BREAKING NEWS

2 ತಿಂಗಳಲ್ಲಿ ಒಂದೇ ಹುಡುಗನಿಗೆ 9 ಬಾರಿ ಕಚ್ಚಿದ ಹಾವು

ಕಲಬುರಗಿ : ಕಲಬುರಗಿಯ ಬಾಲಕನಿಗೆ ಕಳೆದ ಎರಡು ತಿಂಗಳ ಅವದಿಯಲ್ಲಿ 9 ಬಾರಿ ಹಾವು ಕಚ್ಚಿದೆ.

ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಹಳಕರ್ಟಿ ಗ್ರಾಮದ ನಿವಾಸಿ ಪ್ರಜ್ವಲ್‍ಗೆ ಜುಲೈ 3ರಂದು ಮನೆ ಅಂಗಳದಲ್ಲಿ ಆಟವಾಡುವಾಗ ಹಾವು ಕಚ್ಚಿದೆ. ಆಗ ಈ ಬಾಲಕನ ಪೋಷಕರು ಬೇವಿನ ಮರದ ಎಲೆ ಹಾಗೂ ಖಾರದ ಪುಡಿ ತಿನ್ನಿಸಿದ್ದಾರೆ. ಆಗ ಬಾಯಿಗೆ ಸಿಹಿ, ಖಾರ ಎರಡೂ ಹತ್ತುತ್ತಿಲ್ಲ ಅಂತಾ ಬಾಲಕ ಹೇಳಿದ್ದಾನೆ. ಕೂಡಲೇ ಆತನನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿದ್ದಾರೆ. ಅದಾದ ಬಳಿಕ ನಾಲ್ಕು-ಐದು ದಿನಗಳ ಮಧ್ಯೆದಲ್ಲಿ ಈ ಬಾಲಕನಿಗೆ ನಿರಂತರವಾಗಿ ಇಲ್ಲಿಯವರೆಗೆ ಒಟ್ಟು 9 ಬಾರಿ ಹಾವು ಕಡಿತವಾಗಿರೋದು ಬೆಳಕಿಗೆ ಬಂದಿದೆ.

ಸದ್ಯ ಇಲ್ಲಿಯವರೆಗೆ 9 ಬಾರಿ ಹಾವು ಕಚ್ಚಿರುವ ಗುರುತುಗಳು ಕೂಡ ಆತನ ಕಾಲಿನಲ್ಲಿದೆ. ಅದರಲ್ಲಿ 5 ಬಾರಿ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ರೆ, ಇನ್ನುಳಿದ 4 ಬಾರಿ ಸ್ಥಳೀಯ ನಾಟಿ ವೈದ್ಯರಿಂದ ಔಷಧಿಯನ್ನು ಪೋಷಕರು ಕೊಡಿಸಿದ್ದಾರೆ. ಆದರೆ ಇಲ್ಲಿಯವರೆಗೂ ಆ ಹಾವು ಪ್ರಜ್ವಲ್ ಬಿಟ್ಟು ಯಾರ ಕಣ್ಣಿಗೂ ಸಹ ಕಂಡಿಲ್ಲ. ಹೀಗಾಗಿ ಆತನ ಮನೆ ಸುತ್ತ ಹಾವು ಹುಡುಕುವುದೇ ಸದ್ಯ ನೆರೆಹೊರೆಯವರ ಕೆಲಸವಾಗಿದೆ.

ಪ್ರತಿ ಬಾರಿ ಈ ಬಾಲಕ ಒಬ್ಬನ ಮೇಲೆ ಮಾತ್ರ ಹಾವು ಕಚ್ಚಿರುವುದಾಗಿ ಹೇಳುತ್ತಿರುವುದು ಹಲವು ಅನುಮಾನಕ್ಕೂ ಸಹ ಎಡೆಮಾಡಿಕೊಟ್ಟಿದೆ. ಇನ್ನು ಪ್ರತಿ ಬಾರಿ ಹಾವು ಕಚ್ಚಿದೆ ಅಂದಾಗ ಸಾವಿರಾರು ರೂಪಾಯಿ ಖರ್ಚು ಮಾಡಿ ಇತನ ಪೋಷಕರು ಮಗನಿಗೆ ಚಿಕಿತ್ಸೆ ಕೊಡಿಸುತ್ತಾ ಇದೀಗ ದಿಕ್ಕು ಕಾಣದಂತಾಗಿದೆ. ಹೀಗಾಗಿ ಈತನ ಪೋಷಕರು ಸಿಕ್ಕ ಸಿಕ್ಕ ದೇವರುಗಳ ಮೊರೆ ಹೋಗುತ್ತಿದ್ದಾರೆ.

 

lokesh

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

55 mins ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

59 mins ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

1 hour ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

1 hour ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

1 hour ago