BREAKING NEWS

ಮೈಕಲ್‌ ಜೋರ್ಡಾನ್‌ ಧರಿಸಿದ್ದ ಶೂ $2.2 ಮಿಲಿಯನ್‌ಗೆ ಮಾರಾಟ

ಬಾಸ್ಕೆಟ್‌ಬಾಲ್‌ ದಿಗ್ಗಜ ಮೈಕಲ್‌ ಜೆಫ್ರಿ ಜೋರ್ಡಾನ್‌ ಅವರು 1998ರ ಎನ್‌ಬಿಎ ಅಂತಿಮ ಪಂದ್ಯದಲ್ಲಿ ಧರಿಸಿದ್ದ ‘ಏರ್ ಜೋರ್ಡಾನ್ 13‘ ಶೂ ದಾಖಲೆ $2.2 ಮಿಲಿಯನ್‌ಗೆ(₹180,545,950) ಮಾರಾಟವಾಗಿದೆ.ಈ ಮೂಲಕ ಜಗತ್ತಿನಲ್ಲಿಯೇ ಗರಿಷ್ಠ ಮೊತ್ತಕ್ಕೆ ಮಾರಾಟವಾದ ಶೂ ಎಂದೆನಿಸಿದೆ. ಇದೇ ಆಟದಲ್ಲಿ ಧರಿಸಿದ್ದ ಜೆರ್ಸಿ $10.1 ಮಿಲಿಯನ್‌ಗೆ ಮಾರಾಟವಾಗಿತ್ತು.

ಈ ಹಿಂದೆ ಅಂದರೆ 2021ರಲ್ಲಿ ಅಮೆರಿಕದ ಜನಪ್ರಿಯ ರ್ಯಾಪ್‌ ಹಾಡುಗಾರ, ಯೀಜಿ(yeezy) ಕಂಪನಿಯ ಮಾಲೀಕ ಕಾನ್ಯೆ ವೇಸ್ಟ್‌ ಅವರ ‘ನೈಕ್ ಏರ್ ಯೀಜಿ 1‘ ಎಂಬ ಸ್ನೀಕರ್‌ ಈ ದಾಖಲೆಯನ್ನು ಹೊಂದಿತ್ತು. ಈ ಸ್ನೀಕರ್‌ಅನ್ನು ಅಮೆರಿಕ ಮೂಲದ ದಲ್ಲಾಳಿ ಕಂಪೆನಿ ಸೋಥೆಬಿಸ್‌ ಸುಮಾರು $1.8 ಮಿಲಿಯನ್‌ಗೆ ಮಾರಟ ಮಾಡಿತ್ತು. ಇದೇ ವೇಳೆ ಜೋರ್ಡಾನ್‌ ಅವರ ನೈಕ್‌ ‘ಏರ್‌ ಶಿಪ್‘ ಶೂ $1.47 ಮಿಲಿಯನ್‌ಗೆ ಮಾರಟವಾಗಿತ್ತು.

1998ರಲ್ಲಿ ನಡೆದ ‘ಎನ್‌ಬಿಎ ಫೈನಲ್‌ ಗೇಮ್‌ 2‘ ಸರಣಿಯಲ್ಲಿ ಚಿಕಾಗೋ ಬುಲ್ಸ್‌(ಜೋರ್ಡಾನ್‌ ಪ್ರತಿನಿಧಿಸಿದ ತಂಡ) ಮತ್ತು ಉತಾಹ್‌ ಜಾಝ್‌(utah jazz) ನಡುವೆ ಪಂದ್ಯ ಏರ್ಪಟ್ಟಿತ್ತು. ಈ ಪಂದ್ಯವು ಜೋರ್ಡಾನ್‌ ಅವರ ಕೊನೆಯ ಪಂದ್ಯವಾಗಿತ್ತು. ಈ ಪಂದ್ಯದ ವೇಳೆ ಜೋರ್ಡಾನ್‌ ‘ಏರ್ ಜೋರ್ಡಾನ್ 13‘ ಸ್ನೀಕರ್ಸ್ ಧರಿಸಿದ್ದರು. ಉತಾಹ್ ಜಾಝ್ ವಿರುದ್ಧ ಬುಲ್ಸ್ 93-88 ಅಂತರದಲ್ಲಿ ಗೆಲುವು ಪಡೆದು ಚಾಂಪಿಯನ್‌ ಆಗಿತ್ತು. ಈ ಪಂದ್ಯವನ್ನು ‘ಲಾಸ್ಟ್‌ ಡ್ಯಾನ್ಸ್‌‘ ಎಂದು ಕರೆಯಲಾಗಿದೆ.

ಜೋರ್ಡಾನ್‌ ವೃತ್ತಿಪರ ಬಾಸ್ಕೆಟ್‌ಬಾಲ್‌ ಆಟಗಾರರಾಗಿದ್ದು, ಚಿಕಾಗೋ ಬುಲ್ಸ್‌ ತಂಡದಲ್ಲಿ ಪ್ರತಿನಿಧಿಸಿ ಸುಮಾರು 15 ಎನ್‌ಬಿಎ ಸರಣಿಯಲ್ಲಿ ಆಡಿದ್ದಾರೆ. ಆರು ಬಾರಿ ಎನ್‌ಬಿಎ ಚಾಂಪಿಯನ್‌ಶಿಪ್‌ ಗೆದ್ದಿದ್ದಾರೆ. 1980 ಮತ್ತು 1990 ರ ದಶಕದಲ್ಲಿ ವಿಶ್ವದಾದ್ಯಂತ ಬಾಸ್ಕೆಟ್‌ಬಾಲ್‌ ಜನಪ್ರಿಯತೆ ಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

lokesh

Recent Posts

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

51 mins ago

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

2 hours ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

2 hours ago

ಓದುಗರ ಪತ್ರ: ಆದ್ಯತೆಗಳ ಪಟ್ಟಿಯಲ್ಲಿ ಶಿಕ್ಷಣ ಎಲ್ಲಿದೆ?

ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆಗಳು ಮತ್ತೆ ಬಾಗಿಲು ತೆರೆದಿವೆ. ಹೊಸ ಕನಸುಗಳೊಂದಿಗೆ ಮಕ್ಕಳು ತರಗತಿಗಳತ್ತ ಹೆಜ್ಜೆ ಇಟ್ಟಿದ್ದಾರೆ. ನೂತನ…

2 hours ago

ಕೊಡಗಿನಲ್ಲಿ ಹೆಚ್‌ಪಿವಿ ಲಸಿಕೆ ಪಡೆಯಲು ಹಿಂದೇಟು

ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…

5 hours ago

ರಾಷ್ಟ್ರೀಯ ಕೆಟಲ್‌ಬಾಲ್ ಟೂರ್ನಿಯಲ್ಲಿ ಮಿಂಚಿದ ಪ್ರತಿಭೆಗಳು

ಹೇಮಂತ್‌ಕುಮಾರ್ ೧೦ ಚಿನ್ನ, ೬ ಬೆಳ್ಳಿ, ೩ ಕಂಚಿನ ಪದಕಗಳನ್ನು ಬಾಚಿದ ಆಕ್ಸ್‌ಫರ್ಡ್ ಅಕಾಡೆಮಿ ಮಂಡ್ಯ: ಪರಿಶ್ರಮವಿದ್ದೆಡೆ ಸಾಧನೆ ಸಾಧ್ಯ ಎಂಬುದಕ್ಕೆ ಶ್ರೀರಂಗಪಟ್ಟಣ…

5 hours ago