BREAKING NEWS

ಇಸ್ರೇಲ್ ನಲ್ಲಿ ಸಿಲುಕಿರುವ ನಂಜನಗೂಡಿನ ಕುಟುಂಬ

ಮೈಸೂರು : ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವನೂರು ಗ್ರಾಮದ ಚೇತನ್ ಮತ್ತು ಕುಟುಂಬದವರು ಇಸ್ರೇಲ್ ನಲ್ಲಿ ಸಿಲುಕಿಕೊಂಡಿದ್ದಾರೆ. ಈ ವೇಳೆ ಮನೆಯವರಿಗೆ ವೀಡಿಯೋ ಕಾಲ್ ಮೂಲಕ ನಾವು ಸುರಕ್ಷತವಾಗಿದ್ದೇವೆ ಎಂದು ತಿಳಿಸಿದ್ದಾರೆ.

ಚೇತನ್ ಪತ್ನಿ ಶಿಲ್ಪಶ್ರೀ ಹಾಗೂ ಒಂದುವರೆ ವರ್ಷದ ಮಗು ಸದ್ಯಕ್ಕೆ ಇಸ್ರೇಲ್‌ನಲ್ಲಿ ಸುರಕ್ಷಿತವಾಗಿದ್ದಾರೆ

ನಂಜನಗೂಡು ತಾಲ್ಲೂಕು ದೇವನೂರು ಗ್ರಾಮದ ಚೇತನ್. 2 ವರ್ಷದ ಹಿಂದೆ ಉನ್ನತ ವೈದ್ಯಕೀಯ ಶಿಕ್ಷಣಕ್ಕೆ ಇಸ್ರೇಲ್‌ಗೆ ತೆರಳಿದ್ದಾರೆ

ಇದೀಗ ಇಸ್ರೇಲ್ ನಲ್ಲಿ ನಡೆಯುತ್ತಿರುವ ಯುದ್ಧದ ಭೀತಿಯಿಂದಾಗಿ ಹೆದರಿರುವ ಕುಟುಂಬಸ್ಥರಿಗೆ ನಾವು ಸುರಕ್ಷಿತವಾಗಿದ್ದೇವೆ ಎಂದು ವೀಡಿಯೋ ಕಾಲ್ ಮಾಡಿ ಧೈರ್ಯ ತುಂಬಿದ್ದಾರೆ. ಆದರೂ ಸದ್ಯದ ಸ್ಥಿತಿಯಲ್ಲಿ ಚೇತನ್ ಅವರ ಕುಟುಂಬ ವರ್ಗದವರು ಆತಂಕದಲ್ಲಿದ್ದಾರೆ.

ಇಸ್ರೇಲ್‌ನ ರೆಹೋವಾತ್ ನಗರದಲ್ಲಿ ಸುರಕ್ಷಿತವಾಗಿರುವ ಚೇತನ್ ಹಾಗು ಪತ್ನಿ ಮತ್ತು ಮಗುವನ್ನು ಇಸ್ರೇಲ್ ನ ಅವರ ಇನ್ಸ್ಟಿಟ್ಯೂಟ್ ಕೂಡ ಸುರಕ್ಷಿತವಾಗಿ ನೋಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಯುದ್ಧದ ವೇಳೆ ಸೈರನ್ ಬಂದಾಗ ಸೇಫ್ಟಿ ರೂಂ ನಲ್ಲಿ ಉಳಿದು ಕೊಳ್ಳುತ್ತಿರುವುದಾಗಿ ತಿಳಿಸಿದ ಚೇತನ್.ನಾವು ಇರುವ ಕಡೆಯೇ ಸೇಫ್ಟಿ ರೂಂ ಇದೆ ಎಂದಿದ್ದಾರೆ

ಇಸ್ರೇಲ್ ನಲ್ಲಿ ಇಷ್ಟೆಲ್ಲಾ ಯುದ್ಧದ ಅವಾಂತರ ನಡೆಯುತ್ತಿದ್ದರೂ ಅಲ್ಲಿದ್ದು ಕೊಂಡು ಆತನೆ ನಮಗೆ ದೈರ್ಯ ಹೇಳುತ್ತಿದ್ದಾನೆ ಆದರೆ ಇದೆಲ್ಲ ನೋಡುತ್ತಿದ್ದರೆ ನಮಗೆ ಧೈರ್ಯ ಸಾಲುತ್ತಿಲ್ಲ ಭಯವಾಗುತ್ತಿದೆ ಎಂದು ದೇವನೂರು ಗ್ರಾಮದಲ್ಲಿರುವ ಚೇತನ್ ಸಹೋದರಿ ಲಾವಣ್ಯ ತಿಳಿಸಿದರು.

lokesh

Recent Posts

ಸೋಮವಾರಪೇಟೆಯಲ್ಲಿ ಗ್ಯಾಸ್ ಸೋರಿಕೆಗೆ ಯುವತಿ ಸಾವು

ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್‌ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…

8 hours ago

ರಾಜ್ಯದಲ್ಲಿ ಎಂಟು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…

9 hours ago

ಚಿರತೆ ದಾಳಿಗೆ ನಾಯಿ ಸಾವು: ಗ್ರಾಮಸ್ಥರಲ್ಲಿ ಭೀತಿ

ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…

9 hours ago

ಎಲ್‌ಪಿಜಿ ದರ ಭಾರತದಲ್ಲೇ ಅಗ್ಗ: ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಸಮರ್ಥನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್…

10 hours ago

ಬಾವಿಗೆ ಬಿದ್ದಿದ್ದ ಹಸು ರಕ್ಷಣೆ

ಮಹಾದೇಶ್‌ ಎಂ ಗೌಡ:  ಹನೂರು ತಾಲ್ಲೂಕು ವರದಿಗಾರರು  ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…

10 hours ago

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

11 hours ago