BREAKING NEWS

ಸರಕು ಸಾಗಣೆಯಿಂದ ಮೈಸೂರು ರೈಲ್ವೆಗೆ ದಾಖಲೆಯ 877 ಕೋಟಿ ರೂ. ಆದಾಯ

ಮೈಸೂರು : ಮೈಸೂರು ರೈಲ್ವೆ ವಿಭಾಗವು 2023ರ ಮಾರ್ಚ್ 28ರವರೆಗೆ 9.378 ದಶಲಕ್ಷ ಟನ್‌ ಸರಕು ಸಾಗಣೆ ಮಾಡಿ 877 ಕೋಟಿ ರೂ. ಆದಾಯ ಗಳಿಸಿದೆ. ಇದು ಇಲ್ಲಿಯವರೆಗೆ ಮೈಸೂರು ವಿಭಾಗದಲ್ಲಿ ದಾಖಲಾದ ಅತ್ಯಧಿಕ ಸರಕು ಸಾಗಣೆ ಆದಾಯವಾಗಿದೆ.
ಇದು 2021-22ರಲ್ಲಿ ಒಟ್ಟು ಸರಕು ಸಾಗಣೆ ಆದಾಯಕ್ಕಿಂತ ಶೇ. 27.43ರಷ್ಟು ಮತ್ತು ಪ್ರಸಕ್ತ ಹಣಕಾಸು ವರ್ಷಕ್ಕೆ ನೈಋುತ್ಯ ರೈಲ್ವೆ ಪ್ರಧಾನ ಕಾರ್ಯಾಲಯ ನಿಗದಿಪಡಿಸಿದ ಗುರಿಗಿಂತ ಶೇ. 18.52 ಹೆಚ್ಚಾಗಿದೆ. ಪ್ರಸಕ್ತ ವರ್ಷದ ಸಂಪೂರ್ಣ ಗುರಿಯಾದ 739.99 ಕೋಟಿ ರೂ.ಗಳನ್ನು ವಿಭಾಗವು 329 ದಿನಗಳಲ್ಲಿಯೇ ಮೀರಿದೆ.
9.230 ದಶಲಕ್ಷ ಟನ್‌ಗಳಷ್ಟು ಇದ್ದ ಗುರಿಯನ್ನು ಮೀರಿಸಿ 9.378 ದಶಲಕ್ಷ ಟನ್‌ಗಳಷ್ಟು ಸರಕು ಸಾಗಿಸಲಾಗಿದ್ದು, ಇದು ಮೈಸೂರು ವಿಭಾಗದಲ್ಲಿ ದಾಖಲಾದ ಅತ್ಯಧಿಕ ಸರಕು ಸಾಗಣೆಯಾಗಿದೆ. ಭಾರತೀಯ ರೈಲ್ವೆಯ ‘ಹಂಗ್ರಿ ಫಾರ್‌ ಕಾರ್ಗೋ’ ಕರೆಗೆ ಓಗೊಟ್ಟ ಮೈಸೂರು ವಿಭಾಗ ಈ ಸಾಧನೆ ಮಾಡಿದೆ ಎಂದು ಪ್ರಕಟಣೆಯಲ್ಲಿ ರೈಲ್ವೆ ಮೈಸೂರು ವಿಭಾಗ ತಿಳಿಸಿದೆ.
ಪೆಟ್ರೋಲಿಯಂ ಉತ್ಪನ್ನಗಳ ಸಾಗಣೆಯಿಂದ ಬರುವ ಆದಾಯವು ಆರ್ಥಿಕ ವರ್ಷ 2022ರಲ್ಲಿ ಸಾಧಿಸಲಾಗಿದ್ದ 122 ಕೋಟಿ ರೂ.ಗಳಿಗೆ ಹೋಲಿಸಿದರೆ ಶೇ. 51ರಷ್ಟು ಹೆಚ್ಚಳವಾಗಿದ್ದು 185 ಕೋಟಿ ರೂ.ಗೆ ತಲುಪಿದೆ. ಇತರ ಸರಕುಗಳಾದ ಆಹಾರ ಧಾನ್ಯಗಳು, ಸಕ್ಕರೆ, ಸಿಮೆಂಟ್‌ ಮತ್ತು ದ್ವಿಚಕ್ರ ವಾಹನಗಳ ಆದಾಯ ಸಹ ದೊಡ್ಡ ಪ್ರಮಾಣದಲ್ಲಿ ಏರಿಕೆ ಕಂಡಿವೆ.

ಹಳಿ ದ್ವಿಗುಣಗೊಳಿಸುವಿಕೆ, ಮುಖ್ಯ ಮಾರ್ಗಗಳ ವಿದ್ಯುದೀಕರಣ, ಸರಕು ಸಾಗಣೆ ನಿರ್ವಹಣೆಯ ಟರ್ಮಿನಲ್‌ಗಳ ಉನ್ನತೀಕರಣ ಮತ್ತು ರೌಂಡ್‌-ದಿ-ಕ್ಲಾಕ್‌ ಲೋಡಿಂಗ್‌ನ ಸೌಲಭ್ಯದಂತಹ ನಿರ್ಣಯಗಳು ಮತ್ತು ಮೂಲಸೌಕರ್ಯ ಸಾಮರ್ಥ್ಯ-ನಿರ್ಮಾಣ ಯೋಜನೆಗಳ ತ್ವರಿತ ಕಾರ್ಯಗತಗೊಳಿಸುವಿಕೆ ಮುಂತಾದ ಕಾರಣಗಳಿಂದಾಗಿ ವಿಭಾಗವು ಸರಕು ಸಾಗಣೆಯ ಕಾರ್ಯಕ್ಷಮತೆಯನ್ನು ಮುಂಬರುವ ವರ್ಷಗಳಲ್ಲಿಯೂ ಮತ್ತಷ್ಟು ಮೇಲಕ್ಕೆ ಕೊಂಡೊಯ್ಯುವ ವಿಶ್ವಾಸವನ್ನು ವ್ಯಕ್ತಪಡಿಸಿದೆ.
ರೈಲ್ವೆಯು ಸಾರಿಗೆ ಕ್ಷೇತ್ರದಲ್ಲಿನ ತನ್ನ ಪಾಲನ್ನು ಹೆಚ್ಚಿಸಲು ದೇಶಾದ್ಯಂತ ಖನಿಜ ಜಿಲ್ಲೆಗಳನ್ನು ಗುರುತಿಸುತ್ತಿದೆ. ಹೀಗಾಗಿ ಮೈಸೂರು ವಿಭಾಗವು ಸದ್ಯದ ಭವಿಷ್ಯದಲ್ಲಿ ಸರಕು ಸಾಗಣೆಯ ವಿಭಾಗದಲ್ಲಿ ತನ್ನ ಪಾತ್ರವನ್ನು ವಿಸ್ತರಿಸಿಕೊಳ್ಳುವ ಹೊಸ್ತಿಲಲ್ಲಿದೆ. ಈ ದಾಖಲೆಯ ಸಹಕರಿಸಿದವರಿಗೆ ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಶಿಲ್ಪಿ ಅಗರ್ವಾಲ್‌ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

lokesh

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

2 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

4 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

4 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

9 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

9 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

9 hours ago