BREAKING NEWS

ಏ.10,11ಕ್ಕೆ ಬೆಂಗಳೂರು ಸಿಟಿ ರೈಲು ನಿಲ್ದಾಣದಿಂದಹೊರಡುವ ಕೆಲ ರೈಲು ಸಂಚಾರ ರದ್ದು : ಇಲ್ಲಿದೆ ಮಾಹಿತಿ

ಬೆಂಗಳೂರು : ಬೆಂಗಳೂರು ಸಿಟಿ (ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ)ದ ಯಾರ್ಡ್‌ನ ಲೈನ್‌-2ರಲ್ಲಿ ಗರ್ಡರ್‌ ಅಳವಡಿಕೆಗೆ ಸಂಬಂಧಿಸಿದಂತೆ ಲೈನ್‌ ಬ್ಲಾಕ್‌ ಮತ್ತು ಪವರ್‌ ಬ್ಲಾಕ್‌ ಕಾಮಗಾರಿ ಆರಂಭವಾಗುವುದರಿಂದ ಏ. 10ರಿಂದ ಕೆಲ ರೈಲುಗಳ ಸಂಚಾರವು ಭಾಗಶಃ ರದ್ದಾಗಲಿದೆ. ಇನ್ನೂ ಕೆಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗುತ್ತದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಯಾವ ಯಾವ ರೈಲು ರದ್ದು? : ವೈಟ್‌ಫೀಲ್ಡ್‌ ಚಾಮರಾಜನಗರ ನಡುವೆ ಸಂಚರಿಸುತ್ತಿದ್ದ ಚಾಮರಾಜನಗರ ಡೈಲಿ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 16220), ನಾಂದೇಡ್‌ – ಕೆಎಸ್‌ಆರ್‌ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ. 16594) ಯಲಹಂಕ-ಕೆಎಸ್‌ಆರ್‌ ಬೆಂಗಳೂರು ನಡುವೆ ಸಂಚರಿಸುವ ದೇವನಹಳ್ಳಿ – ಕೆಎಸ್‌ಆರ್‌ ಬೆಂಗಳೂರು ಮೆಮು ವಿಶೇಷ (ರೈಲು ಸಂಖ್ಯೆ. 06532) ರೈಲು ದೇವನಹಳ್ಳಿಯಿಂದ ಹೊರಡಲಿದ್ದು, ಬೆಂಗಳೂರು ಕಂಟೋನ್ಮೆಂಟ್‌-ಕೆಎಸ್‌ಆರ್‌ ಬೆಂಗಳೂರು ನಡುವೆ ಸಂಚಾರ ಸ್ಥಗಿತಗೊಳಿಸಲಾಗುತ್ತಿದೆ.

ಯಾವ ರೈಲು ಭಾಗಶಃ ರದ್ದು? : ಕೆಎಸ್‌ಆರ್‌ ಬೆಂಗಳೂರು-ದೇವನಹಳ್ಳಿ ಮೆಮು ವಿಶೇಷ (ರೈಲು ಸಂಖ್ಯೆ. 06531) ಏ.11 ರಂದು ಕೆಎಸ್‌ಆರ್‌ ಬೆಂಗಳೂರು-ಬೆಂಗಳೂರು ಕಂಟೋನ್ಮೆಂಟ್‌ ನಡುವೆ ರದ್ದಾಗಲಿದೆ.
ಎರ್ನಾಕುಲಂ – ಕೆಎಸ್‌ಆರ್‌ ಬೆಂಗಳೂರು ಡೈಲಿ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ. 12678) ರೈಲು ಏ. 10 ರಂದು ಹೊರಡುತ್ತದೆ. ಈ ರೈಲು ಬೈಯ್ಯಪ್ಪನಹಳ್ಳಿ-ಕೆಎಸ್‌ಆರ್‌ ಬೆಂಗಳೂರು ನಡುವೆಯೇ ಸ್ಥಗಿತಗೊಳ್ಳಲಿದೆ.
ಕೆಎಸ್‌ಆರ್‌ ಬೆಂಗಳೂರು-ಎರ್ನಾಕುಲಂ ಡೈಲಿ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ. 12677) ರೈಲು ಏ. 11ರಂದು ಕೆಎಸ್‌ಆರ್‌ ಬೆಂಗಳೂರು-ಬೈಯ್ಯಪ್ಪನಹಳ್ಳಿ ನಡುವೆ ಭಾಗಶಃ ರದ್ದುಗೊಳ್ಳುತ್ತದೆ. ಸರ್‌ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಬೆಳಗ್ಗೆ 6.10 ಕ್ಕೆ ಹೊರಡುತ್ತದೆ.
ಮಾರಿಕುಪ್ಪಂ-ಕೆಎಸ್‌ಆರ್‌ ಬೆಂಗಳೂರು ಮೆಮು ಸ್ಪೆಷಲ್‌ (ರೈಲು ಸಂಖ್ಯೆ. 01772) ರೈಲು ಬೆಂಗಳೂರು- ಬೆಂಗಳೂರು ಕಂಟೋನ್ಮೆಂಟ್‌ ನಡುವೆ, ಕೆಎಸ್‌ಆರ್‌ ಬೆಂಗಳೂರು-ಮಾರಿಕುಪ್ಪಂ ಮೆಮು ವಿಶೇಷ (ರೈಲು ಸಂಖ್ಯೆ. 06396) ರೈಲು ಕೆಎಸ್‌ಆರ್‌ ಬೆಂಗಳೂರು ಮತ್ತು ಬೆಂಗಳೂರು ಕಂಟೋನ್ಮೆಂಟ್‌ ನಡುವೆ ಭಾಗಶಃ ರದ್ದಾಗಲಿದೆ.

