BREAKING NEWS

2 ತಿಂಗಳಲ್ಲಿ ಒಂದೇ ಹುಡುಗನಿಗೆ 9 ಬಾರಿ ಕಚ್ಚಿದ ಹಾವು

ಕಲಬುರಗಿ : ಕಲಬುರಗಿಯ ಬಾಲಕನಿಗೆ ಕಳೆದ ಎರಡು ತಿಂಗಳ ಅವದಿಯಲ್ಲಿ 9 ಬಾರಿ ಹಾವು ಕಚ್ಚಿದೆ.

ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಹಳಕರ್ಟಿ ಗ್ರಾಮದ ನಿವಾಸಿ ಪ್ರಜ್ವಲ್‍ಗೆ ಜುಲೈ 3ರಂದು ಮನೆ ಅಂಗಳದಲ್ಲಿ ಆಟವಾಡುವಾಗ ಹಾವು ಕಚ್ಚಿದೆ. ಆಗ ಈ ಬಾಲಕನ ಪೋಷಕರು ಬೇವಿನ ಮರದ ಎಲೆ ಹಾಗೂ ಖಾರದ ಪುಡಿ ತಿನ್ನಿಸಿದ್ದಾರೆ. ಆಗ ಬಾಯಿಗೆ ಸಿಹಿ, ಖಾರ ಎರಡೂ ಹತ್ತುತ್ತಿಲ್ಲ ಅಂತಾ ಬಾಲಕ ಹೇಳಿದ್ದಾನೆ. ಕೂಡಲೇ ಆತನನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿದ್ದಾರೆ. ಅದಾದ ಬಳಿಕ ನಾಲ್ಕು-ಐದು ದಿನಗಳ ಮಧ್ಯೆದಲ್ಲಿ ಈ ಬಾಲಕನಿಗೆ ನಿರಂತರವಾಗಿ ಇಲ್ಲಿಯವರೆಗೆ ಒಟ್ಟು 9 ಬಾರಿ ಹಾವು ಕಡಿತವಾಗಿರೋದು ಬೆಳಕಿಗೆ ಬಂದಿದೆ.

ಸದ್ಯ ಇಲ್ಲಿಯವರೆಗೆ 9 ಬಾರಿ ಹಾವು ಕಚ್ಚಿರುವ ಗುರುತುಗಳು ಕೂಡ ಆತನ ಕಾಲಿನಲ್ಲಿದೆ. ಅದರಲ್ಲಿ 5 ಬಾರಿ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ರೆ, ಇನ್ನುಳಿದ 4 ಬಾರಿ ಸ್ಥಳೀಯ ನಾಟಿ ವೈದ್ಯರಿಂದ ಔಷಧಿಯನ್ನು ಪೋಷಕರು ಕೊಡಿಸಿದ್ದಾರೆ. ಆದರೆ ಇಲ್ಲಿಯವರೆಗೂ ಆ ಹಾವು ಪ್ರಜ್ವಲ್ ಬಿಟ್ಟು ಯಾರ ಕಣ್ಣಿಗೂ ಸಹ ಕಂಡಿಲ್ಲ. ಹೀಗಾಗಿ ಆತನ ಮನೆ ಸುತ್ತ ಹಾವು ಹುಡುಕುವುದೇ ಸದ್ಯ ನೆರೆಹೊರೆಯವರ ಕೆಲಸವಾಗಿದೆ.

ಪ್ರತಿ ಬಾರಿ ಈ ಬಾಲಕ ಒಬ್ಬನ ಮೇಲೆ ಮಾತ್ರ ಹಾವು ಕಚ್ಚಿರುವುದಾಗಿ ಹೇಳುತ್ತಿರುವುದು ಹಲವು ಅನುಮಾನಕ್ಕೂ ಸಹ ಎಡೆಮಾಡಿಕೊಟ್ಟಿದೆ. ಇನ್ನು ಪ್ರತಿ ಬಾರಿ ಹಾವು ಕಚ್ಚಿದೆ ಅಂದಾಗ ಸಾವಿರಾರು ರೂಪಾಯಿ ಖರ್ಚು ಮಾಡಿ ಇತನ ಪೋಷಕರು ಮಗನಿಗೆ ಚಿಕಿತ್ಸೆ ಕೊಡಿಸುತ್ತಾ ಇದೀಗ ದಿಕ್ಕು ಕಾಣದಂತಾಗಿದೆ. ಹೀಗಾಗಿ ಈತನ ಪೋಷಕರು ಸಿಕ್ಕ ಸಿಕ್ಕ ದೇವರುಗಳ ಮೊರೆ ಹೋಗುತ್ತಿದ್ದಾರೆ.

 

lokesh

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

20 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

20 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

20 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

20 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

20 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

20 hours ago