು. ನೋಡ ನೋಡುತ್ತಿದ್ದಂತೆಯೇ ಜನರು ಜಮಾಯಿಸಿದರು.
ರಾಜ್‌ ಕುಮಾರ್‌ ನೇತಮ್‌ ಟವೆಲ್‌ ಕಟ್ಟಿಕೊಂಡು ಬರುತ್ತಿದ್ದನ್ನು ಕಂಡು ಮುಜುಗರಕ್ಕೊಳಗಾದ ಸಿಎಸ್‌ಇಬಿ ಪೊಲೀಸ್‌ ಠಾಣಾಧಿಕಾರಿಗಳು, ಅವರನ್ನು ಮನವೊಲಿಸುವ ಪ್ರಯತ್ನ ಮಾಡಿದರು. ಆದರೆ ಮಗನನ್ನು ಬಿಡುಗಡೆ ಮಾಡುವವರೆಗೂ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದರು.

ಈ ವೇಳೆ ಅವರು, ”ತಮ್ಮ ಮಗ ಅಪ್ರಾಪ್ತ ವಯಸ್ಸಿನವರಾಗಿದ್ದರೂ ವಶಕ್ಕೆ ಪಡೆದು ಠಾಣೆಯಲ್ಲಿ ಕೂಡಿ ಹಾಕಲಾಗಿದೆ. ಅಲ್ಲದೇ ಬಿಡುಗಡೆಗೆ ಪೊಲೀಸ್‌ ಅಧಿಕಾರಿಗಳು 30 ಸಾವಿರ ರೂ. ಲಂಚ ಕೇಳಿದ್ದರು. ಹಣ ತರುವವರೆಗೂ ಮಗನನ್ನು ಥಳಿಸುತ್ತಲೇ ಇರುತ್ತೇವೆ ಎಂದು ದೂರವಾಣಿಯಲ್ಲಿ ಬೆದರಿಕೆ ಹಾಕಿದ್ದರು,” ಎಂದು ಆರೋಪಿಸಿ ಗಲಾಟೆ ನಡೆಸಿದರು.
ಮಗ ವಾಪಸ್ ಮನೆಗೆ ಬರಬೇಕು ಎಂದರೆ, ಆದಷ್ಟು ಬೇಗನೇ ಹಣ ಹೊಂದಿಸಿ ಠಾಣೆಗೆ ತಂದು ಕೊಡಬೇಕು ಎಂದು ಪೊಲೀಸರು ಒತ್ತಾಯಿಸಿದ್ದಾರೆ. ಆತ ಇನ್ನೂ ಚಿಕ್ಕ ಹುಡುಗ ಹೀಗಿರುವಾಗ ಅಕ್ರಮವಾಗಿ ಬಂಧಿಸಿ, ಥಳಿಸುತ್ತಿದ್ದಾರೆ ಎಂದು ರಾಜ್ ಕುಮಾರ್ ಅವರು ಆರೋಪಿಸಿದರು.
ಏಪ್ರಿಲ್ 2ರ ಭಾನುವಾರ ಈ ಘಟನೆ ನಡೆದಿದೆ. ಆದರೆ ಪಟ್ಟಣ ಇನ್‌ಸ್ಪೆಕ್ಟರ್ ವಿವೇಕ್ ಶರ್ಮಾ ಅವರು ನೀಡಿರುವ ಹೇಳಿಕೆ ತದ್ವಿರುದ್ಧವಾಗಿದೆ. ಕಳವು ಪ್ರಕರಣದಲ್ಲಿ ಭಾಗಿಯಾದ ಕೆಲವು ಹುಡುಗರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದರು. ಆದರೆ ರಾಜ್ ಕುಮಾರ್ ಅವರು ಮಾತನಾಡುತ್ತಿರುವ ಹುಡುಗ ಅವರಲ್ಲಿ ಸೇರಿಲ್ಲ. ರಸ್ತೆಯ ಮಧ್ಯದಲ್ಲಿ ನಿಂತು ಗದ್ದಲ ಸೃಷ್ಟಿಸುವ ಬದಲು ಅವರು ನೇರವಾಗಿ ಪೊಲೀಸ್ ಠಾಣೆಗೆ ಭೇಟಿ ನೀಡಲಿ ಎಂದು ಮಾಧ್ಯಮಗಳ ಮುಂದೆ ವಿವೇಕ್ ಶರ್ಮಾ ಹೇಳಿದ್ದಾರೆ. ಈ ಕುರಿತು ಹಿರಿಯ ಪೊಲೀಸ್‌ ಅಧಿಕಾರಿಗಳು ತನಿಖೆ ನಡೆಸುವ ಭರವಸೆ ನೀಡಿದ್ದಾರೆ.

lokesh

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago