BREAKING NEWS

ಇಸ್ರೇಲ್ ನಲ್ಲಿ ಸಿಲುಕಿರುವ ನಂಜನಗೂಡಿನ ಕುಟುಂಬ

ಮೈಸೂರು : ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವನೂರು ಗ್ರಾಮದ ಚೇತನ್ ಮತ್ತು ಕುಟುಂಬದವರು ಇಸ್ರೇಲ್ ನಲ್ಲಿ ಸಿಲುಕಿಕೊಂಡಿದ್ದಾರೆ. ಈ ವೇಳೆ ಮನೆಯವರಿಗೆ ವೀಡಿಯೋ ಕಾಲ್ ಮೂಲಕ ನಾವು ಸುರಕ್ಷತವಾಗಿದ್ದೇವೆ ಎಂದು ತಿಳಿಸಿದ್ದಾರೆ.

ಚೇತನ್ ಪತ್ನಿ ಶಿಲ್ಪಶ್ರೀ ಹಾಗೂ ಒಂದುವರೆ ವರ್ಷದ ಮಗು ಸದ್ಯಕ್ಕೆ ಇಸ್ರೇಲ್‌ನಲ್ಲಿ ಸುರಕ್ಷಿತವಾಗಿದ್ದಾರೆ

ನಂಜನಗೂಡು ತಾಲ್ಲೂಕು ದೇವನೂರು ಗ್ರಾಮದ ಚೇತನ್. 2 ವರ್ಷದ ಹಿಂದೆ ಉನ್ನತ ವೈದ್ಯಕೀಯ ಶಿಕ್ಷಣಕ್ಕೆ ಇಸ್ರೇಲ್‌ಗೆ ತೆರಳಿದ್ದಾರೆ

ಇದೀಗ ಇಸ್ರೇಲ್ ನಲ್ಲಿ ನಡೆಯುತ್ತಿರುವ ಯುದ್ಧದ ಭೀತಿಯಿಂದಾಗಿ ಹೆದರಿರುವ ಕುಟುಂಬಸ್ಥರಿಗೆ ನಾವು ಸುರಕ್ಷಿತವಾಗಿದ್ದೇವೆ ಎಂದು ವೀಡಿಯೋ ಕಾಲ್ ಮಾಡಿ ಧೈರ್ಯ ತುಂಬಿದ್ದಾರೆ. ಆದರೂ ಸದ್ಯದ ಸ್ಥಿತಿಯಲ್ಲಿ ಚೇತನ್ ಅವರ ಕುಟುಂಬ ವರ್ಗದವರು ಆತಂಕದಲ್ಲಿದ್ದಾರೆ.

ಇಸ್ರೇಲ್‌ನ ರೆಹೋವಾತ್ ನಗರದಲ್ಲಿ ಸುರಕ್ಷಿತವಾಗಿರುವ ಚೇತನ್ ಹಾಗು ಪತ್ನಿ ಮತ್ತು ಮಗುವನ್ನು ಇಸ್ರೇಲ್ ನ ಅವರ ಇನ್ಸ್ಟಿಟ್ಯೂಟ್ ಕೂಡ ಸುರಕ್ಷಿತವಾಗಿ ನೋಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಯುದ್ಧದ ವೇಳೆ ಸೈರನ್ ಬಂದಾಗ ಸೇಫ್ಟಿ ರೂಂ ನಲ್ಲಿ ಉಳಿದು ಕೊಳ್ಳುತ್ತಿರುವುದಾಗಿ ತಿಳಿಸಿದ ಚೇತನ್.ನಾವು ಇರುವ ಕಡೆಯೇ ಸೇಫ್ಟಿ ರೂಂ ಇದೆ ಎಂದಿದ್ದಾರೆ

