BREAKING NEWS

2 ತಿಂಗಳಲ್ಲಿ ಒಂದೇ ಹುಡುಗನಿಗೆ 9 ಬಾರಿ ಕಚ್ಚಿದ ಹಾವು

ಕಲಬುರಗಿ : ಕಲಬುರಗಿಯ ಬಾಲಕನಿಗೆ ಕಳೆದ ಎರಡು ತಿಂಗಳ ಅವದಿಯಲ್ಲಿ 9 ಬಾರಿ ಹಾವು ಕಚ್ಚಿದೆ.

ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಹಳಕರ್ಟಿ ಗ್ರಾಮದ ನಿವಾಸಿ ಪ್ರಜ್ವಲ್‍ಗೆ ಜುಲೈ 3ರಂದು ಮನೆ ಅಂಗಳದಲ್ಲಿ ಆಟವಾಡುವಾಗ ಹಾವು ಕಚ್ಚಿದೆ. ಆಗ ಈ ಬಾಲಕನ ಪೋಷಕರು ಬೇವಿನ ಮರದ ಎಲೆ ಹಾಗೂ ಖಾರದ ಪುಡಿ ತಿನ್ನಿಸಿದ್ದಾರೆ. ಆಗ ಬಾಯಿಗೆ ಸಿಹಿ, ಖಾರ ಎರಡೂ ಹತ್ತುತ್ತಿಲ್ಲ ಅಂತಾ ಬಾಲಕ ಹೇಳಿದ್ದಾನೆ. ಕೂಡಲೇ ಆತನನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿದ್ದಾರೆ. ಅದಾದ ಬಳಿಕ ನಾಲ್ಕು-ಐದು ದಿನಗಳ ಮಧ್ಯೆದಲ್ಲಿ ಈ ಬಾಲಕನಿಗೆ ನಿರಂತರವಾಗಿ ಇಲ್ಲಿಯವರೆಗೆ ಒಟ್ಟು 9 ಬಾರಿ ಹಾವು ಕಡಿತವಾಗಿರೋದು ಬೆಳಕಿಗೆ ಬಂದಿದೆ.

ಸದ್ಯ ಇಲ್ಲಿಯವರೆಗೆ 9 ಬಾರಿ ಹಾವು ಕಚ್ಚಿರುವ ಗುರುತುಗಳು ಕೂಡ ಆತನ ಕಾಲಿನಲ್ಲಿದೆ. ಅದರಲ್ಲಿ 5 ಬಾರಿ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ರೆ, ಇನ್ನುಳಿದ 4 ಬಾರಿ ಸ್ಥಳೀಯ ನಾಟಿ ವೈದ್ಯರಿಂದ ಔಷಧಿಯನ್ನು ಪೋಷಕರು ಕೊಡಿಸಿದ್ದಾರೆ. ಆದರೆ ಇಲ್ಲಿಯವರೆಗೂ ಆ ಹಾವು ಪ್ರಜ್ವಲ್ ಬಿಟ್ಟು ಯಾರ ಕಣ್ಣಿಗೂ ಸಹ ಕಂಡಿಲ್ಲ. ಹೀಗಾಗಿ ಆತನ ಮನೆ ಸುತ್ತ ಹಾವು ಹುಡುಕುವುದೇ ಸದ್ಯ ನೆರೆಹೊರೆಯವರ ಕೆಲಸವಾಗಿದೆ.

ಪ್ರತಿ ಬಾರಿ ಈ ಬಾಲಕ ಒಬ್ಬನ ಮೇಲೆ ಮಾತ್ರ ಹಾವು ಕಚ್ಚಿರುವುದಾಗಿ ಹೇಳುತ್ತಿರುವುದು ಹಲವು ಅನುಮಾನಕ್ಕೂ ಸಹ ಎಡೆಮಾಡಿಕೊಟ್ಟಿದೆ. ಇನ್ನು ಪ್ರತಿ ಬಾರಿ ಹಾವು ಕಚ್ಚಿದೆ ಅಂದಾಗ ಸಾವಿರಾರು ರೂಪಾಯಿ ಖರ್ಚು ಮಾಡಿ ಇತನ ಪೋಷಕರು ಮಗನಿಗೆ ಚಿಕಿತ್ಸೆ ಕೊಡಿಸುತ್ತಾ ಇದೀಗ ದಿಕ್ಕು ಕಾಣದಂತಾಗಿದೆ. ಹೀಗಾಗಿ ಈತನ ಪೋಷಕರು ಸಿಕ್ಕ ಸಿಕ್ಕ ದೇವರುಗಳ ಮೊರೆ ಹೋಗುತ್ತಿದ್ದಾರೆ.

 

lokesh

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago