BREAKING NEWS

ಹೊಸ ವರ್ಷಕ್ಕೆ ಮಧ್ಯ ಪ್ರಿಯರಿಗೆ ಶಾಕ್‌

ಬೆಂಗಳೂರು : ಹೊಸ ವರ್ಷಕ್ಕೆ ಕೌಂಟ್‌ಡೌನ್‌ ಶುರುವಾಗಿರುವಾಗಲೇ ಮಧ್ಯ ಪ್ರಿಯರಿಗೆ ಬಿಗ್‌ ಶಾಕ್‌ ಎದುರಾಗಿದೆ.

ಮಧ್ಯ ಕಂಪನಿಗಳು ಹೊಸ ವರ್ಷ ಆಗಮನದ ಜೋಶ್‌ ನಲ್ಲಿದ್ದ ಪಾನ ಪ್ರಿಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟುವಂತೆ ಮಾಡಿವೆ.

ರಾಜ್ಯದಲ್ಲಿ ಈಗಾಗಲೇ ದಿನ ಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಸರ್ಕಾರದ ಖಜಾನೆಗೆ ಬೂಸ್ಟರ್‌ ಡೋಸ್‌ ಆಗಿದ್ದ ಪಾನಪ್ರಿಯರಿಗೆ ಇದೀಗ ಬೆಲೆ ಏರಿಕೆಯ ಅಮಲೇರಲು ತಯಾರಿ ನಡೆದಿದೆ. ರಾಜ್ಯ ಸರ್ಕಾರ ಆರಂಭದಲ್ಲಿಯೇ ಆರ್ಥಿಕ ಮೂಲವಾದ ಅಬಕಾರಿ ಸುಂಕದ ಬೆಲೆಯಲ್ಲಿ 20% ಏರಿಕೆ ಮಾಡಿತ್ತು. ಇದೀಗ ನ್ಯೂ ಇಯರ್‌ ಗೆ ಎಣ್ಣೆ ಪಾರ್ಟಿ ಮಾಡಲು ಚಿಂತಿಸಿದ್ದವರ ಆಸೆಗೆ ಮಧ್ಯದ ಬೆಲೆ ಏರಿಕೆ ತಣ್ಣೀರೆರಚಿದೆ.

ಜನವರಿ 1 ರಿಂದ ಮಧ್ಯದ ದರ ಏರಿಕೆಗೆ ಸೂಚನೆ ನೀಡಲಾಗಿದೆ. ಪ್ರಸ್ತುತ ಒಟಿ 180 ಎಂಎಲ್‌ ಗೆ 100 ರೂ. ಇದೆ. ಜನವರಿ ಒಂದರಿಂದ 180 ಎಂಎಲ್‌ ನ ಒಟಿ ಪ್ಯಾಕೆಟ್‌ ಬೆಲೆ 123 ರೂ. ಆಗಲಿದೆ. ಇನ್ನು ಬಿಪಿ ದರ ಪ್ರಸ್ತುತ 123 ರೂ. ಇದೆ. ಜನವರಿ ಒಂದರಿಂದ 159 ರೂ. ಆಗಲಿದೆ.

ಕೆಳ ವರ್ಗದ ಜನ ಅತಿ ಹೆಚ್ಚು ಸೇವನೆ ಮಾಡುವ ಮದ್ಯದ ದರ ಏರಿಕೆಗೆ ಚಿಂತನೆ ನಡೆದಿದೆ. ಮಧ್ಯ ತಯಾರಿಕಾ ಕಂಪನಿಗಳು ಜನವರಿ 1 ರಿಂದ ದರ ಏರಿಕೆ ಮಾಡುವಂತೆ ಬಾರ್‌ ಮಾಲೀಕರಿಗೆ ಸೂಚನೆ ನೀಡಿವೆ. ಕಂಪನಿಗಳ ಉತ್ಪಾದನಾ ವೆಚ್ಚ, ಸರಕು ಸಾಗಾಣೆ ವೆಚ್ಚಗಳು ಹೆಚ್ಚಾಗಿರುವ ಕಾರಣದಿಂದಾಗಿ ಎಣ್ಣೆಯ ಬೆಲೆ ಏರಿಕೆ ಮಾಡುವುದು ಕಂಪನಿಗಳಿಗೆ ಅತ್ಯಗತ್ಯವಾಗಿದೆ. ಹಾಗಾಗಿ ಹೊಸ ವರ್ಷಕ್ಕೆ ಮದ್ಯ ಪ್ರಿಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ.

lokesh

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

6 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

9 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

11 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

11 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

11 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

11 hours ago