ಮೈಸೂರು : ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವನೂರು ಗ್ರಾಮದ ಚೇತನ್ ಮತ್ತು ಕುಟುಂಬದವರು ಇಸ್ರೇಲ್ ನಲ್ಲಿ ಸಿಲುಕಿಕೊಂಡಿದ್ದಾರೆ. ಈ ವೇಳೆ ಮನೆಯವರಿಗೆ ವೀಡಿಯೋ ಕಾಲ್ ಮೂಲಕ ನಾವು ಸುರಕ್ಷತವಾಗಿದ್ದೇವೆ ಎಂದು ತಿಳಿಸಿದ್ದಾರೆ.
ಚೇತನ್ ಪತ್ನಿ ಶಿಲ್ಪಶ್ರೀ ಹಾಗೂ ಒಂದುವರೆ ವರ್ಷದ ಮಗು ಸದ್ಯಕ್ಕೆ ಇಸ್ರೇಲ್ನಲ್ಲಿ ಸುರಕ್ಷಿತವಾಗಿದ್ದಾರೆ
ನಂಜನಗೂಡು ತಾಲ್ಲೂಕು ದೇವನೂರು ಗ್ರಾಮದ ಚೇತನ್. 2 ವರ್ಷದ ಹಿಂದೆ ಉನ್ನತ ವೈದ್ಯಕೀಯ ಶಿಕ್ಷಣಕ್ಕೆ ಇಸ್ರೇಲ್ಗೆ ತೆರಳಿದ್ದಾರೆ
ಇದೀಗ ಇಸ್ರೇಲ್ ನಲ್ಲಿ ನಡೆಯುತ್ತಿರುವ ಯುದ್ಧದ ಭೀತಿಯಿಂದಾಗಿ ಹೆದರಿರುವ ಕುಟುಂಬಸ್ಥರಿಗೆ ನಾವು ಸುರಕ್ಷಿತವಾಗಿದ್ದೇವೆ ಎಂದು ವೀಡಿಯೋ ಕಾಲ್ ಮಾಡಿ ಧೈರ್ಯ ತುಂಬಿದ್ದಾರೆ. ಆದರೂ ಸದ್ಯದ ಸ್ಥಿತಿಯಲ್ಲಿ ಚೇತನ್ ಅವರ ಕುಟುಂಬ ವರ್ಗದವರು ಆತಂಕದಲ್ಲಿದ್ದಾರೆ.
ಇಸ್ರೇಲ್ನ ರೆಹೋವಾತ್ ನಗರದಲ್ಲಿ ಸುರಕ್ಷಿತವಾಗಿರುವ ಚೇತನ್ ಹಾಗು ಪತ್ನಿ ಮತ್ತು ಮಗುವನ್ನು ಇಸ್ರೇಲ್ ನ ಅವರ ಇನ್ಸ್ಟಿಟ್ಯೂಟ್ ಕೂಡ ಸುರಕ್ಷಿತವಾಗಿ ನೋಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಯುದ್ಧದ ವೇಳೆ ಸೈರನ್ ಬಂದಾಗ ಸೇಫ್ಟಿ ರೂಂ ನಲ್ಲಿ ಉಳಿದು ಕೊಳ್ಳುತ್ತಿರುವುದಾಗಿ ತಿಳಿಸಿದ ಚೇತನ್.ನಾವು ಇರುವ ಕಡೆಯೇ ಸೇಫ್ಟಿ ರೂಂ ಇದೆ ಎಂದಿದ್ದಾರೆ
ಇಸ್ರೇಲ್ ನಲ್ಲಿ ಇಷ್ಟೆಲ್ಲಾ ಯುದ್ಧದ ಅವಾಂತರ ನಡೆಯುತ್ತಿದ್ದರೂ ಅಲ್ಲಿದ್ದು ಕೊಂಡು ಆತನೆ ನಮಗೆ ದೈರ್ಯ ಹೇಳುತ್ತಿದ್ದಾನೆ ಆದರೆ ಇದೆಲ್ಲ ನೋಡುತ್ತಿದ್ದರೆ ನಮಗೆ ಧೈರ್ಯ ಸಾಲುತ್ತಿಲ್ಲ ಭಯವಾಗುತ್ತಿದೆ ಎಂದು ದೇವನೂರು ಗ್ರಾಮದಲ್ಲಿರುವ ಚೇತನ್ ಸಹೋದರಿ ಲಾವಣ್ಯ ತಿಳಿಸಿದರು.
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…