BREAKING NEWS

ಸರಕು ಸಾಗಣೆಯಿಂದ ಮೈಸೂರು ರೈಲ್ವೆಗೆ ದಾಖಲೆಯ 877 ಕೋಟಿ ರೂ. ಆದಾಯ

ಮೈಸೂರು : ಮೈಸೂರು ರೈಲ್ವೆ ವಿಭಾಗವು 2023ರ ಮಾರ್ಚ್ 28ರವರೆಗೆ 9.378 ದಶಲಕ್ಷ ಟನ್‌ ಸರಕು ಸಾಗಣೆ ಮಾಡಿ 877 ಕೋಟಿ ರೂ. ಆದಾಯ ಗಳಿಸಿದೆ. ಇದು ಇಲ್ಲಿಯವರೆಗೆ ಮೈಸೂರು ವಿಭಾಗದಲ್ಲಿ ದಾಖಲಾದ ಅತ್ಯಧಿಕ ಸರಕು ಸಾಗಣೆ ಆದಾಯವಾಗಿದೆ.
ಇದು 2021-22ರಲ್ಲಿ ಒಟ್ಟು ಸರಕು ಸಾಗಣೆ ಆದಾಯಕ್ಕಿಂತ ಶೇ. 27.43ರಷ್ಟು ಮತ್ತು ಪ್ರಸಕ್ತ ಹಣಕಾಸು ವರ್ಷಕ್ಕೆ ನೈಋುತ್ಯ ರೈಲ್ವೆ ಪ್ರಧಾನ ಕಾರ್ಯಾಲಯ ನಿಗದಿಪಡಿಸಿದ ಗುರಿಗಿಂತ ಶೇ. 18.52 ಹೆಚ್ಚಾಗಿದೆ. ಪ್ರಸಕ್ತ ವರ್ಷದ ಸಂಪೂರ್ಣ ಗುರಿಯಾದ 739.99 ಕೋಟಿ ರೂ.ಗಳನ್ನು ವಿಭಾಗವು 329 ದಿನಗಳಲ್ಲಿಯೇ ಮೀರಿದೆ.
9.230 ದಶಲಕ್ಷ ಟನ್‌ಗಳಷ್ಟು ಇದ್ದ ಗುರಿಯನ್ನು ಮೀರಿಸಿ 9.378 ದಶಲಕ್ಷ ಟನ್‌ಗಳಷ್ಟು ಸರಕು ಸಾಗಿಸಲಾಗಿದ್ದು, ಇದು ಮೈಸೂರು ವಿಭಾಗದಲ್ಲಿ ದಾಖಲಾದ ಅತ್ಯಧಿಕ ಸರಕು ಸಾಗಣೆಯಾಗಿದೆ. ಭಾರತೀಯ ರೈಲ್ವೆಯ ‘ಹಂಗ್ರಿ ಫಾರ್‌ ಕಾರ್ಗೋ’ ಕರೆಗೆ ಓಗೊಟ್ಟ ಮೈಸೂರು ವಿಭಾಗ ಈ ಸಾಧನೆ ಮಾಡಿದೆ ಎಂದು ಪ್ರಕಟಣೆಯಲ್ಲಿ ರೈಲ್ವೆ ಮೈಸೂರು ವಿಭಾಗ ತಿಳಿಸಿದೆ.
ಪೆಟ್ರೋಲಿಯಂ ಉತ್ಪನ್ನಗಳ ಸಾಗಣೆಯಿಂದ ಬರುವ ಆದಾಯವು ಆರ್ಥಿಕ ವರ್ಷ 2022ರಲ್ಲಿ ಸಾಧಿಸಲಾಗಿದ್ದ 122 ಕೋಟಿ ರೂ.ಗಳಿಗೆ ಹೋಲಿಸಿದರೆ ಶೇ. 51ರಷ್ಟು ಹೆಚ್ಚಳವಾಗಿದ್ದು 185 ಕೋಟಿ ರೂ.ಗೆ ತಲುಪಿದೆ. ಇತರ ಸರಕುಗಳಾದ ಆಹಾರ ಧಾನ್ಯಗಳು, ಸಕ್ಕರೆ, ಸಿಮೆಂಟ್‌ ಮತ್ತು ದ್ವಿಚಕ್ರ ವಾಹನಗಳ ಆದಾಯ ಸಹ ದೊಡ್ಡ ಪ್ರಮಾಣದಲ್ಲಿ ಏರಿಕೆ ಕಂಡಿವೆ.

