BREAKING NEWS

10 ನಿಮಿಷದಲ್ಲಿ ಒಂದು ಲೀಟರ್ ಮದ್ಯ ಕುಡಿದು ವ್ಯಕ್ತಿ ಸಾವು

ಬೀಜಿಂಗ್ : 2 ಲಕ್ಷ ರೂ. ಬಹುಮಾನಕ್ಕಾಗಿ ಆಫಿಸ್ ಪಾರ್ಟಿಯಲ್ಲಿ 10 ನಿಮಿಷದಲ್ಲಿ ಒಂದು ಲೀಟರ್ ಹಾರ್ಡ್ ಡ್ರಿಂಕ್ಸ್ ಕುಡಿದು ವ್ಯಕ್ತಿಯೊಬ್ಬ ಸಾವಿಗೀಡಾದ ಘಟನೆ ಚೀನಾದಲ್ಲಿ ನಡೆದಿದೆ.

ಝಾಂಗ್ ಎಂಬಾತ ತನ್ನ ಕಚೇರಿಯ ಸಹೋದ್ಯೋಗಿಗಳಿಗೆ ಮಾಲೀಕ ಆಯೋಜಿದ್ದ ಔತಣಕೂಟಕ್ಕೆ ತೆರಳಿದ್ದ. ಈ ವೇಳೆ ಕುಡಿಯುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಯಾರಾದರೂ ಕುಡಿತದಲ್ಲಿ ಝಾಂಗ್‍ನನ್ನು ಮೀರಿಸಿದರೆ 20,000 ಯುವಾನ್ ಬಹುಮಾನವನ್ನು ನೀಡುವುದಾಗಿ ಈ ವೇಳೆ ಘೋಷಿಸಲಾಗಿದೆ. ಸ್ಪರ್ಧೆಯಲ್ಲಿ ಸೋತರೆ ಅದೇ ಮೊತ್ತದ ಪಾರ್ಟಿ ಕೊಡಿಸುವಂತೆ ಹೇಳಲಾಗಿದೆ. ಬಳಿಕ ತೀವ್ರ ಮದ್ಯ ಸೇವನೆ ಮಾಡಿದ ಝಾಂಗ್ ಅಸ್ವಸ್ಥನಾಗಿ ಮೃತಪಟ್ಟಿದ್ದಾನೆ.

ಔತಣಕೂಟದಲ್ಲಿದ್ದ ಉದ್ಯೋಗಿಯೊಬ್ಬರು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಝಾಂಗ್ 10 ನಿಮಿಷಗಳಲ್ಲಿ ಒಂದು ಲೀಟರ್ ಬೈಜು ಎಂಬ ಹಾರ್ಡ್ ಡ್ರಿಂಕ್ಸ್ ಕುಡಿದಿದ್ದಾನೆ. ಇದು 30% ರಿಂದ 60% ರಷ್ಟು ವಿಶಿಷ್ಟವಾದ ಆಲ್ಕೋಹಾಲ್ ಅಂಶ ಹೊಂದಿರುವ ಚೈನೀಸ್ ಸ್ಪಿರಿಟ್ ಆಗಿದೆ ಎಂದು ತಿಳಿಸಿದ್ದಾರೆ.

ಝಾಂಗ್ ಕುಸಿದು ಬಿದ್ದ ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅವರು ಉಸಿರುಗಟ್ಟುವಿಕೆ ಮತ್ತು ಹೃದಯ ಸ್ತಂಭನದಿಂದ ಮೃತಪಟ್ಟರು ಎಂದು ಹೇಳಿದ್ದಾರೆ. ಇದೇ ಮದ್ಯವನ್ನು ಸೇವಿಸಿ ಚೀನಾದಲ್ಲಿ ಇತ್ತೀಚೆಗೆ ಪ್ರಭಾವಿ ಒಬ್ಬರು ಮೃತಪಟ್ಟಿದ್ದರು. ಬಳಿಕ ಈ ಮದ್ಯದ ಬಗ್ಗೆ ಚೀನಾದಲ್ಲಿ ಭಾರೀ ಚರ್ಚೆ ಶುರುವಾಗಿದೆ.

lokesh

Recent Posts

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳಿಗೆ ವಾಹನ ಚಾಲನೆ ಅಪಾಯ

ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…

2 hours ago

ಯುಗಾದಿ; ಹೊನ್ನೇರು ಕಟ್ಟಿ ಸಂಭ್ರಮಿಸಿದ ರೈತರು

ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…

2 hours ago

ಕೇರಳಕ್ಕೆ ನೂರಾರು ಟಿಪ್ಪರ್‌ಗಳಲ್ಲಿ ರಾಜ್ಯದ ಸಂಪತ್ತು ಸಾಗಣೆ

ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…

2 hours ago

ರಸ್ತೆಯ ಮೇಲೆ ಹರಿಯುವ ಒಳಚರಂಡಿ ನೀರಿಂದ ಅನೈರ್ಮಲ್ಯ

ಎಂ.ನಾರಾಯಣ ತಿ.ನರಸೀಪುರ: ಪುರಸಭಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಳಚರಂಡಿಯ ನೀರು ರಸ್ತೆಯ ಮೇಲೆ ಹರಿದು ಮನೆ ಮುಂಭಾಗ ದುರ್ನಾತ ಬೀರುತ್ತಾ ಅನೈರ್ಮಲ್ಯ…

2 hours ago

ಏ.೧೦ರಿಂದ ವಸ್ತು ಪ್ರದರ್ಶನದಲ್ಲಿ ಬೇಸಿಗೆ ಮೇಳ

ದಿನೇಶ್‌ಕುಮಾರ್ ಹೆಚ್.ಎಸ್ ಮೈಸೂರು: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಬರುತ್ತಿರುವ ಹಿನ್ನೆಲೆಯಲ್ಲಿ ಏ.೧೦ ರಿಂದ ಮೇ ೩೦ರವರೆಗೆ ೫೦ ದಿನಗಳ ಕಾಲ…

2 hours ago

ಪಾಳು ಬಿದ್ದ ಪಾರ್ಕ್.. ಶುಚಿ ಇಲ್ಲದ ಶೌಚಾಲಯ..

ಕಸ, ಕೊಳಚೆ ಮತ್ತು ಕಟ್ಟಡ ತ್ಯಾಜ್ಯದಿಂದ ವಾಯುವಿಹಾರಿಗಳಿಗೆ ತೊಂದರೆ  ಮೈಸೂರು: ನಗರದ ಸರಸ್ವತಿಪುರಂನ ವಾರ್ಡ್ ಸಂಖ್ಯೆ ೨೧ರಲ್ಲಿ ಇರುವ ಪಾರ್ಕ್…

2 hours ago