ಕಲಬುರಗಿ : ಕಲಬುರಗಿಯ ಬಾಲಕನಿಗೆ ಕಳೆದ ಎರಡು ತಿಂಗಳ ಅವದಿಯಲ್ಲಿ 9 ಬಾರಿ ಹಾವು ಕಚ್ಚಿದೆ.
ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಹಳಕರ್ಟಿ ಗ್ರಾಮದ ನಿವಾಸಿ ಪ್ರಜ್ವಲ್ಗೆ ಜುಲೈ 3ರಂದು ಮನೆ ಅಂಗಳದಲ್ಲಿ ಆಟವಾಡುವಾಗ ಹಾವು ಕಚ್ಚಿದೆ. ಆಗ ಈ ಬಾಲಕನ ಪೋಷಕರು ಬೇವಿನ ಮರದ ಎಲೆ ಹಾಗೂ ಖಾರದ ಪುಡಿ ತಿನ್ನಿಸಿದ್ದಾರೆ. ಆಗ ಬಾಯಿಗೆ ಸಿಹಿ, ಖಾರ ಎರಡೂ ಹತ್ತುತ್ತಿಲ್ಲ ಅಂತಾ ಬಾಲಕ ಹೇಳಿದ್ದಾನೆ. ಕೂಡಲೇ ಆತನನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿದ್ದಾರೆ. ಅದಾದ ಬಳಿಕ ನಾಲ್ಕು-ಐದು ದಿನಗಳ ಮಧ್ಯೆದಲ್ಲಿ ಈ ಬಾಲಕನಿಗೆ ನಿರಂತರವಾಗಿ ಇಲ್ಲಿಯವರೆಗೆ ಒಟ್ಟು 9 ಬಾರಿ ಹಾವು ಕಡಿತವಾಗಿರೋದು ಬೆಳಕಿಗೆ ಬಂದಿದೆ.
ಸದ್ಯ ಇಲ್ಲಿಯವರೆಗೆ 9 ಬಾರಿ ಹಾವು ಕಚ್ಚಿರುವ ಗುರುತುಗಳು ಕೂಡ ಆತನ ಕಾಲಿನಲ್ಲಿದೆ. ಅದರಲ್ಲಿ 5 ಬಾರಿ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ರೆ, ಇನ್ನುಳಿದ 4 ಬಾರಿ ಸ್ಥಳೀಯ ನಾಟಿ ವೈದ್ಯರಿಂದ ಔಷಧಿಯನ್ನು ಪೋಷಕರು ಕೊಡಿಸಿದ್ದಾರೆ. ಆದರೆ ಇಲ್ಲಿಯವರೆಗೂ ಆ ಹಾವು ಪ್ರಜ್ವಲ್ ಬಿಟ್ಟು ಯಾರ ಕಣ್ಣಿಗೂ ಸಹ ಕಂಡಿಲ್ಲ. ಹೀಗಾಗಿ ಆತನ ಮನೆ ಸುತ್ತ ಹಾವು ಹುಡುಕುವುದೇ ಸದ್ಯ ನೆರೆಹೊರೆಯವರ ಕೆಲಸವಾಗಿದೆ.
ಪ್ರತಿ ಬಾರಿ ಈ ಬಾಲಕ ಒಬ್ಬನ ಮೇಲೆ ಮಾತ್ರ ಹಾವು ಕಚ್ಚಿರುವುದಾಗಿ ಹೇಳುತ್ತಿರುವುದು ಹಲವು ಅನುಮಾನಕ್ಕೂ ಸಹ ಎಡೆಮಾಡಿಕೊಟ್ಟಿದೆ. ಇನ್ನು ಪ್ರತಿ ಬಾರಿ ಹಾವು ಕಚ್ಚಿದೆ ಅಂದಾಗ ಸಾವಿರಾರು ರೂಪಾಯಿ ಖರ್ಚು ಮಾಡಿ ಇತನ ಪೋಷಕರು ಮಗನಿಗೆ ಚಿಕಿತ್ಸೆ ಕೊಡಿಸುತ್ತಾ ಇದೀಗ ದಿಕ್ಕು ಕಾಣದಂತಾಗಿದೆ. ಹೀಗಾಗಿ ಈತನ ಪೋಷಕರು ಸಿಕ್ಕ ಸಿಕ್ಕ ದೇವರುಗಳ ಮೊರೆ ಹೋಗುತ್ತಿದ್ದಾರೆ.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…