ಹಳಿ ದ್ವಿಗುಣಗೊಳಿಸುವಿಕೆ, ಮುಖ್ಯ ಮಾರ್ಗಗಳ ವಿದ್ಯುದೀಕರಣ, ಸರಕು ಸಾಗಣೆ ನಿರ್ವಹಣೆಯ ಟರ್ಮಿನಲ್‌ಗಳ ಉನ್ನತೀಕರಣ ಮತ್ತು ರೌಂಡ್‌-ದಿ-ಕ್ಲಾಕ್‌ ಲೋಡಿಂಗ್‌ನ ಸೌಲಭ್ಯದಂತಹ ನಿರ್ಣಯಗಳು ಮತ್ತು ಮೂಲಸೌಕರ್ಯ ಸಾಮರ್ಥ್ಯ-ನಿರ್ಮಾಣ ಯೋಜನೆಗಳ ತ್ವರಿತ ಕಾರ್ಯಗತಗೊಳಿಸುವಿಕೆ ಮುಂತಾದ ಕಾರಣಗಳಿಂದಾಗಿ ವಿಭಾಗವು ಸರಕು ಸಾಗಣೆಯ ಕಾರ್ಯಕ್ಷಮತೆಯನ್ನು ಮುಂಬರುವ ವರ್ಷಗಳಲ್ಲಿಯೂ ಮತ್ತಷ್ಟು ಮೇಲಕ್ಕೆ ಕೊಂಡೊಯ್ಯುವ ವಿಶ್ವಾಸವನ್ನು ವ್ಯಕ್ತಪಡಿಸಿದೆ.
ರೈಲ್ವೆಯು ಸಾರಿಗೆ ಕ್ಷೇತ್ರದಲ್ಲಿನ ತನ್ನ ಪಾಲನ್ನು ಹೆಚ್ಚಿಸಲು ದೇಶಾದ್ಯಂತ ಖನಿಜ ಜಿಲ್ಲೆಗಳನ್ನು ಗುರುತಿಸುತ್ತಿದೆ. ಹೀಗಾಗಿ ಮೈಸೂರು ವಿಭಾಗವು ಸದ್ಯದ ಭವಿಷ್ಯದಲ್ಲಿ ಸರಕು ಸಾಗಣೆಯ ವಿಭಾಗದಲ್ಲಿ ತನ್ನ ಪಾತ್ರವನ್ನು ವಿಸ್ತರಿಸಿಕೊಳ್ಳುವ ಹೊಸ್ತಿಲಲ್ಲಿದೆ. ಈ ದಾಖಲೆಯ ಸಹಕರಿಸಿದವರಿಗೆ ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಶಿಲ್ಪಿ ಅಗರ್ವಾಲ್‌ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

lokesh

Recent Posts

ಯತೀಂದ್ರ ಸಿದ್ಧರಾಮಯ್ಯ ಅವಹೇಳನ ಪ್ರಕರಣ: ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ ಸೆಲ್ ವಿರುದ್ಧ ದೂರು ದಾಖಲು

ಮೈಸೂರು: ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್‌ ಮಾಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಹಾಗೂ ಬಿಜೆಪಿ ಐಟಿ…

23 mins ago

ಫೆಬ್ರವರಿ.13ರಿಂದ ಹಂಪಿ ಉತ್ಸವ-2026

ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ…

31 mins ago

ಹನೂರು ಕ್ಷೇತ್ರದಲ್ಲಿ 15 ವರ್ಷಗಳಿಂದ ಆಗದೇ ಇದ್ದ ಅಭಿವೃದ್ಧಿ ಕಾರ್ಯ ನಾನು ಮಾಡಿ ತೋರಿಸಿದ್ದೇನೆ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವಿಧಾನಸಭಾ ಕ್ಷೇತ್ರದ ಮತದಾರರ ಋಣದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ…

42 mins ago

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 3.39 ಕೋಟಿ ಮೌಲ್ಯದ ಗಾಂಜಾ ಸೀಜ್‌

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ…

1 hour ago

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ ಮ್ಯಾಚ್‌ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಮ್ಯಾಚ್‌ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…

2 hours ago

ಹೋಗೇನಕಲ್‌ ಫಾಲ್ಸ್‌ಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ 50 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…

2 hours ago