BREAKING NEWS

ಹೊಸ ವರ್ಷಕ್ಕೆ ಮಧ್ಯ ಪ್ರಿಯರಿಗೆ ಶಾಕ್‌

ಬೆಂಗಳೂರು : ಹೊಸ ವರ್ಷಕ್ಕೆ ಕೌಂಟ್‌ಡೌನ್‌ ಶುರುವಾಗಿರುವಾಗಲೇ ಮಧ್ಯ ಪ್ರಿಯರಿಗೆ ಬಿಗ್‌ ಶಾಕ್‌ ಎದುರಾಗಿದೆ.

ಮಧ್ಯ ಕಂಪನಿಗಳು ಹೊಸ ವರ್ಷ ಆಗಮನದ ಜೋಶ್‌ ನಲ್ಲಿದ್ದ ಪಾನ ಪ್ರಿಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟುವಂತೆ ಮಾಡಿವೆ.

ರಾಜ್ಯದಲ್ಲಿ ಈಗಾಗಲೇ ದಿನ ಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಸರ್ಕಾರದ ಖಜಾನೆಗೆ ಬೂಸ್ಟರ್‌ ಡೋಸ್‌ ಆಗಿದ್ದ ಪಾನಪ್ರಿಯರಿಗೆ ಇದೀಗ ಬೆಲೆ ಏರಿಕೆಯ ಅಮಲೇರಲು ತಯಾರಿ ನಡೆದಿದೆ. ರಾಜ್ಯ ಸರ್ಕಾರ ಆರಂಭದಲ್ಲಿಯೇ ಆರ್ಥಿಕ ಮೂಲವಾದ ಅಬಕಾರಿ ಸುಂಕದ ಬೆಲೆಯಲ್ಲಿ 20% ಏರಿಕೆ ಮಾಡಿತ್ತು. ಇದೀಗ ನ್ಯೂ ಇಯರ್‌ ಗೆ ಎಣ್ಣೆ ಪಾರ್ಟಿ ಮಾಡಲು ಚಿಂತಿಸಿದ್ದವರ ಆಸೆಗೆ ಮಧ್ಯದ ಬೆಲೆ ಏರಿಕೆ ತಣ್ಣೀರೆರಚಿದೆ.

ಜನವರಿ 1 ರಿಂದ ಮಧ್ಯದ ದರ ಏರಿಕೆಗೆ ಸೂಚನೆ ನೀಡಲಾಗಿದೆ. ಪ್ರಸ್ತುತ ಒಟಿ 180 ಎಂಎಲ್‌ ಗೆ 100 ರೂ. ಇದೆ. ಜನವರಿ ಒಂದರಿಂದ 180 ಎಂಎಲ್‌ ನ ಒಟಿ ಪ್ಯಾಕೆಟ್‌ ಬೆಲೆ 123 ರೂ. ಆಗಲಿದೆ. ಇನ್ನು ಬಿಪಿ ದರ ಪ್ರಸ್ತುತ 123 ರೂ. ಇದೆ. ಜನವರಿ ಒಂದರಿಂದ 159 ರೂ. ಆಗಲಿದೆ.

ಕೆಳ ವರ್ಗದ ಜನ ಅತಿ ಹೆಚ್ಚು ಸೇವನೆ ಮಾಡುವ ಮದ್ಯದ ದರ ಏರಿಕೆಗೆ ಚಿಂತನೆ ನಡೆದಿದೆ. ಮಧ್ಯ ತಯಾರಿಕಾ ಕಂಪನಿಗಳು ಜನವರಿ 1 ರಿಂದ ದರ ಏರಿಕೆ ಮಾಡುವಂತೆ ಬಾರ್‌ ಮಾಲೀಕರಿಗೆ ಸೂಚನೆ ನೀಡಿವೆ. ಕಂಪನಿಗಳ ಉತ್ಪಾದನಾ ವೆಚ್ಚ, ಸರಕು ಸಾಗಾಣೆ ವೆಚ್ಚಗಳು ಹೆಚ್ಚಾಗಿರುವ ಕಾರಣದಿಂದಾಗಿ ಎಣ್ಣೆಯ ಬೆಲೆ ಏರಿಕೆ ಮಾಡುವುದು ಕಂಪನಿಗಳಿಗೆ ಅತ್ಯಗತ್ಯವಾಗಿದೆ. ಹಾಗಾಗಿ ಹೊಸ ವರ್ಷಕ್ಕೆ ಮದ್ಯ ಪ್ರಿಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ.

lokesh

Recent Posts

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

1 hour ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

2 hours ago

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

3 hours ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

6 hours ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

7 hours ago