ಒಡಿಶಾ: ಒಡಿಶಾದ ಮಯೂರ್ಭಂಜ್ ಜಿಲ್ಲೆಯ ಸಿಮಿಲಿಪಾಲ್ ರಾಷ್ಟ್ರೀಯ ಉದ್ಯಾನವನದಲ್ಲಿ ಅಪರೂಪಕ್ಕೆ ಕಾಣಸಿಗುತ್ತಿದ್ದ ಕಪ್ಪು ಹುಲಿಯು ಸಾವನ್ನಪಿರುವುದಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಸಿಮಿಲಿಪಾಲ್ ನ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಸುಶೀಲ್ ಕುಮಾರ್ ಪೊಪ್ಲಿ ಹುಲಿ ಸಾವಿನ ಸುದ್ದಿಯನ್ನು ಖಚಿತಪಡಿಸಿದ್ದು, ಸಿಮಿಲಿಪಾಲ್ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಏಪ್ರಿಲ್ 30ರ ಬೆಳಿಗ್ಗೆ ಸಿಮಿಲಿಪಾಲ್ ದಕ್ಷಿಣ ವಿಭಾಗದ ಸಿಬ್ಬಂದಿ ಬದಮಕ್ಕಬಾಡಿ ಬೀಟ್ ಪ್ರದೇಶದಲ್ಲಿ ಗಸ್ತು ತಿರುಗುವಾಗ ಹುಲಿಯ ಮೃತದೇಹವನ್ನು ಪತ್ತೆಯಾಗಿದ್ದು, ಕೂಡಲೇ ಮೇಲಾಧಿಕಾರಿಗಳಿಗೆ ತಿಳಿಸಿದ್ದಾರೆ.
ಟಿ-27 ಎಂದು ಗುರುತಿಸಲಾಗುತಿದ್ದ ಈ ಕಪ್ಪು ಹಲಿಯು ಸುಮಾರು 3.5-4 ವರ್ಷ ವಯಸ್ಸಿನದಾಗಿದ್ದು, ದೇಹದ ಮೇಲಿನ ಗಾಯಗಳ ಆಧಾರದ ಮೇಲೆ ಹುಲಿಯೂ ಮತ್ತೊಂದು ಹುಲಿಯೊಂದಿಗೆ ಕಾದಾಡಿ ಸಾವನ್ನಪಿರುವುದಾಗಿ ಶಂಕಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಹುಲಿಯ ಮೃತದೇಹವನ್ನು ಎನ್ಟಿಸಿಎ ಪ್ರತಿನಿಧಿ, ಜಂಟಿ ಕಾರ್ಯಪಡೆ (ಜೆಟಿಎಫ್) ಸದಸ್ಯರು, ಹುಲಿ ಸಂರ್ಕಷಿತ ಪ್ರದೇಶದ ನಿರ್ದೇಶಕರು, ಪಶುವೈದ್ಯರು ಮತ್ತು ಇತರ ಸಿಬ್ಬಂದಿ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ.
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…