BREAKING NEWS

40 ಜನರಿಗೆ ಕಚ್ಚಿ ಸಾವನ್ನಪ್ಪಿದ ರೇಬಿಸ್ ಸೋಂಕಿತ ಮಗು

ಉತ್ತರ ಪ್ರದೇಶ : ಕೆಲವು ವಾರಗಳ ಹಿಂದೆ ಬೀದಿ ನಾಯಿಗಳ ಕಡಿತಕ್ಕೆ ಒಳಗಾಗಿದ್ದ ಉತ್ತರ ಪ್ರದೇಶದ ಹಳ್ಳಿಯೊಂದರ ಎರಡೂವರೆ ವರ್ಷಗಳ ಹೆಣ್ಣು ಮಗು ರೇಬಿಸ್ ಸೋಂಕಿಗೆ ತುತ್ತಾಗಿ ಸೋಮವಾರ ಮೃತಪಟ್ಟಿದೆ. ಈ ಮಗುವಿನ ಸಾವು ಇಡೀ ಗ್ರಾಮಕ್ಕೇ ಆತಂಕ ತಂದೊಡ್ಡಿದೆ.

ಈ ಮಗು ಸಾವನ್ನಪ್ಪುವ ಮುನ್ನ 40ಕ್ಕೂ ಹೆಚ್ಚು ಜನರಿಗೆ ಕಚ್ಚಿದೆ. ಇದೀಗ ಎಲ್ಲರಿಗೂ ರೇಬಿಸ್ ಸೋಂಕು ತಗುಲಿದೆ. ಉತ್ತರ ಪ್ರದೇಶದ ಜಲೌನ್ ಜಿಲ್ಲೆಯ ಕೊಂಚ್ ತಾಲ್ಲೂಕಿನ ಕ್ಯೋಲಾರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹೆಣ್ಣು ಮಗು ತನ್ನ ತಾಯಿಯ ಜೊತೆ ಸೋದರ ಮಾವನ ಮನೆಯಲ್ಲಿ ಇತ್ತು. ಈ ವೇಳೆ ಮಗುವಿಗೆ ಬೀದಿ ನಾಯಿಗಳು ಕಡಿದಿದ್ದವು. ಹೀಗಾಗಿ, ಮಗು ರೇಬಿಸ್ ಸೋಂಕಿಗೆ ತುತ್ತಾಗಿತ್ತು.
ಆದರೆ ಮಗುವನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿರಲಿಲ್ಲ. ಈ ಮಗು ಕಳೆದ ಮೂರು ವಾರಗಳ ಅವಧಿಯಲ್ಲಿ ಗ್ರಾಮದ 40 ಜನರಿಗೆ ಕಚ್ಚಿತ್ತು. ಇದೀಗ ಎಲ್ಲರೂ ರೇಬಿಸ್ ಸೋಂಕಿಗೆ ಒಳಗಾಗಿದ್ದಾರೆ. ಇನ್ನು ಈ ಬಾಲಕಿಗೆ ಕಡಿದ ಬಳಿಕ ರೇಬಿಸ್ ಸೋಂಕಿತ ಬೀದಿ ನಾಯಿ ಕೂಡಾ ಸಾವನ್ನಪ್ಪಿತ್ತು.

ಮಗುವಿಗೆ ನಾಯಿ ಕಡಿದ ಬಳಿಕ ಪೋಷಕರು ಗ್ರಾಮದ ನಾಟಿ ವೈದ್ಯರ ಬಳಿ ಕರೆದೊಯ್ದಿದ್ದರು. ಯಾವುದೇ ವೃತ್ತಿಪರ ಪದವೀಧರ ವೈದ್ಯರ ಬಳಿ ಚಿಕಿತ್ಸೆ ಕೊಡಿಸಿರಲಿಲ್ಲ. ಮಗುವನ್ನು ಗ್ರಾಮಕ್ಕೆ ವಾಪಸ್ ಕರೆ ತಂದ ಬಳಿಕ ಮಗುವಿನ ದೇಹದಲ್ಲಿ ರೇಬಿಸ್ ರೋಗದ ಲಕ್ಷಣಗಳು ಕಂಡು ಬಂದಿದ್ದವು. ಆದರೆ, ಮಗುವಿನ ಪೋಷಕರು ಮಾತ್ರ ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದ್ದರು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ರೇಬಿಸ್ ರೋಗದ ಲಕ್ಷಣ ಹೊಂದಿದ್ದ ಮಗುವು ತನ್ನ ಬಳಿ ಬಂದ ಎಲ್ಲರಿಗೂ ಉಗುರಿನಿಂದ ಪರಚುತ್ತಿತ್ತು. ಸಿಕ್ಕ ಸಿಕ್ಕ ಕಡೆ ಕಚ್ಚುತ್ತಿತ್ತು. ಮಗುವಿನ ವರ್ತನೆಯಲ್ಲಿ ವಿಪರೀತ ಬದಲಾವಣೆ ಕಂಡು ಬಂದಿದ್ದರೂ ಯಾರೂ ಗಂಭೀರವಾಗಿ ಪರಿಗಣಿಸಿರಲಿಲ್ಲ.

ಕಳೆದ ಶುಕ್ರವಾರ ಮಗು ಕುಸಿದು ಬಿದ್ದಾಗ ಮಗುವಿನ ಹೆತ್ತವರು ಕೂಡಲೇ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು. ಜಿಲ್ಲಾಸ್ಪತ್ರೆ ವೈದ್ಯರು ಕೂಡಲೇ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಝಾನ್ಸಿಗೆ ಕರೆದೊಯ್ಯುವಂತೆ ಸೂಚಿಸಿದ್ದರು. ಆದರೆ, ಕುಟುಂಬಸ್ಥರು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಸೋಮವಾರ ಮಗು ಸಾವನ್ನಪ್ಪಿದೆ.

ಮಗು ಕಚ್ಚಿದ ಪರಿಣಾಮ ಇದೀಗ ಕ್ಯೋಲಾರಿ ಗ್ರಾಮದ 40 ಜನರು ರೇಬಿಸ್ ಸೋಂಕಿತರಾಗಿದ್ದಾರೆ. ಎಲ್ಲರಿಗೂ ರೇಬಿಸ್ ಸೋಂಕು ನಿರೋಧಕ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ದಿನೇಶ್ ಬರ್ದಾರಿಯಾ ಅವರು ಹೇಳಿದ್ದಾರೆ. ರೇಬಿಸ್ ಸೋಂಕಿನ ವಿರುದ್ದ ಚಿಕಿತ್ಸೆ ನೀಡಲು ಸೂಕ್ತ ವೈದ್ಯಕೀಯ ವ್ಯವಸ್ಥೆ ಲಭ್ಯವಿದೆ. ಹೀಗಾಗಿ, ಯಾರೂ ಆತಂಕಕ್ಕೆ ಒಳಗಾಗೋದು ಬೇಡ ಎಂದು ವೈದ್ಯರು ಅಭಯ ಹೇಳಿದ್ದಾರೆ. ಆದರೂ ಗ್ರಾಮಸ್ಥರು ಆತಂಕದಲ್ಲೇ ದಿನ ಕಳೆಯುತ್ತಿದ್ದಾರೆ.

 

lokesh

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

2 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

4 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

4 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

9 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

9 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

9 hours ago