ಇಸ್ರೇಲ್ ನಲ್ಲಿ ಇಷ್ಟೆಲ್ಲಾ ಯುದ್ಧದ ಅವಾಂತರ ನಡೆಯುತ್ತಿದ್ದರೂ ಅಲ್ಲಿದ್ದು ಕೊಂಡು ಆತನೆ ನಮಗೆ ದೈರ್ಯ ಹೇಳುತ್ತಿದ್ದಾನೆ ಆದರೆ ಇದೆಲ್ಲ ನೋಡುತ್ತಿದ್ದರೆ ನಮಗೆ ಧೈರ್ಯ ಸಾಲುತ್ತಿಲ್ಲ ಭಯವಾಗುತ್ತಿದೆ ಎಂದು ದೇವನೂರು ಗ್ರಾಮದಲ್ಲಿರುವ ಚೇತನ್ ಸಹೋದರಿ ಲಾವಣ್ಯ ತಿಳಿಸಿದರು.

lokesh

Recent Posts

ಬಂಧನದಲ್ಲಿರುವ ಮುನಿರತ್ನ ಆರೋಗ್ಯದಲ್ಲಿ ದಿಢೀರ್‌ ಏರುಪೇರು: ಜಯದೇವ ಆಸ್ಪತ್ರೆಗೆ ದಾಖಲು

ಬೆಂಗಳೂರು: ಲಂಚ ಬೇಡಿಕೆ, ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ…

1 hour ago

ದಸರಾ ಚಲನಚಿತ್ರೋತ್ಸವ- 2024| ಉತ್ತಮ ಕಿರುಚಿತ್ರ ಆಯ್ಕೆಗೆ ಪರಿಣಿತರಿಂದ ವೀಕ್ಷಣೆ

ಐನಾಕ್ಸ್ ಚಿತ್ರಮಂದಿರದಲ್ಲಿ ಆಯ್ಕೆಯಾದ ಅತ್ಯುತ್ತಮ ಕಿರು ಚಿತ್ರಗಳ ಪ್ರದರ್ಶನ ಮೈಸೂರು : ದಸರಾ ಚಲನ ಚಿತ್ರೋತ್ಸವ 2024ರ ಅಂಗವಾಗಿ ಕಿರು ಚಿತ್ರಗಳ…

2 hours ago

ಮೈಶುಗರ್: 2.5 ಲಕ್ಷ ಟನ್‌ನಷ್ಟು ಕಬ್ಬು ಅರೆಯಲು ಯಾವುದೇ ತೊಂದರೆ ಇಲ್ಲ: ಡಾ: ಹೆಚ್.ಎಲ್ ನಾಗರಾಜು

ಮಂಡ್ಯ: ಮೈ ಶುಗರ್ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಕಬ್ಬು ಕಟಾವು ಕೆಲಸ ನಡೆಯುತ್ತಿದ್ದು, ಪ್ರತಿದಿನ ಸುಮಾರು 3000 ಟನ್ ನಷ್ಟು…

2 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಆನೆ ಸಾವು

ಹನೂರು: ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಶಾಖೆ ಮಾವತ್ತೂರು…

2 hours ago

ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ಆರ್‌.ಅಶೋಕ ಆಗ್ರಹ

ಕಾಂಗ್ರೆಸ್‌ ಸರ್ಕಾರದ ತುಷ್ಟೀಕರಣ ರಾಜಕಾರಣ: ವಿಪಕ್ಷ ನಾಯಕ ಬೆಂಗಳೂರು: ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಾರಿಸಿದ ಘಟನೆ ಹಾಗೂ…

3 hours ago

ಜೊತೆಗಿದ್ದ ಯುವತಿಗೆ ಲೈಂಗಿಕ ಕಿರುಕುಳ: ಕೊರಿಯೋಗ್ರಾಫರ್‌ ವಿರುದ್ಧ ದೂರು ದಾಖಲು

ಮೈಸೂರು: ಬಾಲಿವುಡ್‌ನಿಂದ ಸ್ಯಾಂಡಲ್‌ವುಡ್‌ ವರೆಗೂ ಅನೇಕ ದಕ್ಷಿಣ ಭಾರತದ ಸ್ಟಾರ್‌ ನಟರಿಗೆ ಕೊರಿಯೋಗ್ರಾಫರ್‌ ಮಾಡಿರುವ ಹೆಸರಾಂತ ತೆಲುಗು ಡ್ಯಾನ್ಸ್ ಕೊರಿಯೋಗ್ರಾಫರ್‌…

3 hours ago