BREAKING NEWS

40 ಜನರಿಗೆ ಕಚ್ಚಿ ಸಾವನ್ನಪ್ಪಿದ ರೇಬಿಸ್ ಸೋಂಕಿತ ಮಗು

ಉತ್ತರ ಪ್ರದೇಶ : ಕೆಲವು ವಾರಗಳ ಹಿಂದೆ ಬೀದಿ ನಾಯಿಗಳ ಕಡಿತಕ್ಕೆ ಒಳಗಾಗಿದ್ದ ಉತ್ತರ ಪ್ರದೇಶದ ಹಳ್ಳಿಯೊಂದರ ಎರಡೂವರೆ ವರ್ಷಗಳ ಹೆಣ್ಣು ಮಗು ರೇಬಿಸ್ ಸೋಂಕಿಗೆ ತುತ್ತಾಗಿ ಸೋಮವಾರ ಮೃತಪಟ್ಟಿದೆ. ಈ ಮಗುವಿನ ಸಾವು ಇಡೀ ಗ್ರಾಮಕ್ಕೇ ಆತಂಕ ತಂದೊಡ್ಡಿದೆ.

ಈ ಮಗು ಸಾವನ್ನಪ್ಪುವ ಮುನ್ನ 40ಕ್ಕೂ ಹೆಚ್ಚು ಜನರಿಗೆ ಕಚ್ಚಿದೆ. ಇದೀಗ ಎಲ್ಲರಿಗೂ ರೇಬಿಸ್ ಸೋಂಕು ತಗುಲಿದೆ. ಉತ್ತರ ಪ್ರದೇಶದ ಜಲೌನ್ ಜಿಲ್ಲೆಯ ಕೊಂಚ್ ತಾಲ್ಲೂಕಿನ ಕ್ಯೋಲಾರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹೆಣ್ಣು ಮಗು ತನ್ನ ತಾಯಿಯ ಜೊತೆ ಸೋದರ ಮಾವನ ಮನೆಯಲ್ಲಿ ಇತ್ತು. ಈ ವೇಳೆ ಮಗುವಿಗೆ ಬೀದಿ ನಾಯಿಗಳು ಕಡಿದಿದ್ದವು. ಹೀಗಾಗಿ, ಮಗು ರೇಬಿಸ್ ಸೋಂಕಿಗೆ ತುತ್ತಾಗಿತ್ತು.
ಆದರೆ ಮಗುವನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿರಲಿಲ್ಲ. ಈ ಮಗು ಕಳೆದ ಮೂರು ವಾರಗಳ ಅವಧಿಯಲ್ಲಿ ಗ್ರಾಮದ 40 ಜನರಿಗೆ ಕಚ್ಚಿತ್ತು. ಇದೀಗ ಎಲ್ಲರೂ ರೇಬಿಸ್ ಸೋಂಕಿಗೆ ಒಳಗಾಗಿದ್ದಾರೆ. ಇನ್ನು ಈ ಬಾಲಕಿಗೆ ಕಡಿದ ಬಳಿಕ ರೇಬಿಸ್ ಸೋಂಕಿತ ಬೀದಿ ನಾಯಿ ಕೂಡಾ ಸಾವನ್ನಪ್ಪಿತ್ತು.

ಮಗುವಿಗೆ ನಾಯಿ ಕಡಿದ ಬಳಿಕ ಪೋಷಕರು ಗ್ರಾಮದ ನಾಟಿ ವೈದ್ಯರ ಬಳಿ ಕರೆದೊಯ್ದಿದ್ದರು. ಯಾವುದೇ ವೃತ್ತಿಪರ ಪದವೀಧರ ವೈದ್ಯರ ಬಳಿ ಚಿಕಿತ್ಸೆ ಕೊಡಿಸಿರಲಿಲ್ಲ. ಮಗುವನ್ನು ಗ್ರಾಮಕ್ಕೆ ವಾಪಸ್ ಕರೆ ತಂದ ಬಳಿಕ ಮಗುವಿನ ದೇಹದಲ್ಲಿ ರೇಬಿಸ್ ರೋಗದ ಲಕ್ಷಣಗಳು ಕಂಡು ಬಂದಿದ್ದವು. ಆದರೆ, ಮಗುವಿನ ಪೋಷಕರು ಮಾತ್ರ ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದ್ದರು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ರೇಬಿಸ್ ರೋಗದ ಲಕ್ಷಣ ಹೊಂದಿದ್ದ ಮಗುವು ತನ್ನ ಬಳಿ ಬಂದ ಎಲ್ಲರಿಗೂ ಉಗುರಿನಿಂದ ಪರಚುತ್ತಿತ್ತು. ಸಿಕ್ಕ ಸಿಕ್ಕ ಕಡೆ ಕಚ್ಚುತ್ತಿತ್ತು. ಮಗುವಿನ ವರ್ತನೆಯಲ್ಲಿ ವಿಪರೀತ ಬದಲಾವಣೆ ಕಂಡು ಬಂದಿದ್ದರೂ ಯಾರೂ ಗಂಭೀರವಾಗಿ ಪರಿಗಣಿಸಿರಲಿಲ್ಲ.

ಕಳೆದ ಶುಕ್ರವಾರ ಮಗು ಕುಸಿದು ಬಿದ್ದಾಗ ಮಗುವಿನ ಹೆತ್ತವರು ಕೂಡಲೇ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು. ಜಿಲ್ಲಾಸ್ಪತ್ರೆ ವೈದ್ಯರು ಕೂಡಲೇ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಝಾನ್ಸಿಗೆ ಕರೆದೊಯ್ಯುವಂತೆ ಸೂಚಿಸಿದ್ದರು. ಆದರೆ, ಕುಟುಂಬಸ್ಥರು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಸೋಮವಾರ ಮಗು ಸಾವನ್ನಪ್ಪಿದೆ.

ಮಗು ಕಚ್ಚಿದ ಪರಿಣಾಮ ಇದೀಗ ಕ್ಯೋಲಾರಿ ಗ್ರಾಮದ 40 ಜನರು ರೇಬಿಸ್ ಸೋಂಕಿತರಾಗಿದ್ದಾರೆ. ಎಲ್ಲರಿಗೂ ರೇಬಿಸ್ ಸೋಂಕು ನಿರೋಧಕ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ದಿನೇಶ್ ಬರ್ದಾರಿಯಾ ಅವರು ಹೇಳಿದ್ದಾರೆ. ರೇಬಿಸ್ ಸೋಂಕಿನ ವಿರುದ್ದ ಚಿಕಿತ್ಸೆ ನೀಡಲು ಸೂಕ್ತ ವೈದ್ಯಕೀಯ ವ್ಯವಸ್ಥೆ ಲಭ್ಯವಿದೆ. ಹೀಗಾಗಿ, ಯಾರೂ ಆತಂಕಕ್ಕೆ ಒಳಗಾಗೋದು ಬೇಡ ಎಂದು ವೈದ್ಯರು ಅಭಯ ಹೇಳಿದ್ದಾರೆ. ಆದರೂ ಗ್ರಾಮಸ್ಥರು ಆತಂಕದಲ್ಲೇ ದಿನ ಕಳೆಯುತ್ತಿದ್ದಾರೆ.

 

lokesh

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

9 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

10 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

10 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

10 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

10 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

11 hours ago