ಮುಂಬೈ: ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ಮಣಿಪುರ ಬಿಜೆಪಿ ಸರ್ಕಾರಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಶಿವಸೇನೆ-ಉದ್ಧವ್ ಬಾಳಾಸಾಹೇಬ್ ಠಾಕ್ರೆ, ‘ಮಣಿಪುರ ಫೈಲ್ಸ್’ ಹೆಸರಿನಲ್ಲಿ ಚಲನಚಿತ್ರ ನಿರ್ಮಿಸಬೇಕು ಎಂದು ಶನಿವಾರ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ವಿರುದ್ಧ ವಾಗ್ದಾಳಿ ನಡೆಸಿದ ಸೇನಾ-ಯುಬಿಟಿ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ, ಈಶಾನ್ಯ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರ ಮತ್ತು ದೌರ್ಜನ್ಯಗಳು ಕಾಶ್ಮೀರಕ್ಕಿಂತ ಕೆಟ್ಟದಾಗಿವೆ ಎಂದು ಹೇಳಿದೆ.
ಮೇ 4 ರಂದು ಚಿತ್ರೀಕರಿಸಿದ ವೀಡಿಯೋ ಬುಧವಾರ ಹೊರಬಿದ್ದಿದ್ದು, ಮಣಿಪುರದಲ್ಲಿ ಒಂದು ಸಮುದಾಯದ ಇಬ್ಬರು ಮಹಿಳೆಯರನ್ನು ಇತರ ಸಮುದಾಯದ ಕೆಲವು ಪುರುಷರು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಇತ್ತೀಚಿನ ದಿನಗಳಲ್ಲಿ, ತಾಷ್ಕೆಂಟ್ ಫೈಲ್ಸ್, ದಿ ಕೇರಳ ಸ್ಟೋರಿ ಮತ್ತು ದಿ ಕಾಶ್ಮೀರ್ ಫೈಲ್ಸ್ನಂತಹ ಚಲನಚಿತ್ರಗಳನ್ನು ನಿರ್ಮಿಸಲಾಗಿದೆ. ಅದೇ ಜನರು ಈಗ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತು ‘ಮಣಿಪುರ ಫೈಲ್ಸ್’ ಎಂಬ ಚಲನಚಿತ್ರವನ್ನು ಮಾಡಬೇಕು ಎಂದು ಸಾಮ್ನಾ ಹೇಳಿದೆ.
ಮಣಿಪುರದಲ್ಲಿ ಬಿಜೆಪಿಯೇತರ ಸರ್ಕಾರ ಇದ್ದಿದ್ದರೆ ಇಷ್ಟೊತ್ತಿಗೆ ವಜಾ ಮಾಡಲಾಗುತ್ತಿತ್ತು ಎಂದ ಶಿವಸೇನೆ, ಪ್ರಧಾನಿ ಮೋದಿಗೆ ಮಣಿಪುರ ರಾಜಕೀಯವಾಗಿ ಅಮುಖ್ಯವಾಗಿದ್ದು, ಅಲ್ಲಿನ ಪರಿಸ್ಥಿತಿಯನ್ನು ನಿರ್ಲಕ್ಷಿಸುತ್ತಿರುವುದಕ್ಕೆ ಕಾರಣ ಎಂದು ಅದು ಆರೋಪಿಸಿದೆ.
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…
ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ…
ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ…
ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳಗಾವಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು…
ಬೆಂಗಳೂರು,- ನಿರಂತರ ಏರಿಕೆಯಿಂದಾಗಿ ಚಿನ್ನ, ಬೆಳ್ಳಿ ಬೆಲೆಯು ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. ಇಂದು ಪ್ರತೀ ಗ್ರಾಂ ಚಿನ್ನಕ್ಕೆ (24 ಕ್ಯಾರೆಟ್)…
ಅಮೇರಿಕಾ: ಯುವ ರೋಗಿಯನ್ನು ಹಾಗೂ ಇತರ ಏಳು ಜನರನ್ನು ಸಾಗಿಸುತ್ತಿದ್ದ ಮೆಕ್ಸಿಕ್ನ ನೌಕಾಪಡೆಯ ಸಣ್ಣ ವಿಮಾನವು ಗಾಲ್ವೆಸ್ಟನ್ ಬಳಿ ಪತನಗೊಂಡು…