ಬೆಂಗಳೂರು : ಇದು ರಾಜ್ಯ ಕಂಡ ಪ್ರಪ್ರಥಮ ಏಕಪಕ್ಷದ ಸಮ್ಮಿಶ್ರ ಸರ್ಕಾರ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ.
ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಶುರುವಾದ ಕಲೆಕ್ಷನ್ ದಂಧೆ ಈಗ ತಮ್ಮ ಪಕ್ಷದಲ್ಲೇ ಕದನವನ್ನು ಶುರು ಮಾಡಿದೆ. ಇದರ ಪರಿಣಾಮವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸದ್ಯದಲ್ಲೇ ಸಿಎಂ ಸ್ಥಾನದಿಂದ ಸಿದ್ದರಾಮಯ್ಯರವರನ್ನು ಇಳಿಸಿ ಮುಖ್ಯಮಂತ್ರಿ ಆಗುತ್ತಾರೆ. ಈ ವಿಚಾರವನ್ನು ಕಾಂಗ್ರೆಸ್ ಶಾಸಕರೆ ಹೇಳಿದ್ದಾರೆ ಎಂದು ಬಿಜೆಪಿ ಹೇಳಿಕೊಂಡಿದೆ.
ಪ್ರಿಯಾಂಕ್ ಖರ್ಗೆಯವರು ತಮ್ಮ ತಂದೆಯವರ ಪ್ರಭಾವ ಬಳಸಿ ಎಲ್ಲೆಲ್ಲೂ ತಮ್ಮ ನಿರ್ಧಾರಗಳೇ ನಡೆಯಲಿ ಎನ್ನುತ್ತಿದ್ದಾರೆ. ಇನ್ನೊಂದೆಡೆ ಮೈಸೂರು ಪ್ರವಾಸದ ಪುಕಾರು ಹಬ್ಬಿಸಿ ಕೆಪಿಸಿಸಿ ಅಧ್ಯಕ್ಷರನ್ನೇ ಸತೀಶ್ ಜಾರಕಿಹೊಳಿಯವರು ಅಲುಗಾಡಿಸಿದ್ದಾರೆ. ಮತ್ತೊಂದು ಕಡೆ, ಕೆಲಸ ಬಿಟ್ಟು ವಿದೇಶಕ್ಕೆ ಹಾರಲು ಇತರ ಸನ್ಮಿತ್ರರು ಸಜ್ಜಾಗಿದ್ದಾರೆ ಎಂದು ಬಿಜೆಪಿ ಎಕ್ಸ್ನಲ್ಲಿ ಬರೆದುಕೊಂಡಿದೆ.
ಅವರ ಪಕ್ಷದಲ್ಲಿ ಕತ್ತಲಾದ ಮೇಲಷ್ಟೇ ಚರ್ಚಿಸಬಹುದಾದ ವಿಚಾರ ಮತ್ತು ಲೆಕ್ಕಾಚಾರಗಳ ಮಾತುಕತೆಗೆ ಆಯ್ದ ಆಮಂತ್ರಿತರ ಡಿನ್ನರ್ ಆಯೋಜಿಸಲಾಗುತ್ತದೆ. ಹಣಕಾಸಿನ ಲೆಕ್ಕಾಚಾರಗಳಿರುವಾಗ ಈ ರೀತಿ ಭಿನ್ನಾಭಿಪ್ರಾಯಗಳು ಸಹಜವಾಗಿ ಇರುತ್ತದೆ. ಕಲೆಕ್ಷನ್ ವ್ಯವಹಾರ ಬದಿಗಿಟ್ಟು, ಹೊರರಾಜ್ಯಗಳ ಚುನಾವಣೆಗಳಿಗೆ ಫಂಡ್ ಕಳಿಸಲು ಅಸಾಧ್ಯ ಎಂಬುದನ್ನು ಹೈಕಮಾಂಡ್ಗೆ ತಿಳಿಸಿದರೆ ರಾಜ್ಯ ಸರ್ಕಾರ ಸುಲಲಿತವಾಗಿ ನಡೆಯುತ್ತದೆ ಎಂದು ಬಿಜೆಪಿ ಹೇಳಿಕೊಂಡಿದೆ.
ಹೊಸದಿಲ್ಲಿ : ಮುಂಬರುವ ಏಪ್ರಿಲ್ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…