ಸಿದ್ದಾಪುರ : ಮಹಿಳೆಯೊಬ್ಬರು ಮಂಗಳವಾರ ಆಟೋದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ.
ಸಿದ್ದಾಪುರ ಸಮೀಪದ ನಡಿಕೇರಿಯಂಡ ತೋಟದ ಕಾರ್ಮಿಕ ಪ್ರಶಾಂತ್ ಎಂಬವರ ಪತ್ನಿ ತುಳಸಿ (28) ಎಂಬವರೆ ಆಟೋದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ.
ಪ್ರಶಾಂತ್ ಅವರ ಸಂಬಂಧಿಯೊಬ್ಬರು ಸಾವನ್ನಪ್ಪಿದ್ದರಿಂದ ಪಕ್ಕದ ಮನೆಯ ಇಬ್ಬರು ಮಹಿಳೆಯರಿಗೆ ತನ್ನ ಗರ್ಭಿಣಿ ಪತ್ನಿಯನ್ನು ನೋಡಿಕೊಳ್ಳುವಂತೆ ಹೇಳಿ ಮಂಗಳವಾರ ಬೆಳಿಗ್ಗೆ ಪ್ರಶಾಂತ್ ಸಂಬಂಧಿ ಮನೆಗೆ ತೆರಳಿದ್ದರು. ಪ್ರಶಾಂತ್ ಮನೆಯಿಂದ ತೆರಳಿದ ಕೆಲವು ಸಮಯಗಳ ನಂತರ ತುಳಸಿಗೆ ಹೆರಿಗೆ ನೋವು ಪ್ರಾರಂಭವಾಗಿದೆ. ಕೂಡಲೇ ಗರ್ಭಿಣಿಯ ಜೊತೆಗಿದ್ದವರು ಆಟೋ ಮೂಲಕ ಸಿದ್ದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲು ಮುಂದಾಗುತ್ತಿದ್ದಂತೆ ತುಳಸಿ ಆಟೋದಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇದೀಗ ತಾಯಿ ಮತ್ತು ಮಗು ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆರೋಗ್ಯವಾಗಿದ್ದಾರೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…