BREAKING NEWS

ಸರಕು ಸಾಗಣೆಯಿಂದ ಮೈಸೂರು ರೈಲ್ವೆಗೆ ದಾಖಲೆಯ 877 ಕೋಟಿ ರೂ. ಆದಾಯ

ಮೈಸೂರು : ಮೈಸೂರು ರೈಲ್ವೆ ವಿಭಾಗವು 2023ರ ಮಾರ್ಚ್ 28ರವರೆಗೆ 9.378 ದಶಲಕ್ಷ ಟನ್‌ ಸರಕು ಸಾಗಣೆ ಮಾಡಿ 877 ಕೋಟಿ ರೂ. ಆದಾಯ ಗಳಿಸಿದೆ. ಇದು ಇಲ್ಲಿಯವರೆಗೆ ಮೈಸೂರು ವಿಭಾಗದಲ್ಲಿ ದಾಖಲಾದ ಅತ್ಯಧಿಕ ಸರಕು ಸಾಗಣೆ ಆದಾಯವಾಗಿದೆ.
ಇದು 2021-22ರಲ್ಲಿ ಒಟ್ಟು ಸರಕು ಸಾಗಣೆ ಆದಾಯಕ್ಕಿಂತ ಶೇ. 27.43ರಷ್ಟು ಮತ್ತು ಪ್ರಸಕ್ತ ಹಣಕಾಸು ವರ್ಷಕ್ಕೆ ನೈಋುತ್ಯ ರೈಲ್ವೆ ಪ್ರಧಾನ ಕಾರ್ಯಾಲಯ ನಿಗದಿಪಡಿಸಿದ ಗುರಿಗಿಂತ ಶೇ. 18.52 ಹೆಚ್ಚಾಗಿದೆ. ಪ್ರಸಕ್ತ ವರ್ಷದ ಸಂಪೂರ್ಣ ಗುರಿಯಾದ 739.99 ಕೋಟಿ ರೂ.ಗಳನ್ನು ವಿಭಾಗವು 329 ದಿನಗಳಲ್ಲಿಯೇ ಮೀರಿದೆ.
9.230 ದಶಲಕ್ಷ ಟನ್‌ಗಳಷ್ಟು ಇದ್ದ ಗುರಿಯನ್ನು ಮೀರಿಸಿ 9.378 ದಶಲಕ್ಷ ಟನ್‌ಗಳಷ್ಟು ಸರಕು ಸಾಗಿಸಲಾಗಿದ್ದು, ಇದು ಮೈಸೂರು ವಿಭಾಗದಲ್ಲಿ ದಾಖಲಾದ ಅತ್ಯಧಿಕ ಸರಕು ಸಾಗಣೆಯಾಗಿದೆ. ಭಾರತೀಯ ರೈಲ್ವೆಯ ‘ಹಂಗ್ರಿ ಫಾರ್‌ ಕಾರ್ಗೋ’ ಕರೆಗೆ ಓಗೊಟ್ಟ ಮೈಸೂರು ವಿಭಾಗ ಈ ಸಾಧನೆ ಮಾಡಿದೆ ಎಂದು ಪ್ರಕಟಣೆಯಲ್ಲಿ ರೈಲ್ವೆ ಮೈಸೂರು ವಿಭಾಗ ತಿಳಿಸಿದೆ.
ಪೆಟ್ರೋಲಿಯಂ ಉತ್ಪನ್ನಗಳ ಸಾಗಣೆಯಿಂದ ಬರುವ ಆದಾಯವು ಆರ್ಥಿಕ ವರ್ಷ 2022ರಲ್ಲಿ ಸಾಧಿಸಲಾಗಿದ್ದ 122 ಕೋಟಿ ರೂ.ಗಳಿಗೆ ಹೋಲಿಸಿದರೆ ಶೇ. 51ರಷ್ಟು ಹೆಚ್ಚಳವಾಗಿದ್ದು 185 ಕೋಟಿ ರೂ.ಗೆ ತಲುಪಿದೆ. ಇತರ ಸರಕುಗಳಾದ ಆಹಾರ ಧಾನ್ಯಗಳು, ಸಕ್ಕರೆ, ಸಿಮೆಂಟ್‌ ಮತ್ತು ದ್ವಿಚಕ್ರ ವಾಹನಗಳ ಆದಾಯ ಸಹ ದೊಡ್ಡ ಪ್ರಮಾಣದಲ್ಲಿ ಏರಿಕೆ ಕಂಡಿವೆ.

ಹಳಿ ದ್ವಿಗುಣಗೊಳಿಸುವಿಕೆ, ಮುಖ್ಯ ಮಾರ್ಗಗಳ ವಿದ್ಯುದೀಕರಣ, ಸರಕು ಸಾಗಣೆ ನಿರ್ವಹಣೆಯ ಟರ್ಮಿನಲ್‌ಗಳ ಉನ್ನತೀಕರಣ ಮತ್ತು ರೌಂಡ್‌-ದಿ-ಕ್ಲಾಕ್‌ ಲೋಡಿಂಗ್‌ನ ಸೌಲಭ್ಯದಂತಹ ನಿರ್ಣಯಗಳು ಮತ್ತು ಮೂಲಸೌಕರ್ಯ ಸಾಮರ್ಥ್ಯ-ನಿರ್ಮಾಣ ಯೋಜನೆಗಳ ತ್ವರಿತ ಕಾರ್ಯಗತಗೊಳಿಸುವಿಕೆ ಮುಂತಾದ ಕಾರಣಗಳಿಂದಾಗಿ ವಿಭಾಗವು ಸರಕು ಸಾಗಣೆಯ ಕಾರ್ಯಕ್ಷಮತೆಯನ್ನು ಮುಂಬರುವ ವರ್ಷಗಳಲ್ಲಿಯೂ ಮತ್ತಷ್ಟು ಮೇಲಕ್ಕೆ ಕೊಂಡೊಯ್ಯುವ ವಿಶ್ವಾಸವನ್ನು ವ್ಯಕ್ತಪಡಿಸಿದೆ.
ರೈಲ್ವೆಯು ಸಾರಿಗೆ ಕ್ಷೇತ್ರದಲ್ಲಿನ ತನ್ನ ಪಾಲನ್ನು ಹೆಚ್ಚಿಸಲು ದೇಶಾದ್ಯಂತ ಖನಿಜ ಜಿಲ್ಲೆಗಳನ್ನು ಗುರುತಿಸುತ್ತಿದೆ. ಹೀಗಾಗಿ ಮೈಸೂರು ವಿಭಾಗವು ಸದ್ಯದ ಭವಿಷ್ಯದಲ್ಲಿ ಸರಕು ಸಾಗಣೆಯ ವಿಭಾಗದಲ್ಲಿ ತನ್ನ ಪಾತ್ರವನ್ನು ವಿಸ್ತರಿಸಿಕೊಳ್ಳುವ ಹೊಸ್ತಿಲಲ್ಲಿದೆ. ಈ ದಾಖಲೆಯ ಸಹಕರಿಸಿದವರಿಗೆ ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಶಿಲ್ಪಿ ಅಗರ್ವಾಲ್‌ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

lokesh

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

6 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

33 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago