BREAKING NEWS

ಹೊಸ ವರ್ಷಕ್ಕೆ ಮಧ್ಯ ಪ್ರಿಯರಿಗೆ ಶಾಕ್‌

ಬೆಂಗಳೂರು : ಹೊಸ ವರ್ಷಕ್ಕೆ ಕೌಂಟ್‌ಡೌನ್‌ ಶುರುವಾಗಿರುವಾಗಲೇ ಮಧ್ಯ ಪ್ರಿಯರಿಗೆ ಬಿಗ್‌ ಶಾಕ್‌ ಎದುರಾಗಿದೆ.

ಮಧ್ಯ ಕಂಪನಿಗಳು ಹೊಸ ವರ್ಷ ಆಗಮನದ ಜೋಶ್‌ ನಲ್ಲಿದ್ದ ಪಾನ ಪ್ರಿಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟುವಂತೆ ಮಾಡಿವೆ.

ರಾಜ್ಯದಲ್ಲಿ ಈಗಾಗಲೇ ದಿನ ಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಸರ್ಕಾರದ ಖಜಾನೆಗೆ ಬೂಸ್ಟರ್‌ ಡೋಸ್‌ ಆಗಿದ್ದ ಪಾನಪ್ರಿಯರಿಗೆ ಇದೀಗ ಬೆಲೆ ಏರಿಕೆಯ ಅಮಲೇರಲು ತಯಾರಿ ನಡೆದಿದೆ. ರಾಜ್ಯ ಸರ್ಕಾರ ಆರಂಭದಲ್ಲಿಯೇ ಆರ್ಥಿಕ ಮೂಲವಾದ ಅಬಕಾರಿ ಸುಂಕದ ಬೆಲೆಯಲ್ಲಿ 20% ಏರಿಕೆ ಮಾಡಿತ್ತು. ಇದೀಗ ನ್ಯೂ ಇಯರ್‌ ಗೆ ಎಣ್ಣೆ ಪಾರ್ಟಿ ಮಾಡಲು ಚಿಂತಿಸಿದ್ದವರ ಆಸೆಗೆ ಮಧ್ಯದ ಬೆಲೆ ಏರಿಕೆ ತಣ್ಣೀರೆರಚಿದೆ.

ಜನವರಿ 1 ರಿಂದ ಮಧ್ಯದ ದರ ಏರಿಕೆಗೆ ಸೂಚನೆ ನೀಡಲಾಗಿದೆ. ಪ್ರಸ್ತುತ ಒಟಿ 180 ಎಂಎಲ್‌ ಗೆ 100 ರೂ. ಇದೆ. ಜನವರಿ ಒಂದರಿಂದ 180 ಎಂಎಲ್‌ ನ ಒಟಿ ಪ್ಯಾಕೆಟ್‌ ಬೆಲೆ 123 ರೂ. ಆಗಲಿದೆ. ಇನ್ನು ಬಿಪಿ ದರ ಪ್ರಸ್ತುತ 123 ರೂ. ಇದೆ. ಜನವರಿ ಒಂದರಿಂದ 159 ರೂ. ಆಗಲಿದೆ.

ಕೆಳ ವರ್ಗದ ಜನ ಅತಿ ಹೆಚ್ಚು ಸೇವನೆ ಮಾಡುವ ಮದ್ಯದ ದರ ಏರಿಕೆಗೆ ಚಿಂತನೆ ನಡೆದಿದೆ. ಮಧ್ಯ ತಯಾರಿಕಾ ಕಂಪನಿಗಳು ಜನವರಿ 1 ರಿಂದ ದರ ಏರಿಕೆ ಮಾಡುವಂತೆ ಬಾರ್‌ ಮಾಲೀಕರಿಗೆ ಸೂಚನೆ ನೀಡಿವೆ. ಕಂಪನಿಗಳ ಉತ್ಪಾದನಾ ವೆಚ್ಚ, ಸರಕು ಸಾಗಾಣೆ ವೆಚ್ಚಗಳು ಹೆಚ್ಚಾಗಿರುವ ಕಾರಣದಿಂದಾಗಿ ಎಣ್ಣೆಯ ಬೆಲೆ ಏರಿಕೆ ಮಾಡುವುದು ಕಂಪನಿಗಳಿಗೆ ಅತ್ಯಗತ್ಯವಾಗಿದೆ. ಹಾಗಾಗಿ ಹೊಸ ವರ್ಷಕ್ಕೆ ಮದ್ಯ ಪ್ರಿಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ.

lokesh

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

4 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

4 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

5 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

6 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

7 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

8 hours ago