BREAKING NEWS

40 ಜನರಿಗೆ ಕಚ್ಚಿ ಸಾವನ್ನಪ್ಪಿದ ರೇಬಿಸ್ ಸೋಂಕಿತ ಮಗು

ಉತ್ತರ ಪ್ರದೇಶ : ಕೆಲವು ವಾರಗಳ ಹಿಂದೆ ಬೀದಿ ನಾಯಿಗಳ ಕಡಿತಕ್ಕೆ ಒಳಗಾಗಿದ್ದ ಉತ್ತರ ಪ್ರದೇಶದ ಹಳ್ಳಿಯೊಂದರ ಎರಡೂವರೆ ವರ್ಷಗಳ ಹೆಣ್ಣು ಮಗು ರೇಬಿಸ್ ಸೋಂಕಿಗೆ ತುತ್ತಾಗಿ ಸೋಮವಾರ ಮೃತಪಟ್ಟಿದೆ. ಈ ಮಗುವಿನ ಸಾವು ಇಡೀ ಗ್ರಾಮಕ್ಕೇ ಆತಂಕ ತಂದೊಡ್ಡಿದೆ.

ಈ ಮಗು ಸಾವನ್ನಪ್ಪುವ ಮುನ್ನ 40ಕ್ಕೂ ಹೆಚ್ಚು ಜನರಿಗೆ ಕಚ್ಚಿದೆ. ಇದೀಗ ಎಲ್ಲರಿಗೂ ರೇಬಿಸ್ ಸೋಂಕು ತಗುಲಿದೆ. ಉತ್ತರ ಪ್ರದೇಶದ ಜಲೌನ್ ಜಿಲ್ಲೆಯ ಕೊಂಚ್ ತಾಲ್ಲೂಕಿನ ಕ್ಯೋಲಾರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹೆಣ್ಣು ಮಗು ತನ್ನ ತಾಯಿಯ ಜೊತೆ ಸೋದರ ಮಾವನ ಮನೆಯಲ್ಲಿ ಇತ್ತು. ಈ ವೇಳೆ ಮಗುವಿಗೆ ಬೀದಿ ನಾಯಿಗಳು ಕಡಿದಿದ್ದವು. ಹೀಗಾಗಿ, ಮಗು ರೇಬಿಸ್ ಸೋಂಕಿಗೆ ತುತ್ತಾಗಿತ್ತು.
ಆದರೆ ಮಗುವನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿರಲಿಲ್ಲ. ಈ ಮಗು ಕಳೆದ ಮೂರು ವಾರಗಳ ಅವಧಿಯಲ್ಲಿ ಗ್ರಾಮದ 40 ಜನರಿಗೆ ಕಚ್ಚಿತ್ತು. ಇದೀಗ ಎಲ್ಲರೂ ರೇಬಿಸ್ ಸೋಂಕಿಗೆ ಒಳಗಾಗಿದ್ದಾರೆ. ಇನ್ನು ಈ ಬಾಲಕಿಗೆ ಕಡಿದ ಬಳಿಕ ರೇಬಿಸ್ ಸೋಂಕಿತ ಬೀದಿ ನಾಯಿ ಕೂಡಾ ಸಾವನ್ನಪ್ಪಿತ್ತು.

ಮಗುವಿಗೆ ನಾಯಿ ಕಡಿದ ಬಳಿಕ ಪೋಷಕರು ಗ್ರಾಮದ ನಾಟಿ ವೈದ್ಯರ ಬಳಿ ಕರೆದೊಯ್ದಿದ್ದರು. ಯಾವುದೇ ವೃತ್ತಿಪರ ಪದವೀಧರ ವೈದ್ಯರ ಬಳಿ ಚಿಕಿತ್ಸೆ ಕೊಡಿಸಿರಲಿಲ್ಲ. ಮಗುವನ್ನು ಗ್ರಾಮಕ್ಕೆ ವಾಪಸ್ ಕರೆ ತಂದ ಬಳಿಕ ಮಗುವಿನ ದೇಹದಲ್ಲಿ ರೇಬಿಸ್ ರೋಗದ ಲಕ್ಷಣಗಳು ಕಂಡು ಬಂದಿದ್ದವು. ಆದರೆ, ಮಗುವಿನ ಪೋಷಕರು ಮಾತ್ರ ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದ್ದರು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ರೇಬಿಸ್ ರೋಗದ ಲಕ್ಷಣ ಹೊಂದಿದ್ದ ಮಗುವು ತನ್ನ ಬಳಿ ಬಂದ ಎಲ್ಲರಿಗೂ ಉಗುರಿನಿಂದ ಪರಚುತ್ತಿತ್ತು. ಸಿಕ್ಕ ಸಿಕ್ಕ ಕಡೆ ಕಚ್ಚುತ್ತಿತ್ತು. ಮಗುವಿನ ವರ್ತನೆಯಲ್ಲಿ ವಿಪರೀತ ಬದಲಾವಣೆ ಕಂಡು ಬಂದಿದ್ದರೂ ಯಾರೂ ಗಂಭೀರವಾಗಿ ಪರಿಗಣಿಸಿರಲಿಲ್ಲ.

ಕಳೆದ ಶುಕ್ರವಾರ ಮಗು ಕುಸಿದು ಬಿದ್ದಾಗ ಮಗುವಿನ ಹೆತ್ತವರು ಕೂಡಲೇ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು. ಜಿಲ್ಲಾಸ್ಪತ್ರೆ ವೈದ್ಯರು ಕೂಡಲೇ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಝಾನ್ಸಿಗೆ ಕರೆದೊಯ್ಯುವಂತೆ ಸೂಚಿಸಿದ್ದರು. ಆದರೆ, ಕುಟುಂಬಸ್ಥರು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಸೋಮವಾರ ಮಗು ಸಾವನ್ನಪ್ಪಿದೆ.

ಮಗು ಕಚ್ಚಿದ ಪರಿಣಾಮ ಇದೀಗ ಕ್ಯೋಲಾರಿ ಗ್ರಾಮದ 40 ಜನರು ರೇಬಿಸ್ ಸೋಂಕಿತರಾಗಿದ್ದಾರೆ. ಎಲ್ಲರಿಗೂ ರೇಬಿಸ್ ಸೋಂಕು ನಿರೋಧಕ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ದಿನೇಶ್ ಬರ್ದಾರಿಯಾ ಅವರು ಹೇಳಿದ್ದಾರೆ. ರೇಬಿಸ್ ಸೋಂಕಿನ ವಿರುದ್ದ ಚಿಕಿತ್ಸೆ ನೀಡಲು ಸೂಕ್ತ ವೈದ್ಯಕೀಯ ವ್ಯವಸ್ಥೆ ಲಭ್ಯವಿದೆ. ಹೀಗಾಗಿ, ಯಾರೂ ಆತಂಕಕ್ಕೆ ಒಳಗಾಗೋದು ಬೇಡ ಎಂದು ವೈದ್ಯರು ಅಭಯ ಹೇಳಿದ್ದಾರೆ. ಆದರೂ ಗ್ರಾಮಸ್ಥರು ಆತಂಕದಲ್ಲೇ ದಿನ ಕಳೆಯುತ್ತಿದ್ದಾರೆ.

 

lokesh

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

5 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

5 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

5 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

7 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

7 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

8 hours ago