BREAKING NEWS

10 ನಿಮಿಷದಲ್ಲಿ ಒಂದು ಲೀಟರ್ ಮದ್ಯ ಕುಡಿದು ವ್ಯಕ್ತಿ ಸಾವು

ಬೀಜಿಂಗ್ : 2 ಲಕ್ಷ ರೂ. ಬಹುಮಾನಕ್ಕಾಗಿ ಆಫಿಸ್ ಪಾರ್ಟಿಯಲ್ಲಿ 10 ನಿಮಿಷದಲ್ಲಿ ಒಂದು ಲೀಟರ್ ಹಾರ್ಡ್ ಡ್ರಿಂಕ್ಸ್ ಕುಡಿದು ವ್ಯಕ್ತಿಯೊಬ್ಬ ಸಾವಿಗೀಡಾದ ಘಟನೆ ಚೀನಾದಲ್ಲಿ ನಡೆದಿದೆ.

ಝಾಂಗ್ ಎಂಬಾತ ತನ್ನ ಕಚೇರಿಯ ಸಹೋದ್ಯೋಗಿಗಳಿಗೆ ಮಾಲೀಕ ಆಯೋಜಿದ್ದ ಔತಣಕೂಟಕ್ಕೆ ತೆರಳಿದ್ದ. ಈ ವೇಳೆ ಕುಡಿಯುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಯಾರಾದರೂ ಕುಡಿತದಲ್ಲಿ ಝಾಂಗ್‍ನನ್ನು ಮೀರಿಸಿದರೆ 20,000 ಯುವಾನ್ ಬಹುಮಾನವನ್ನು ನೀಡುವುದಾಗಿ ಈ ವೇಳೆ ಘೋಷಿಸಲಾಗಿದೆ. ಸ್ಪರ್ಧೆಯಲ್ಲಿ ಸೋತರೆ ಅದೇ ಮೊತ್ತದ ಪಾರ್ಟಿ ಕೊಡಿಸುವಂತೆ ಹೇಳಲಾಗಿದೆ. ಬಳಿಕ ತೀವ್ರ ಮದ್ಯ ಸೇವನೆ ಮಾಡಿದ ಝಾಂಗ್ ಅಸ್ವಸ್ಥನಾಗಿ ಮೃತಪಟ್ಟಿದ್ದಾನೆ.

ಔತಣಕೂಟದಲ್ಲಿದ್ದ ಉದ್ಯೋಗಿಯೊಬ್ಬರು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಝಾಂಗ್ 10 ನಿಮಿಷಗಳಲ್ಲಿ ಒಂದು ಲೀಟರ್ ಬೈಜು ಎಂಬ ಹಾರ್ಡ್ ಡ್ರಿಂಕ್ಸ್ ಕುಡಿದಿದ್ದಾನೆ. ಇದು 30% ರಿಂದ 60% ರಷ್ಟು ವಿಶಿಷ್ಟವಾದ ಆಲ್ಕೋಹಾಲ್ ಅಂಶ ಹೊಂದಿರುವ ಚೈನೀಸ್ ಸ್ಪಿರಿಟ್ ಆಗಿದೆ ಎಂದು ತಿಳಿಸಿದ್ದಾರೆ.

ಝಾಂಗ್ ಕುಸಿದು ಬಿದ್ದ ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅವರು ಉಸಿರುಗಟ್ಟುವಿಕೆ ಮತ್ತು ಹೃದಯ ಸ್ತಂಭನದಿಂದ ಮೃತಪಟ್ಟರು ಎಂದು ಹೇಳಿದ್ದಾರೆ. ಇದೇ ಮದ್ಯವನ್ನು ಸೇವಿಸಿ ಚೀನಾದಲ್ಲಿ ಇತ್ತೀಚೆಗೆ ಪ್ರಭಾವಿ ಒಬ್ಬರು ಮೃತಪಟ್ಟಿದ್ದರು. ಬಳಿಕ ಈ ಮದ್ಯದ ಬಗ್ಗೆ ಚೀನಾದಲ್ಲಿ ಭಾರೀ ಚರ್ಚೆ ಶುರುವಾಗಿದೆ.

lokesh

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

12 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

13 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

15 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

16 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

17 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

17 hours ago