BREAKING NEWS

ಹೊಸ ವರ್ಷಕ್ಕೆ ಮಧ್ಯ ಪ್ರಿಯರಿಗೆ ಶಾಕ್‌

ಬೆಂಗಳೂರು : ಹೊಸ ವರ್ಷಕ್ಕೆ ಕೌಂಟ್‌ಡೌನ್‌ ಶುರುವಾಗಿರುವಾಗಲೇ ಮಧ್ಯ ಪ್ರಿಯರಿಗೆ ಬಿಗ್‌ ಶಾಕ್‌ ಎದುರಾಗಿದೆ.

ಮಧ್ಯ ಕಂಪನಿಗಳು ಹೊಸ ವರ್ಷ ಆಗಮನದ ಜೋಶ್‌ ನಲ್ಲಿದ್ದ ಪಾನ ಪ್ರಿಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟುವಂತೆ ಮಾಡಿವೆ.

ರಾಜ್ಯದಲ್ಲಿ ಈಗಾಗಲೇ ದಿನ ಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಸರ್ಕಾರದ ಖಜಾನೆಗೆ ಬೂಸ್ಟರ್‌ ಡೋಸ್‌ ಆಗಿದ್ದ ಪಾನಪ್ರಿಯರಿಗೆ ಇದೀಗ ಬೆಲೆ ಏರಿಕೆಯ ಅಮಲೇರಲು ತಯಾರಿ ನಡೆದಿದೆ. ರಾಜ್ಯ ಸರ್ಕಾರ ಆರಂಭದಲ್ಲಿಯೇ ಆರ್ಥಿಕ ಮೂಲವಾದ ಅಬಕಾರಿ ಸುಂಕದ ಬೆಲೆಯಲ್ಲಿ 20% ಏರಿಕೆ ಮಾಡಿತ್ತು. ಇದೀಗ ನ್ಯೂ ಇಯರ್‌ ಗೆ ಎಣ್ಣೆ ಪಾರ್ಟಿ ಮಾಡಲು ಚಿಂತಿಸಿದ್ದವರ ಆಸೆಗೆ ಮಧ್ಯದ ಬೆಲೆ ಏರಿಕೆ ತಣ್ಣೀರೆರಚಿದೆ.

ಜನವರಿ 1 ರಿಂದ ಮಧ್ಯದ ದರ ಏರಿಕೆಗೆ ಸೂಚನೆ ನೀಡಲಾಗಿದೆ. ಪ್ರಸ್ತುತ ಒಟಿ 180 ಎಂಎಲ್‌ ಗೆ 100 ರೂ. ಇದೆ. ಜನವರಿ ಒಂದರಿಂದ 180 ಎಂಎಲ್‌ ನ ಒಟಿ ಪ್ಯಾಕೆಟ್‌ ಬೆಲೆ 123 ರೂ. ಆಗಲಿದೆ. ಇನ್ನು ಬಿಪಿ ದರ ಪ್ರಸ್ತುತ 123 ರೂ. ಇದೆ. ಜನವರಿ ಒಂದರಿಂದ 159 ರೂ. ಆಗಲಿದೆ.

ಕೆಳ ವರ್ಗದ ಜನ ಅತಿ ಹೆಚ್ಚು ಸೇವನೆ ಮಾಡುವ ಮದ್ಯದ ದರ ಏರಿಕೆಗೆ ಚಿಂತನೆ ನಡೆದಿದೆ. ಮಧ್ಯ ತಯಾರಿಕಾ ಕಂಪನಿಗಳು ಜನವರಿ 1 ರಿಂದ ದರ ಏರಿಕೆ ಮಾಡುವಂತೆ ಬಾರ್‌ ಮಾಲೀಕರಿಗೆ ಸೂಚನೆ ನೀಡಿವೆ. ಕಂಪನಿಗಳ ಉತ್ಪಾದನಾ ವೆಚ್ಚ, ಸರಕು ಸಾಗಾಣೆ ವೆಚ್ಚಗಳು ಹೆಚ್ಚಾಗಿರುವ ಕಾರಣದಿಂದಾಗಿ ಎಣ್ಣೆಯ ಬೆಲೆ ಏರಿಕೆ ಮಾಡುವುದು ಕಂಪನಿಗಳಿಗೆ ಅತ್ಯಗತ್ಯವಾಗಿದೆ. ಹಾಗಾಗಿ ಹೊಸ ವರ್ಷಕ್ಕೆ ಮದ್ಯ ಪ್ರಿಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ.

lokesh

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

10 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

11 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago