BREAKING NEWS

ಲಂಚ ಕೇಳಿದ ಪೊಲೀಸರ ಚಳಿ ಬಿಡಿಸಲು ಟವೆಲ್‌ ಸುತ್ತಿಕೊಂಡು ಠಾಣೆಗೆ ಬಂದ ವ್ಯಕ್ತಿ!

ರಾಯಪುರ : ಕಳ್ಳತನದ ಆರೋಪದಡಿ ಪೊಲೀಸರು ವಶಕ್ಕೆ ಪಡೆದಿದ್ದ ಮಗನನ್ನು ಬಿಡಿಸಿಕೊಂಡು ಬರಲು ತಂದೆ ಟವೆಲ್‌ ಕಟ್ಟಿಕೊಂಡು ಠಾಣೆಗೆ ಬಂದು, ನಡು ರಸ್ತೆಯಲ್ಲಿ ರಂಪಾಟ ನಡೆಸಿದ ವಿಚಿತ್ರ ಘಟನೆ ಛತ್ತೀಸ್‌ಗಢದ ಕೊರ್ಬಾದಲ್ಲಿ ನಡೆದಿದೆ. ವ್ಯಕ್ತಿಯ ಈ ವಿಚಿತ್ರ ವರ್ತನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.
ಕಳ್ಳತನ ಪ್ರಕರಣದಲ್ಲಿ 14 ವರ್ಷದ ಬಾಲಕನನ್ನು ವಶಕ್ಕೆ ಪಡೆದು ಪೊಲೀಸ್‌ ಠಾಣೆಯಲ್ಲಿ ಕೂಡಿಹಾಕಿದ್ದರು. ಇದರಿಂದ ರೊಚ್ಚಿಗೆದ್ದ ಬಾಲಕನ ತಂದೆ ರಾಜ್‌ ಕುಮಾರ್‌ ನೇತಮ್‌ ಬರೀ ಟವೆಲ್‌ ಕಟ್ಟಿಕೊಂಡು ಕಾರಿನಲ್ಲಿ ಠಾಣೆಗೆ ಬಂದರು. ಕಾರನ್ನು ರಸ್ತೆ ಮಧ್ಯೆ ನಿಲ್ಲಿಸಿ, ಠಾಣೆಗೆ ನಡೆದುಕೊಂಡು ಹೋಗುತ್ತಿದ್ದರು. ನೋಡ ನೋಡುತ್ತಿದ್ದಂತೆಯೇ ಜನರು ಜಮಾಯಿಸಿದರು.
ರಾಜ್‌ ಕುಮಾರ್‌ ನೇತಮ್‌ ಟವೆಲ್‌ ಕಟ್ಟಿಕೊಂಡು ಬರುತ್ತಿದ್ದನ್ನು ಕಂಡು ಮುಜುಗರಕ್ಕೊಳಗಾದ ಸಿಎಸ್‌ಇಬಿ ಪೊಲೀಸ್‌ ಠಾಣಾಧಿಕಾರಿಗಳು, ಅವರನ್ನು ಮನವೊಲಿಸುವ ಪ್ರಯತ್ನ ಮಾಡಿದರು. ಆದರೆ ಮಗನನ್ನು ಬಿಡುಗಡೆ ಮಾಡುವವರೆಗೂ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದರು.

