BREAKING NEWS

ಲಂಚ ಕೇಳಿದ ಪೊಲೀಸರ ಚಳಿ ಬಿಡಿಸಲು ಟವೆಲ್‌ ಸುತ್ತಿಕೊಂಡು ಠಾಣೆಗೆ ಬಂದ ವ್ಯಕ್ತಿ!

ರಾಯಪುರ : ಕಳ್ಳತನದ ಆರೋಪದಡಿ ಪೊಲೀಸರು ವಶಕ್ಕೆ ಪಡೆದಿದ್ದ ಮಗನನ್ನು ಬಿಡಿಸಿಕೊಂಡು ಬರಲು ತಂದೆ ಟವೆಲ್‌ ಕಟ್ಟಿಕೊಂಡು ಠಾಣೆಗೆ ಬಂದು, ನಡು ರಸ್ತೆಯಲ್ಲಿ ರಂಪಾಟ ನಡೆಸಿದ ವಿಚಿತ್ರ ಘಟನೆ ಛತ್ತೀಸ್‌ಗಢದ ಕೊರ್ಬಾದಲ್ಲಿ ನಡೆದಿದೆ. ವ್ಯಕ್ತಿಯ ಈ ವಿಚಿತ್ರ ವರ್ತನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.
ಕಳ್ಳತನ ಪ್ರಕರಣದಲ್ಲಿ 14 ವರ್ಷದ ಬಾಲಕನನ್ನು ವಶಕ್ಕೆ ಪಡೆದು ಪೊಲೀಸ್‌ ಠಾಣೆಯಲ್ಲಿ ಕೂಡಿಹಾಕಿದ್ದರು. ಇದರಿಂದ ರೊಚ್ಚಿಗೆದ್ದ ಬಾಲಕನ ತಂದೆ ರಾಜ್‌ ಕುಮಾರ್‌ ನೇತಮ್‌ ಬರೀ ಟವೆಲ್‌ ಕಟ್ಟಿಕೊಂಡು ಕಾರಿನಲ್ಲಿ ಠಾಣೆಗೆ ಬಂದರು. ಕಾರನ್ನು ರಸ್ತೆ ಮಧ್ಯೆ ನಿಲ್ಲಿಸಿ, ಠಾಣೆಗೆ ನಡೆದುಕೊಂಡು ಹೋಗುತ್ತಿದ್ದರು. ನೋಡ ನೋಡುತ್ತಿದ್ದಂತೆಯೇ ಜನರು ಜಮಾಯಿಸಿದರು.
ರಾಜ್‌ ಕುಮಾರ್‌ ನೇತಮ್‌ ಟವೆಲ್‌ ಕಟ್ಟಿಕೊಂಡು ಬರುತ್ತಿದ್ದನ್ನು ಕಂಡು ಮುಜುಗರಕ್ಕೊಳಗಾದ ಸಿಎಸ್‌ಇಬಿ ಪೊಲೀಸ್‌ ಠಾಣಾಧಿಕಾರಿಗಳು, ಅವರನ್ನು ಮನವೊಲಿಸುವ ಪ್ರಯತ್ನ ಮಾಡಿದರು. ಆದರೆ ಮಗನನ್ನು ಬಿಡುಗಡೆ ಮಾಡುವವರೆಗೂ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದರು.

ಈ ವೇಳೆ ಅವರು, ”ತಮ್ಮ ಮಗ ಅಪ್ರಾಪ್ತ ವಯಸ್ಸಿನವರಾಗಿದ್ದರೂ ವಶಕ್ಕೆ ಪಡೆದು ಠಾಣೆಯಲ್ಲಿ ಕೂಡಿ ಹಾಕಲಾಗಿದೆ. ಅಲ್ಲದೇ ಬಿಡುಗಡೆಗೆ ಪೊಲೀಸ್‌ ಅಧಿಕಾರಿಗಳು 30 ಸಾವಿರ ರೂ. ಲಂಚ ಕೇಳಿದ್ದರು. ಹಣ ತರುವವರೆಗೂ ಮಗನನ್ನು ಥಳಿಸುತ್ತಲೇ ಇರುತ್ತೇವೆ ಎಂದು ದೂರವಾಣಿಯಲ್ಲಿ ಬೆದರಿಕೆ ಹಾಕಿದ್ದರು,” ಎಂದು ಆರೋಪಿಸಿ ಗಲಾಟೆ ನಡೆಸಿದರು.
ಮಗ ವಾಪಸ್ ಮನೆಗೆ ಬರಬೇಕು ಎಂದರೆ, ಆದಷ್ಟು ಬೇಗನೇ ಹಣ ಹೊಂದಿಸಿ ಠಾಣೆಗೆ ತಂದು ಕೊಡಬೇಕು ಎಂದು ಪೊಲೀಸರು ಒತ್ತಾಯಿಸಿದ್ದಾರೆ. ಆತ ಇನ್ನೂ ಚಿಕ್ಕ ಹುಡುಗ ಹೀಗಿರುವಾಗ ಅಕ್ರಮವಾಗಿ ಬಂಧಿಸಿ, ಥಳಿಸುತ್ತಿದ್ದಾರೆ ಎಂದು ರಾಜ್ ಕುಮಾರ್ ಅವರು ಆರೋಪಿಸಿದರು.
ಏಪ್ರಿಲ್ 2ರ ಭಾನುವಾರ ಈ ಘಟನೆ ನಡೆದಿದೆ. ಆದರೆ ಪಟ್ಟಣ ಇನ್‌ಸ್ಪೆಕ್ಟರ್ ವಿವೇಕ್ ಶರ್ಮಾ ಅವರು ನೀಡಿರುವ ಹೇಳಿಕೆ ತದ್ವಿರುದ್ಧವಾಗಿದೆ. ಕಳವು ಪ್ರಕರಣದಲ್ಲಿ ಭಾಗಿಯಾದ ಕೆಲವು ಹುಡುಗರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದರು. ಆದರೆ ರಾಜ್ ಕುಮಾರ್ ಅವರು ಮಾತನಾಡುತ್ತಿರುವ ಹುಡುಗ ಅವರಲ್ಲಿ ಸೇರಿಲ್ಲ. ರಸ್ತೆಯ ಮಧ್ಯದಲ್ಲಿ ನಿಂತು ಗದ್ದಲ ಸೃಷ್ಟಿಸುವ ಬದಲು ಅವರು ನೇರವಾಗಿ ಪೊಲೀಸ್ ಠಾಣೆಗೆ ಭೇಟಿ ನೀಡಲಿ ಎಂದು ಮಾಧ್ಯಮಗಳ ಮುಂದೆ ವಿವೇಕ್ ಶರ್ಮಾ ಹೇಳಿದ್ದಾರೆ. ಈ ಕುರಿತು ಹಿರಿಯ ಪೊಲೀಸ್‌ ಅಧಿಕಾರಿಗಳು ತನಿಖೆ ನಡೆಸುವ ಭರವಸೆ ನೀಡಿದ್ದಾರೆ.

lokesh

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

9 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

14 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

18 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

18 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

18 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

21 hours ago