BREAKING NEWS

ಸರಕು ಸಾಗಣೆಯಿಂದ ಮೈಸೂರು ರೈಲ್ವೆಗೆ ದಾಖಲೆಯ 877 ಕೋಟಿ ರೂ. ಆದಾಯ

ಮೈಸೂರು : ಮೈಸೂರು ರೈಲ್ವೆ ವಿಭಾಗವು 2023ರ ಮಾರ್ಚ್ 28ರವರೆಗೆ 9.378 ದಶಲಕ್ಷ ಟನ್‌ ಸರಕು ಸಾಗಣೆ ಮಾಡಿ 877 ಕೋಟಿ ರೂ. ಆದಾಯ ಗಳಿಸಿದೆ. ಇದು ಇಲ್ಲಿಯವರೆಗೆ ಮೈಸೂರು ವಿಭಾಗದಲ್ಲಿ ದಾಖಲಾದ ಅತ್ಯಧಿಕ ಸರಕು ಸಾಗಣೆ ಆದಾಯವಾಗಿದೆ.
ಇದು 2021-22ರಲ್ಲಿ ಒಟ್ಟು ಸರಕು ಸಾಗಣೆ ಆದಾಯಕ್ಕಿಂತ ಶೇ. 27.43ರಷ್ಟು ಮತ್ತು ಪ್ರಸಕ್ತ ಹಣಕಾಸು ವರ್ಷಕ್ಕೆ ನೈಋುತ್ಯ ರೈಲ್ವೆ ಪ್ರಧಾನ ಕಾರ್ಯಾಲಯ ನಿಗದಿಪಡಿಸಿದ ಗುರಿಗಿಂತ ಶೇ. 18.52 ಹೆಚ್ಚಾಗಿದೆ. ಪ್ರಸಕ್ತ ವರ್ಷದ ಸಂಪೂರ್ಣ ಗುರಿಯಾದ 739.99 ಕೋಟಿ ರೂ.ಗಳನ್ನು ವಿಭಾಗವು 329 ದಿನಗಳಲ್ಲಿಯೇ ಮೀರಿದೆ.
9.230 ದಶಲಕ್ಷ ಟನ್‌ಗಳಷ್ಟು ಇದ್ದ ಗುರಿಯನ್ನು ಮೀರಿಸಿ 9.378 ದಶಲಕ್ಷ ಟನ್‌ಗಳಷ್ಟು ಸರಕು ಸಾಗಿಸಲಾಗಿದ್ದು, ಇದು ಮೈಸೂರು ವಿಭಾಗದಲ್ಲಿ ದಾಖಲಾದ ಅತ್ಯಧಿಕ ಸರಕು ಸಾಗಣೆಯಾಗಿದೆ. ಭಾರತೀಯ ರೈಲ್ವೆಯ ‘ಹಂಗ್ರಿ ಫಾರ್‌ ಕಾರ್ಗೋ’ ಕರೆಗೆ ಓಗೊಟ್ಟ ಮೈಸೂರು ವಿಭಾಗ ಈ ಸಾಧನೆ ಮಾಡಿದೆ ಎಂದು ಪ್ರಕಟಣೆಯಲ್ಲಿ ರೈಲ್ವೆ ಮೈಸೂರು ವಿಭಾಗ ತಿಳಿಸಿದೆ.
ಪೆಟ್ರೋಲಿಯಂ ಉತ್ಪನ್ನಗಳ ಸಾಗಣೆಯಿಂದ ಬರುವ ಆದಾಯವು ಆರ್ಥಿಕ ವರ್ಷ 2022ರಲ್ಲಿ ಸಾಧಿಸಲಾಗಿದ್ದ 122 ಕೋಟಿ ರೂ.ಗಳಿಗೆ ಹೋಲಿಸಿದರೆ ಶೇ. 51ರಷ್ಟು ಹೆಚ್ಚಳವಾಗಿದ್ದು 185 ಕೋಟಿ ರೂ.ಗೆ ತಲುಪಿದೆ. ಇತರ ಸರಕುಗಳಾದ ಆಹಾರ ಧಾನ್ಯಗಳು, ಸಕ್ಕರೆ, ಸಿಮೆಂಟ್‌ ಮತ್ತು ದ್ವಿಚಕ್ರ ವಾಹನಗಳ ಆದಾಯ ಸಹ ದೊಡ್ಡ ಪ್ರಮಾಣದಲ್ಲಿ ಏರಿಕೆ ಕಂಡಿವೆ.

ಹಳಿ ದ್ವಿಗುಣಗೊಳಿಸುವಿಕೆ, ಮುಖ್ಯ ಮಾರ್ಗಗಳ ವಿದ್ಯುದೀಕರಣ, ಸರಕು ಸಾಗಣೆ ನಿರ್ವಹಣೆಯ ಟರ್ಮಿನಲ್‌ಗಳ ಉನ್ನತೀಕರಣ ಮತ್ತು ರೌಂಡ್‌-ದಿ-ಕ್ಲಾಕ್‌ ಲೋಡಿಂಗ್‌ನ ಸೌಲಭ್ಯದಂತಹ ನಿರ್ಣಯಗಳು ಮತ್ತು ಮೂಲಸೌಕರ್ಯ ಸಾಮರ್ಥ್ಯ-ನಿರ್ಮಾಣ ಯೋಜನೆಗಳ ತ್ವರಿತ ಕಾರ್ಯಗತಗೊಳಿಸುವಿಕೆ ಮುಂತಾದ ಕಾರಣಗಳಿಂದಾಗಿ ವಿಭಾಗವು ಸರಕು ಸಾಗಣೆಯ ಕಾರ್ಯಕ್ಷಮತೆಯನ್ನು ಮುಂಬರುವ ವರ್ಷಗಳಲ್ಲಿಯೂ ಮತ್ತಷ್ಟು ಮೇಲಕ್ಕೆ ಕೊಂಡೊಯ್ಯುವ ವಿಶ್ವಾಸವನ್ನು ವ್ಯಕ್ತಪಡಿಸಿದೆ.
ರೈಲ್ವೆಯು ಸಾರಿಗೆ ಕ್ಷೇತ್ರದಲ್ಲಿನ ತನ್ನ ಪಾಲನ್ನು ಹೆಚ್ಚಿಸಲು ದೇಶಾದ್ಯಂತ ಖನಿಜ ಜಿಲ್ಲೆಗಳನ್ನು ಗುರುತಿಸುತ್ತಿದೆ. ಹೀಗಾಗಿ ಮೈಸೂರು ವಿಭಾಗವು ಸದ್ಯದ ಭವಿಷ್ಯದಲ್ಲಿ ಸರಕು ಸಾಗಣೆಯ ವಿಭಾಗದಲ್ಲಿ ತನ್ನ ಪಾತ್ರವನ್ನು ವಿಸ್ತರಿಸಿಕೊಳ್ಳುವ ಹೊಸ್ತಿಲಲ್ಲಿದೆ. ಈ ದಾಖಲೆಯ ಸಹಕರಿಸಿದವರಿಗೆ ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಶಿಲ್ಪಿ ಅಗರ್ವಾಲ್‌ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

lokesh

Recent Posts

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

1 hour ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

4 hours ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

6 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

6 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

7 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

10 hours ago