ಮುಂಬೈ: ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ಮಣಿಪುರ ಬಿಜೆಪಿ ಸರ್ಕಾರಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಶಿವಸೇನೆ-ಉದ್ಧವ್ ಬಾಳಾಸಾಹೇಬ್ ಠಾಕ್ರೆ, ‘ಮಣಿಪುರ ಫೈಲ್ಸ್’ ಹೆಸರಿನಲ್ಲಿ ಚಲನಚಿತ್ರ ನಿರ್ಮಿಸಬೇಕು ಎಂದು ಶನಿವಾರ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ವಿರುದ್ಧ ವಾಗ್ದಾಳಿ ನಡೆಸಿದ ಸೇನಾ-ಯುಬಿಟಿ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ, ಈಶಾನ್ಯ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರ ಮತ್ತು ದೌರ್ಜನ್ಯಗಳು ಕಾಶ್ಮೀರಕ್ಕಿಂತ ಕೆಟ್ಟದಾಗಿವೆ ಎಂದು ಹೇಳಿದೆ.
ಮೇ 4 ರಂದು ಚಿತ್ರೀಕರಿಸಿದ ವೀಡಿಯೋ ಬುಧವಾರ ಹೊರಬಿದ್ದಿದ್ದು, ಮಣಿಪುರದಲ್ಲಿ ಒಂದು ಸಮುದಾಯದ ಇಬ್ಬರು ಮಹಿಳೆಯರನ್ನು ಇತರ ಸಮುದಾಯದ ಕೆಲವು ಪುರುಷರು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಇತ್ತೀಚಿನ ದಿನಗಳಲ್ಲಿ, ತಾಷ್ಕೆಂಟ್ ಫೈಲ್ಸ್, ದಿ ಕೇರಳ ಸ್ಟೋರಿ ಮತ್ತು ದಿ ಕಾಶ್ಮೀರ್ ಫೈಲ್ಸ್ನಂತಹ ಚಲನಚಿತ್ರಗಳನ್ನು ನಿರ್ಮಿಸಲಾಗಿದೆ. ಅದೇ ಜನರು ಈಗ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತು ‘ಮಣಿಪುರ ಫೈಲ್ಸ್’ ಎಂಬ ಚಲನಚಿತ್ರವನ್ನು ಮಾಡಬೇಕು ಎಂದು ಸಾಮ್ನಾ ಹೇಳಿದೆ.
ಮಣಿಪುರದಲ್ಲಿ ಬಿಜೆಪಿಯೇತರ ಸರ್ಕಾರ ಇದ್ದಿದ್ದರೆ ಇಷ್ಟೊತ್ತಿಗೆ ವಜಾ ಮಾಡಲಾಗುತ್ತಿತ್ತು ಎಂದ ಶಿವಸೇನೆ, ಪ್ರಧಾನಿ ಮೋದಿಗೆ ಮಣಿಪುರ ರಾಜಕೀಯವಾಗಿ ಅಮುಖ್ಯವಾಗಿದ್ದು, ಅಲ್ಲಿನ ಪರಿಸ್ಥಿತಿಯನ್ನು ನಿರ್ಲಕ್ಷಿಸುತ್ತಿರುವುದಕ್ಕೆ ಕಾರಣ ಎಂದು ಅದು ಆರೋಪಿಸಿದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…