ಈ ವೇಳೆ ಅವರು, ”ತಮ್ಮ ಮಗ ಅಪ್ರಾಪ್ತ ವಯಸ್ಸಿನವರಾಗಿದ್ದರೂ ವಶಕ್ಕೆ ಪಡೆದು ಠಾಣೆಯಲ್ಲಿ ಕೂಡಿ ಹಾಕಲಾಗಿದೆ. ಅಲ್ಲದೇ ಬಿಡುಗಡೆಗೆ ಪೊಲೀಸ್‌ ಅಧಿಕಾರಿಗಳು 30 ಸಾವಿರ ರೂ. ಲಂಚ ಕೇಳಿದ್ದರು. ಹಣ ತರುವವರೆಗೂ ಮಗನನ್ನು ಥಳಿಸುತ್ತಲೇ ಇರುತ್ತೇವೆ ಎಂದು ದೂರವಾಣಿಯಲ್ಲಿ ಬೆದರಿಕೆ ಹಾಕಿದ್ದರು,” ಎಂದು ಆರೋಪಿಸಿ ಗಲಾಟೆ ನಡೆಸಿದರು.
ಮಗ ವಾಪಸ್ ಮನೆಗೆ ಬರಬೇಕು ಎಂದರೆ, ಆದಷ್ಟು ಬೇಗನೇ ಹಣ ಹೊಂದಿಸಿ ಠಾಣೆಗೆ ತಂದು ಕೊಡಬೇಕು ಎಂದು ಪೊಲೀಸರು ಒತ್ತಾಯಿಸಿದ್ದಾರೆ. ಆತ ಇನ್ನೂ ಚಿಕ್ಕ ಹುಡುಗ ಹೀಗಿರುವಾಗ ಅಕ್ರಮವಾಗಿ ಬಂಧಿಸಿ, ಥಳಿಸುತ್ತಿದ್ದಾರೆ ಎಂದು ರಾಜ್ ಕುಮಾರ್ ಅವರು ಆರೋಪಿಸಿದರು.
ಏಪ್ರಿಲ್ 2ರ ಭಾನುವಾರ ಈ ಘಟನೆ ನಡೆದಿದೆ. ಆದರೆ ಪಟ್ಟಣ ಇನ್‌ಸ್ಪೆಕ್ಟರ್ ವಿವೇಕ್ ಶರ್ಮಾ ಅವರು ನೀಡಿರುವ ಹೇಳಿಕೆ ತದ್ವಿರುದ್ಧವಾಗಿದೆ. ಕಳವು ಪ್ರಕರಣದಲ್ಲಿ ಭಾಗಿಯಾದ ಕೆಲವು ಹುಡುಗರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದರು. ಆದರೆ ರಾಜ್ ಕುಮಾರ್ ಅವರು ಮಾತನಾಡುತ್ತಿರುವ ಹುಡುಗ ಅವರಲ್ಲಿ ಸೇರಿಲ್ಲ. ರಸ್ತೆಯ ಮಧ್ಯದಲ್ಲಿ ನಿಂತು ಗದ್ದಲ ಸೃಷ್ಟಿಸುವ ಬದಲು ಅವರು ನೇರವಾಗಿ ಪೊಲೀಸ್ ಠಾಣೆಗೆ ಭೇಟಿ ನೀಡಲಿ ಎಂದು ಮಾಧ್ಯಮಗಳ ಮುಂದೆ ವಿವೇಕ್ ಶರ್ಮಾ ಹೇಳಿದ್ದಾರೆ. ಈ ಕುರಿತು ಹಿರಿಯ ಪೊಲೀಸ್‌ ಅಧಿಕಾರಿಗಳು ತನಿಖೆ ನಡೆಸುವ ಭರವಸೆ ನೀಡಿದ್ದಾರೆ.

lokesh

Recent Posts

ಮನ್‌ಮುಲ್ ಅಧ್ಯಕ್ಷರಾಗಿ ಹರೀಶ್‌ಬಾಬು ಆಯ್ಕೆ ಬಹುತೇಕ ಖಚಿತ

ಬಿ.ಟಿ. ಮೋಹನ್ ಕುಮಾರ್ ಯು.ಸಿ.ಶಿವಕುಮಾರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ  ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್)…

5 mins ago

ಅಂದು ಮಿನಿ ವಿಧಾನಸೌಧ, ಇಂದು ಪ್ರಮೋದಾ ದೇವಿ ಒಡೆಯರ ಆಸ್ತಿ?

ಎಸ್.ಎಸ್.ಭಟ್ ನಂಜನಗೂಡು ಜನತೆಯ ಕುತೂಹಲಕ್ಕೆ ಕಾರಣವಾಗಿರುವ ಫಲಕ ನಂಜನಗೂಡು: ೧೯೭೦- ೮೦ರ ದಶಕಗಳಲ್ಲಿ ಮಿನಿ ವಿಧಾನಸೌಧವಿದ್ದ ಜಾಗ ಇಂದು ಪ್ರಮೋದಾದೇವ…

9 mins ago

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

21 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

21 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

21 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

21 hours ago