BREAKING NEWS

ಹೊಸ ವರ್ಷಕ್ಕೆ ಮಧ್ಯ ಪ್ರಿಯರಿಗೆ ಶಾಕ್‌

ಬೆಂಗಳೂರು : ಹೊಸ ವರ್ಷಕ್ಕೆ ಕೌಂಟ್‌ಡೌನ್‌ ಶುರುವಾಗಿರುವಾಗಲೇ ಮಧ್ಯ ಪ್ರಿಯರಿಗೆ ಬಿಗ್‌ ಶಾಕ್‌ ಎದುರಾಗಿದೆ.

ಮಧ್ಯ ಕಂಪನಿಗಳು ಹೊಸ ವರ್ಷ ಆಗಮನದ ಜೋಶ್‌ ನಲ್ಲಿದ್ದ ಪಾನ ಪ್ರಿಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟುವಂತೆ ಮಾಡಿವೆ.

ರಾಜ್ಯದಲ್ಲಿ ಈಗಾಗಲೇ ದಿನ ಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಸರ್ಕಾರದ ಖಜಾನೆಗೆ ಬೂಸ್ಟರ್‌ ಡೋಸ್‌ ಆಗಿದ್ದ ಪಾನಪ್ರಿಯರಿಗೆ ಇದೀಗ ಬೆಲೆ ಏರಿಕೆಯ ಅಮಲೇರಲು ತಯಾರಿ ನಡೆದಿದೆ. ರಾಜ್ಯ ಸರ್ಕಾರ ಆರಂಭದಲ್ಲಿಯೇ ಆರ್ಥಿಕ ಮೂಲವಾದ ಅಬಕಾರಿ ಸುಂಕದ ಬೆಲೆಯಲ್ಲಿ 20% ಏರಿಕೆ ಮಾಡಿತ್ತು. ಇದೀಗ ನ್ಯೂ ಇಯರ್‌ ಗೆ ಎಣ್ಣೆ ಪಾರ್ಟಿ ಮಾಡಲು ಚಿಂತಿಸಿದ್ದವರ ಆಸೆಗೆ ಮಧ್ಯದ ಬೆಲೆ ಏರಿಕೆ ತಣ್ಣೀರೆರಚಿದೆ.

ಜನವರಿ 1 ರಿಂದ ಮಧ್ಯದ ದರ ಏರಿಕೆಗೆ ಸೂಚನೆ ನೀಡಲಾಗಿದೆ. ಪ್ರಸ್ತುತ ಒಟಿ 180 ಎಂಎಲ್‌ ಗೆ 100 ರೂ. ಇದೆ. ಜನವರಿ ಒಂದರಿಂದ 180 ಎಂಎಲ್‌ ನ ಒಟಿ ಪ್ಯಾಕೆಟ್‌ ಬೆಲೆ 123 ರೂ. ಆಗಲಿದೆ. ಇನ್ನು ಬಿಪಿ ದರ ಪ್ರಸ್ತುತ 123 ರೂ. ಇದೆ. ಜನವರಿ ಒಂದರಿಂದ 159 ರೂ. ಆಗಲಿದೆ.

ಕೆಳ ವರ್ಗದ ಜನ ಅತಿ ಹೆಚ್ಚು ಸೇವನೆ ಮಾಡುವ ಮದ್ಯದ ದರ ಏರಿಕೆಗೆ ಚಿಂತನೆ ನಡೆದಿದೆ. ಮಧ್ಯ ತಯಾರಿಕಾ ಕಂಪನಿಗಳು ಜನವರಿ 1 ರಿಂದ ದರ ಏರಿಕೆ ಮಾಡುವಂತೆ ಬಾರ್‌ ಮಾಲೀಕರಿಗೆ ಸೂಚನೆ ನೀಡಿವೆ. ಕಂಪನಿಗಳ ಉತ್ಪಾದನಾ ವೆಚ್ಚ, ಸರಕು ಸಾಗಾಣೆ ವೆಚ್ಚಗಳು ಹೆಚ್ಚಾಗಿರುವ ಕಾರಣದಿಂದಾಗಿ ಎಣ್ಣೆಯ ಬೆಲೆ ಏರಿಕೆ ಮಾಡುವುದು ಕಂಪನಿಗಳಿಗೆ ಅತ್ಯಗತ್ಯವಾಗಿದೆ. ಹಾಗಾಗಿ ಹೊಸ ವರ್ಷಕ್ಕೆ ಮದ್ಯ ಪ್ರಿಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ.

lokesh

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 hour ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

2 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

3 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

4 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

4 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

5 hours ago