ಬೆಂಗಳೂರು : ರಾಜ್ಯ ಹೈಕೋರ್ಟ್ ಹಾಲ್ನಲ್ಲಿ ವ್ಯಕ್ತಿ ಒಬ್ಬ ವಿಚಾರಣೆ ವೇಳೆ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಎಚ್. ಪಿ.ಪ್ರಭಾಕರ ಶಾಸ್ತ್ರಿ ಅವರಿದ್ದ ವಿಭಾಗೀಯ ನ್ಯಾಯಪೀಠ ಎಂದಿನಂತೆ ದೈನಂದಿನ ಪ್ರಕರಣಗಳ ವಿಚಾರಣೆ ನಡೆಸುತ್ತಿತ್ತು.
ಮಧ್ಯಾಹ್ನ 1.15ರ ಸಮಯದಲ್ಲಿ ಕ್ರಮ ಸಂಖ್ಯೆ 26 ರ ಪ್ರಕರಣವನ್ನು ಕೋರ್ಟ್ ಆಫೀಸರ್ ಕೂಗುತ್ತಿದ್ದಂತೆಯೇ ಮಧ್ಯ ವಯಸ್ಸಿನ ವ್ಯಕ್ತಿಯೊಬ್ಬರು ಒಂದಷ್ಟು ಫೈಲುಗಳೊಂದಿಗೆ ನ್ಯಾಯಪೀಠದ ಮುಂದೆ ಬಂದು ನಿಂತರು.
ನೋಡ ನೋಡುತ್ತಿದ್ದಂತೆಯೇ ಆ ವ್ಯಕ್ತಿ ತಾವು ತಂದಿದ್ದ ಹರಿತವಾದ ಬ್ಲೇಡ್ನಿಂದ ಕತ್ತು ಕೊಯ್ದುಕೊಂಡಿದ್ದಾರೆ.
ತಕ್ಷಣ ಮುಖ್ಯ ನ್ಯಾಯಮೂರ್ತಿಗಳು ಪೊಲೀಸರನ್ನು ಕರೆದು ಆ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಆ ವ್ಯಕ್ತಿಯನ್ನು ಹೊರಗೆ ಕರೆದುಕೊಂಡು ಹೋಗಿದ್ದಾರೆ.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…