BREAKING NEWS

ಇಸ್ರೇಲ್ ನಲ್ಲಿ ಸಿಲುಕಿರುವ ನಂಜನಗೂಡಿನ ಕುಟುಂಬ

ಮೈಸೂರು : ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವನೂರು ಗ್ರಾಮದ ಚೇತನ್ ಮತ್ತು ಕುಟುಂಬದವರು ಇಸ್ರೇಲ್ ನಲ್ಲಿ ಸಿಲುಕಿಕೊಂಡಿದ್ದಾರೆ. ಈ ವೇಳೆ ಮನೆಯವರಿಗೆ ವೀಡಿಯೋ ಕಾಲ್ ಮೂಲಕ ನಾವು ಸುರಕ್ಷತವಾಗಿದ್ದೇವೆ ಎಂದು ತಿಳಿಸಿದ್ದಾರೆ.

ಚೇತನ್ ಪತ್ನಿ ಶಿಲ್ಪಶ್ರೀ ಹಾಗೂ ಒಂದುವರೆ ವರ್ಷದ ಮಗು ಸದ್ಯಕ್ಕೆ ಇಸ್ರೇಲ್‌ನಲ್ಲಿ ಸುರಕ್ಷಿತವಾಗಿದ್ದಾರೆ

ನಂಜನಗೂಡು ತಾಲ್ಲೂಕು ದೇವನೂರು ಗ್ರಾಮದ ಚೇತನ್. 2 ವರ್ಷದ ಹಿಂದೆ ಉನ್ನತ ವೈದ್ಯಕೀಯ ಶಿಕ್ಷಣಕ್ಕೆ ಇಸ್ರೇಲ್‌ಗೆ ತೆರಳಿದ್ದಾರೆ

ಇದೀಗ ಇಸ್ರೇಲ್ ನಲ್ಲಿ ನಡೆಯುತ್ತಿರುವ ಯುದ್ಧದ ಭೀತಿಯಿಂದಾಗಿ ಹೆದರಿರುವ ಕುಟುಂಬಸ್ಥರಿಗೆ ನಾವು ಸುರಕ್ಷಿತವಾಗಿದ್ದೇವೆ ಎಂದು ವೀಡಿಯೋ ಕಾಲ್ ಮಾಡಿ ಧೈರ್ಯ ತುಂಬಿದ್ದಾರೆ. ಆದರೂ ಸದ್ಯದ ಸ್ಥಿತಿಯಲ್ಲಿ ಚೇತನ್ ಅವರ ಕುಟುಂಬ ವರ್ಗದವರು ಆತಂಕದಲ್ಲಿದ್ದಾರೆ.

ಇಸ್ರೇಲ್‌ನ ರೆಹೋವಾತ್ ನಗರದಲ್ಲಿ ಸುರಕ್ಷಿತವಾಗಿರುವ ಚೇತನ್ ಹಾಗು ಪತ್ನಿ ಮತ್ತು ಮಗುವನ್ನು ಇಸ್ರೇಲ್ ನ ಅವರ ಇನ್ಸ್ಟಿಟ್ಯೂಟ್ ಕೂಡ ಸುರಕ್ಷಿತವಾಗಿ ನೋಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಯುದ್ಧದ ವೇಳೆ ಸೈರನ್ ಬಂದಾಗ ಸೇಫ್ಟಿ ರೂಂ ನಲ್ಲಿ ಉಳಿದು ಕೊಳ್ಳುತ್ತಿರುವುದಾಗಿ ತಿಳಿಸಿದ ಚೇತನ್.ನಾವು ಇರುವ ಕಡೆಯೇ ಸೇಫ್ಟಿ ರೂಂ ಇದೆ ಎಂದಿದ್ದಾರೆ

ಇಸ್ರೇಲ್ ನಲ್ಲಿ ಇಷ್ಟೆಲ್ಲಾ ಯುದ್ಧದ ಅವಾಂತರ ನಡೆಯುತ್ತಿದ್ದರೂ ಅಲ್ಲಿದ್ದು ಕೊಂಡು ಆತನೆ ನಮಗೆ ದೈರ್ಯ ಹೇಳುತ್ತಿದ್ದಾನೆ ಆದರೆ ಇದೆಲ್ಲ ನೋಡುತ್ತಿದ್ದರೆ ನಮಗೆ ಧೈರ್ಯ ಸಾಲುತ್ತಿಲ್ಲ ಭಯವಾಗುತ್ತಿದೆ ಎಂದು ದೇವನೂರು ಗ್ರಾಮದಲ್ಲಿರುವ ಚೇತನ್ ಸಹೋದರಿ ಲಾವಣ್ಯ ತಿಳಿಸಿದರು.

lokesh

Recent Posts

ನಾಯಕತ್ವ ಬಗ್ಗೆ ಯತೀಂದ್ರ ಹೇಳಿಕೆ: ಇದಕ್ಕೆ ಸಿಎಂ ಉತ್ತರಿಸಲಿ ಎಂದ ಡಿ.ಕೆ.ಶಿವಕುಮಾರ್‌

ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್‌ ಕ್ಲಿಯರ್‌ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…

1 min ago

ಜೀವಾವಧಿ ಶಿಕ್ಷೆಯಿಂದ ಪಾರಾಗಲು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ…

39 mins ago

ಪೊಲೀಸ್‌ ಇಲಾಖೆಯಲ್ಲಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಪರಮೇಶ್ವರ್‌

ಬೆಳಗಾವಿ: ಪೊಲೀಸ್‌ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…

49 mins ago

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್‌…

2 hours ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಮುಚ್ಚುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…

2 hours ago

ಮೈಸೂರು ಅರಮನೆ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿತ

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…

2 hours ago