ರೈಲುಗಳ ಮಾರ್ಗ ಬದಲಾವಣೆ : ಏ.10ರಂದು ಮೈಸೂರು- ಎಂಜಿಆರ್‌ ಚೆನ್ನೈ ಸೆಂಟ್ರಲ್‌ ಕಾವೇರಿ ಡೈಲಿ ಎಕ್ಸ್‌ಪ್ರೆಸ್‌, ಎಂಜಿಆರ್‌ ಚೆನ್ನೈ ಸೆಂಟ್ರಲ್‌ನಿಂದ ಹೊರಡುವ ಮೈಸೂರು ಕಾವೇರಿ ಡೈಲಿ ಎಕ್ಸ್‌ಪ್ರೆಸ್‌, ಕೆಎಸ್‌ಆರ್‌ ಬೆಂಗಳೂರು – ನಾಂದೇಡ್‌ ಡೈಲಿ ಎಕ್ಸ್‌ಪ್ರೆಸ್‌, ಸರ್‌. ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು-ಮೈಸೂರು ವಿಶೇಷ ಎಕ್ಸ್‌ಪ್ರೆಸ್‌, ಬಂಗಾರಪೇಟೆ- ಕೆಎಸ್‌ಆರ್‌ ಬೆಂಗಳೂರು ಮೆಮು ವಿಶೇಷ ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

ಕಾರ್ಮೆಲರಾಮ್ ನಿಲ್ದಾಣದಲ್ಲಿ ರೈಲು ನಿಲುಗಡೆ : ಸರ್‌.ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು ಮತ್ತು ನಾಗರ್‌ಕೋಯಿಲ್ ನಡುವೆ ನಿತ್ಯ ಸಂಚರಿಸುವ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 17235 ಮತ್ತು 17236) ರೈಲುನ್ನು ಬೆಂಗಳೂರಿನ ಕಾರ್ಮೆಲರಾಮ್ ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಯನ್ನು ಪ್ರಾಯೋಗಿಕ ಆಧಾರದ ಮೇಲೆ ಆರು ತಿಂಗಳ ಅವಧಿವರೆಗೆ (ಏಪ್ರಿಲ್ 15 ರಿಂದ ಅಕ್ಟೋಬರ್ 14, 2023) ಪ್ರಸ್ತುತ ವೇಳಾಪಟ್ಟಿಯೊಂದಿಗೆ ಮುಂದುವರಿಸಲಾಗುತ್ತದೆ.

lokesh

Recent Posts

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

1 hour ago

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…

2 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ!

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

2 hours ago

ಎಂ.ಬಿ.ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು

ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…

3 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

3 hours ago

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ : ಈಶ್ವರ ಖಂಡ್ರೆ

ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…

4 hours ago