BREAKING NEWS

40 ಜನರಿಗೆ ಕಚ್ಚಿ ಸಾವನ್ನಪ್ಪಿದ ರೇಬಿಸ್ ಸೋಂಕಿತ ಮಗು

ಉತ್ತರ ಪ್ರದೇಶ : ಕೆಲವು ವಾರಗಳ ಹಿಂದೆ ಬೀದಿ ನಾಯಿಗಳ ಕಡಿತಕ್ಕೆ ಒಳಗಾಗಿದ್ದ ಉತ್ತರ ಪ್ರದೇಶದ ಹಳ್ಳಿಯೊಂದರ ಎರಡೂವರೆ ವರ್ಷಗಳ ಹೆಣ್ಣು ಮಗು ರೇಬಿಸ್ ಸೋಂಕಿಗೆ ತುತ್ತಾಗಿ ಸೋಮವಾರ ಮೃತಪಟ್ಟಿದೆ. ಈ ಮಗುವಿನ ಸಾವು ಇಡೀ ಗ್ರಾಮಕ್ಕೇ ಆತಂಕ ತಂದೊಡ್ಡಿದೆ.

ಈ ಮಗು ಸಾವನ್ನಪ್ಪುವ ಮುನ್ನ 40ಕ್ಕೂ ಹೆಚ್ಚು ಜನರಿಗೆ ಕಚ್ಚಿದೆ. ಇದೀಗ ಎಲ್ಲರಿಗೂ ರೇಬಿಸ್ ಸೋಂಕು ತಗುಲಿದೆ. ಉತ್ತರ ಪ್ರದೇಶದ ಜಲೌನ್ ಜಿಲ್ಲೆಯ ಕೊಂಚ್ ತಾಲ್ಲೂಕಿನ ಕ್ಯೋಲಾರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹೆಣ್ಣು ಮಗು ತನ್ನ ತಾಯಿಯ ಜೊತೆ ಸೋದರ ಮಾವನ ಮನೆಯಲ್ಲಿ ಇತ್ತು. ಈ ವೇಳೆ ಮಗುವಿಗೆ ಬೀದಿ ನಾಯಿಗಳು ಕಡಿದಿದ್ದವು. ಹೀಗಾಗಿ, ಮಗು ರೇಬಿಸ್ ಸೋಂಕಿಗೆ ತುತ್ತಾಗಿತ್ತು.
ಆದರೆ ಮಗುವನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿರಲಿಲ್ಲ. ಈ ಮಗು ಕಳೆದ ಮೂರು ವಾರಗಳ ಅವಧಿಯಲ್ಲಿ ಗ್ರಾಮದ 40 ಜನರಿಗೆ ಕಚ್ಚಿತ್ತು. ಇದೀಗ ಎಲ್ಲರೂ ರೇಬಿಸ್ ಸೋಂಕಿಗೆ ಒಳಗಾಗಿದ್ದಾರೆ. ಇನ್ನು ಈ ಬಾಲಕಿಗೆ ಕಡಿದ ಬಳಿಕ ರೇಬಿಸ್ ಸೋಂಕಿತ ಬೀದಿ ನಾಯಿ ಕೂಡಾ ಸಾವನ್ನಪ್ಪಿತ್ತು.

ಮಗುವಿಗೆ ನಾಯಿ ಕಡಿದ ಬಳಿಕ ಪೋಷಕರು ಗ್ರಾಮದ ನಾಟಿ ವೈದ್ಯರ ಬಳಿ ಕರೆದೊಯ್ದಿದ್ದರು. ಯಾವುದೇ ವೃತ್ತಿಪರ ಪದವೀಧರ ವೈದ್ಯರ ಬಳಿ ಚಿಕಿತ್ಸೆ ಕೊಡಿಸಿರಲಿಲ್ಲ. ಮಗುವನ್ನು ಗ್ರಾಮಕ್ಕೆ ವಾಪಸ್ ಕರೆ ತಂದ ಬಳಿಕ ಮಗುವಿನ ದೇಹದಲ್ಲಿ ರೇಬಿಸ್ ರೋಗದ ಲಕ್ಷಣಗಳು ಕಂಡು ಬಂದಿದ್ದವು. ಆದರೆ, ಮಗುವಿನ ಪೋಷಕರು ಮಾತ್ರ ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದ್ದರು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ರೇಬಿಸ್ ರೋಗದ ಲಕ್ಷಣ ಹೊಂದಿದ್ದ ಮಗುವು ತನ್ನ ಬಳಿ ಬಂದ ಎಲ್ಲರಿಗೂ ಉಗುರಿನಿಂದ ಪರಚುತ್ತಿತ್ತು. ಸಿಕ್ಕ ಸಿಕ್ಕ ಕಡೆ ಕಚ್ಚುತ್ತಿತ್ತು. ಮಗುವಿನ ವರ್ತನೆಯಲ್ಲಿ ವಿಪರೀತ ಬದಲಾವಣೆ ಕಂಡು ಬಂದಿದ್ದರೂ ಯಾರೂ ಗಂಭೀರವಾಗಿ ಪರಿಗಣಿಸಿರಲಿಲ್ಲ.

ಕಳೆದ ಶುಕ್ರವಾರ ಮಗು ಕುಸಿದು ಬಿದ್ದಾಗ ಮಗುವಿನ ಹೆತ್ತವರು ಕೂಡಲೇ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು. ಜಿಲ್ಲಾಸ್ಪತ್ರೆ ವೈದ್ಯರು ಕೂಡಲೇ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಝಾನ್ಸಿಗೆ ಕರೆದೊಯ್ಯುವಂತೆ ಸೂಚಿಸಿದ್ದರು. ಆದರೆ, ಕುಟುಂಬಸ್ಥರು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಸೋಮವಾರ ಮಗು ಸಾವನ್ನಪ್ಪಿದೆ.

ಮಗು ಕಚ್ಚಿದ ಪರಿಣಾಮ ಇದೀಗ ಕ್ಯೋಲಾರಿ ಗ್ರಾಮದ 40 ಜನರು ರೇಬಿಸ್ ಸೋಂಕಿತರಾಗಿದ್ದಾರೆ. ಎಲ್ಲರಿಗೂ ರೇಬಿಸ್ ಸೋಂಕು ನಿರೋಧಕ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ದಿನೇಶ್ ಬರ್ದಾರಿಯಾ ಅವರು ಹೇಳಿದ್ದಾರೆ. ರೇಬಿಸ್ ಸೋಂಕಿನ ವಿರುದ್ದ ಚಿಕಿತ್ಸೆ ನೀಡಲು ಸೂಕ್ತ ವೈದ್ಯಕೀಯ ವ್ಯವಸ್ಥೆ ಲಭ್ಯವಿದೆ. ಹೀಗಾಗಿ, ಯಾರೂ ಆತಂಕಕ್ಕೆ ಒಳಗಾಗೋದು ಬೇಡ ಎಂದು ವೈದ್ಯರು ಅಭಯ ಹೇಳಿದ್ದಾರೆ. ಆದರೂ ಗ್ರಾಮಸ್ಥರು ಆತಂಕದಲ್ಲೇ ದಿನ ಕಳೆಯುತ್ತಿದ್ದಾರೆ.

 

lokesh

Recent Posts

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

7 hours ago

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…

8 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ!

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

9 hours ago

ಎಂ.ಬಿ.ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು

ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…

9 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

9 hours ago

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ : ಈಶ್ವರ ಖಂಡ್ರೆ

ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…

10 hours ago