BREAKING NEWS

ಸರಕು ಸಾಗಣೆಯಿಂದ ಮೈಸೂರು ರೈಲ್ವೆಗೆ ದಾಖಲೆಯ 877 ಕೋಟಿ ರೂ. ಆದಾಯ

ಮೈಸೂರು : ಮೈಸೂರು ರೈಲ್ವೆ ವಿಭಾಗವು 2023ರ ಮಾರ್ಚ್ 28ರವರೆಗೆ 9.378 ದಶಲಕ್ಷ ಟನ್‌ ಸರಕು ಸಾಗಣೆ ಮಾಡಿ 877 ಕೋಟಿ ರೂ. ಆದಾಯ ಗಳಿಸಿದೆ. ಇದು ಇಲ್ಲಿಯವರೆಗೆ ಮೈಸೂರು ವಿಭಾಗದಲ್ಲಿ ದಾಖಲಾದ ಅತ್ಯಧಿಕ ಸರಕು ಸಾಗಣೆ ಆದಾಯವಾಗಿದೆ.
ಇದು 2021-22ರಲ್ಲಿ ಒಟ್ಟು ಸರಕು ಸಾಗಣೆ ಆದಾಯಕ್ಕಿಂತ ಶೇ. 27.43ರಷ್ಟು ಮತ್ತು ಪ್ರಸಕ್ತ ಹಣಕಾಸು ವರ್ಷಕ್ಕೆ ನೈಋುತ್ಯ ರೈಲ್ವೆ ಪ್ರಧಾನ ಕಾರ್ಯಾಲಯ ನಿಗದಿಪಡಿಸಿದ ಗುರಿಗಿಂತ ಶೇ. 18.52 ಹೆಚ್ಚಾಗಿದೆ. ಪ್ರಸಕ್ತ ವರ್ಷದ ಸಂಪೂರ್ಣ ಗುರಿಯಾದ 739.99 ಕೋಟಿ ರೂ.ಗಳನ್ನು ವಿಭಾಗವು 329 ದಿನಗಳಲ್ಲಿಯೇ ಮೀರಿದೆ.
9.230 ದಶಲಕ್ಷ ಟನ್‌ಗಳಷ್ಟು ಇದ್ದ ಗುರಿಯನ್ನು ಮೀರಿಸಿ 9.378 ದಶಲಕ್ಷ ಟನ್‌ಗಳಷ್ಟು ಸರಕು ಸಾಗಿಸಲಾಗಿದ್ದು, ಇದು ಮೈಸೂರು ವಿಭಾಗದಲ್ಲಿ ದಾಖಲಾದ ಅತ್ಯಧಿಕ ಸರಕು ಸಾಗಣೆಯಾಗಿದೆ. ಭಾರತೀಯ ರೈಲ್ವೆಯ ‘ಹಂಗ್ರಿ ಫಾರ್‌ ಕಾರ್ಗೋ’ ಕರೆಗೆ ಓಗೊಟ್ಟ ಮೈಸೂರು ವಿಭಾಗ ಈ ಸಾಧನೆ ಮಾಡಿದೆ ಎಂದು ಪ್ರಕಟಣೆಯಲ್ಲಿ ರೈಲ್ವೆ ಮೈಸೂರು ವಿಭಾಗ ತಿಳಿಸಿದೆ.
ಪೆಟ್ರೋಲಿಯಂ ಉತ್ಪನ್ನಗಳ ಸಾಗಣೆಯಿಂದ ಬರುವ ಆದಾಯವು ಆರ್ಥಿಕ ವರ್ಷ 2022ರಲ್ಲಿ ಸಾಧಿಸಲಾಗಿದ್ದ 122 ಕೋಟಿ ರೂ.ಗಳಿಗೆ ಹೋಲಿಸಿದರೆ ಶೇ. 51ರಷ್ಟು ಹೆಚ್ಚಳವಾಗಿದ್ದು 185 ಕೋಟಿ ರೂ.ಗೆ ತಲುಪಿದೆ. ಇತರ ಸರಕುಗಳಾದ ಆಹಾರ ಧಾನ್ಯಗಳು, ಸಕ್ಕರೆ, ಸಿಮೆಂಟ್‌ ಮತ್ತು ದ್ವಿಚಕ್ರ ವಾಹನಗಳ ಆದಾಯ ಸಹ ದೊಡ್ಡ ಪ್ರಮಾಣದಲ್ಲಿ ಏರಿಕೆ ಕಂಡಿವೆ.

ಹಳಿ ದ್ವಿಗುಣಗೊಳಿಸುವಿಕೆ, ಮುಖ್ಯ ಮಾರ್ಗಗಳ ವಿದ್ಯುದೀಕರಣ, ಸರಕು ಸಾಗಣೆ ನಿರ್ವಹಣೆಯ ಟರ್ಮಿನಲ್‌ಗಳ ಉನ್ನತೀಕರಣ ಮತ್ತು ರೌಂಡ್‌-ದಿ-ಕ್ಲಾಕ್‌ ಲೋಡಿಂಗ್‌ನ ಸೌಲಭ್ಯದಂತಹ ನಿರ್ಣಯಗಳು ಮತ್ತು ಮೂಲಸೌಕರ್ಯ ಸಾಮರ್ಥ್ಯ-ನಿರ್ಮಾಣ ಯೋಜನೆಗಳ ತ್ವರಿತ ಕಾರ್ಯಗತಗೊಳಿಸುವಿಕೆ ಮುಂತಾದ ಕಾರಣಗಳಿಂದಾಗಿ ವಿಭಾಗವು ಸರಕು ಸಾಗಣೆಯ ಕಾರ್ಯಕ್ಷಮತೆಯನ್ನು ಮುಂಬರುವ ವರ್ಷಗಳಲ್ಲಿಯೂ ಮತ್ತಷ್ಟು ಮೇಲಕ್ಕೆ ಕೊಂಡೊಯ್ಯುವ ವಿಶ್ವಾಸವನ್ನು ವ್ಯಕ್ತಪಡಿಸಿದೆ.
ರೈಲ್ವೆಯು ಸಾರಿಗೆ ಕ್ಷೇತ್ರದಲ್ಲಿನ ತನ್ನ ಪಾಲನ್ನು ಹೆಚ್ಚಿಸಲು ದೇಶಾದ್ಯಂತ ಖನಿಜ ಜಿಲ್ಲೆಗಳನ್ನು ಗುರುತಿಸುತ್ತಿದೆ. ಹೀಗಾಗಿ ಮೈಸೂರು ವಿಭಾಗವು ಸದ್ಯದ ಭವಿಷ್ಯದಲ್ಲಿ ಸರಕು ಸಾಗಣೆಯ ವಿಭಾಗದಲ್ಲಿ ತನ್ನ ಪಾತ್ರವನ್ನು ವಿಸ್ತರಿಸಿಕೊಳ್ಳುವ ಹೊಸ್ತಿಲಲ್ಲಿದೆ. ಈ ದಾಖಲೆಯ ಸಹಕರಿಸಿದವರಿಗೆ ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಶಿಲ್ಪಿ ಅಗರ್ವಾಲ್‌ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

lokesh

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

6 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

6 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

6 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

6 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

6 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

6 hours ago