BREAKING NEWS

2 ತಿಂಗಳಲ್ಲಿ ಒಂದೇ ಹುಡುಗನಿಗೆ 9 ಬಾರಿ ಕಚ್ಚಿದ ಹಾವು

ಕಲಬುರಗಿ : ಕಲಬುರಗಿಯ ಬಾಲಕನಿಗೆ ಕಳೆದ ಎರಡು ತಿಂಗಳ ಅವದಿಯಲ್ಲಿ 9 ಬಾರಿ ಹಾವು ಕಚ್ಚಿದೆ.

ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಹಳಕರ್ಟಿ ಗ್ರಾಮದ ನಿವಾಸಿ ಪ್ರಜ್ವಲ್‍ಗೆ ಜುಲೈ 3ರಂದು ಮನೆ ಅಂಗಳದಲ್ಲಿ ಆಟವಾಡುವಾಗ ಹಾವು ಕಚ್ಚಿದೆ. ಆಗ ಈ ಬಾಲಕನ ಪೋಷಕರು ಬೇವಿನ ಮರದ ಎಲೆ ಹಾಗೂ ಖಾರದ ಪುಡಿ ತಿನ್ನಿಸಿದ್ದಾರೆ. ಆಗ ಬಾಯಿಗೆ ಸಿಹಿ, ಖಾರ ಎರಡೂ ಹತ್ತುತ್ತಿಲ್ಲ ಅಂತಾ ಬಾಲಕ ಹೇಳಿದ್ದಾನೆ. ಕೂಡಲೇ ಆತನನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿದ್ದಾರೆ. ಅದಾದ ಬಳಿಕ ನಾಲ್ಕು-ಐದು ದಿನಗಳ ಮಧ್ಯೆದಲ್ಲಿ ಈ ಬಾಲಕನಿಗೆ ನಿರಂತರವಾಗಿ ಇಲ್ಲಿಯವರೆಗೆ ಒಟ್ಟು 9 ಬಾರಿ ಹಾವು ಕಡಿತವಾಗಿರೋದು ಬೆಳಕಿಗೆ ಬಂದಿದೆ.

ಸದ್ಯ ಇಲ್ಲಿಯವರೆಗೆ 9 ಬಾರಿ ಹಾವು ಕಚ್ಚಿರುವ ಗುರುತುಗಳು ಕೂಡ ಆತನ ಕಾಲಿನಲ್ಲಿದೆ. ಅದರಲ್ಲಿ 5 ಬಾರಿ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ರೆ, ಇನ್ನುಳಿದ 4 ಬಾರಿ ಸ್ಥಳೀಯ ನಾಟಿ ವೈದ್ಯರಿಂದ ಔಷಧಿಯನ್ನು ಪೋಷಕರು ಕೊಡಿಸಿದ್ದಾರೆ. ಆದರೆ ಇಲ್ಲಿಯವರೆಗೂ ಆ ಹಾವು ಪ್ರಜ್ವಲ್ ಬಿಟ್ಟು ಯಾರ ಕಣ್ಣಿಗೂ ಸಹ ಕಂಡಿಲ್ಲ. ಹೀಗಾಗಿ ಆತನ ಮನೆ ಸುತ್ತ ಹಾವು ಹುಡುಕುವುದೇ ಸದ್ಯ ನೆರೆಹೊರೆಯವರ ಕೆಲಸವಾಗಿದೆ.

ಪ್ರತಿ ಬಾರಿ ಈ ಬಾಲಕ ಒಬ್ಬನ ಮೇಲೆ ಮಾತ್ರ ಹಾವು ಕಚ್ಚಿರುವುದಾಗಿ ಹೇಳುತ್ತಿರುವುದು ಹಲವು ಅನುಮಾನಕ್ಕೂ ಸಹ ಎಡೆಮಾಡಿಕೊಟ್ಟಿದೆ. ಇನ್ನು ಪ್ರತಿ ಬಾರಿ ಹಾವು ಕಚ್ಚಿದೆ ಅಂದಾಗ ಸಾವಿರಾರು ರೂಪಾಯಿ ಖರ್ಚು ಮಾಡಿ ಇತನ ಪೋಷಕರು ಮಗನಿಗೆ ಚಿಕಿತ್ಸೆ ಕೊಡಿಸುತ್ತಾ ಇದೀಗ ದಿಕ್ಕು ಕಾಣದಂತಾಗಿದೆ. ಹೀಗಾಗಿ ಈತನ ಪೋಷಕರು ಸಿಕ್ಕ ಸಿಕ್ಕ ದೇವರುಗಳ ಮೊರೆ ಹೋಗುತ್ತಿದ್ದಾರೆ.

 

lokesh

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

3 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

3 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

3 hours ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

4 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

4 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

4 hours ago