BREAKING NEWS

ಏ.10,11ಕ್ಕೆ ಬೆಂಗಳೂರು ಸಿಟಿ ರೈಲು ನಿಲ್ದಾಣದಿಂದಹೊರಡುವ ಕೆಲ ರೈಲು ಸಂಚಾರ ರದ್ದು : ಇಲ್ಲಿದೆ ಮಾಹಿತಿ

ಬೆಂಗಳೂರು : ಬೆಂಗಳೂರು ಸಿಟಿ (ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ)ದ ಯಾರ್ಡ್‌ನ ಲೈನ್‌-2ರಲ್ಲಿ ಗರ್ಡರ್‌ ಅಳವಡಿಕೆಗೆ ಸಂಬಂಧಿಸಿದಂತೆ ಲೈನ್‌ ಬ್ಲಾಕ್‌ ಮತ್ತು ಪವರ್‌ ಬ್ಲಾಕ್‌ ಕಾಮಗಾರಿ ಆರಂಭವಾಗುವುದರಿಂದ ಏ. 10ರಿಂದ ಕೆಲ ರೈಲುಗಳ ಸಂಚಾರವು ಭಾಗಶಃ ರದ್ದಾಗಲಿದೆ. ಇನ್ನೂ ಕೆಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗುತ್ತದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಯಾವ ಯಾವ ರೈಲು ರದ್ದು? : ವೈಟ್‌ಫೀಲ್ಡ್‌ ಚಾಮರಾಜನಗರ ನಡುವೆ ಸಂಚರಿಸುತ್ತಿದ್ದ ಚಾಮರಾಜನಗರ ಡೈಲಿ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 16220), ನಾಂದೇಡ್‌ – ಕೆಎಸ್‌ಆರ್‌ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ. 16594) ಯಲಹಂಕ-ಕೆಎಸ್‌ಆರ್‌ ಬೆಂಗಳೂರು ನಡುವೆ ಸಂಚರಿಸುವ ದೇವನಹಳ್ಳಿ – ಕೆಎಸ್‌ಆರ್‌ ಬೆಂಗಳೂರು ಮೆಮು ವಿಶೇಷ (ರೈಲು ಸಂಖ್ಯೆ. 06532) ರೈಲು ದೇವನಹಳ್ಳಿಯಿಂದ ಹೊರಡಲಿದ್ದು, ಬೆಂಗಳೂರು ಕಂಟೋನ್ಮೆಂಟ್‌-ಕೆಎಸ್‌ಆರ್‌ ಬೆಂಗಳೂರು ನಡುವೆ ಸಂಚಾರ ಸ್ಥಗಿತಗೊಳಿಸಲಾಗುತ್ತಿದೆ.

ಯಾವ ರೈಲು ಭಾಗಶಃ ರದ್ದು? : ಕೆಎಸ್‌ಆರ್‌ ಬೆಂಗಳೂರು-ದೇವನಹಳ್ಳಿ ಮೆಮು ವಿಶೇಷ (ರೈಲು ಸಂಖ್ಯೆ. 06531) ಏ.11 ರಂದು ಕೆಎಸ್‌ಆರ್‌ ಬೆಂಗಳೂರು-ಬೆಂಗಳೂರು ಕಂಟೋನ್ಮೆಂಟ್‌ ನಡುವೆ ರದ್ದಾಗಲಿದೆ.
ಎರ್ನಾಕುಲಂ – ಕೆಎಸ್‌ಆರ್‌ ಬೆಂಗಳೂರು ಡೈಲಿ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ. 12678) ರೈಲು ಏ. 10 ರಂದು ಹೊರಡುತ್ತದೆ. ಈ ರೈಲು ಬೈಯ್ಯಪ್ಪನಹಳ್ಳಿ-ಕೆಎಸ್‌ಆರ್‌ ಬೆಂಗಳೂರು ನಡುವೆಯೇ ಸ್ಥಗಿತಗೊಳ್ಳಲಿದೆ.
ಕೆಎಸ್‌ಆರ್‌ ಬೆಂಗಳೂರು-ಎರ್ನಾಕುಲಂ ಡೈಲಿ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ. 12677) ರೈಲು ಏ. 11ರಂದು ಕೆಎಸ್‌ಆರ್‌ ಬೆಂಗಳೂರು-ಬೈಯ್ಯಪ್ಪನಹಳ್ಳಿ ನಡುವೆ ಭಾಗಶಃ ರದ್ದುಗೊಳ್ಳುತ್ತದೆ. ಸರ್‌ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಬೆಳಗ್ಗೆ 6.10 ಕ್ಕೆ ಹೊರಡುತ್ತದೆ.
ಮಾರಿಕುಪ್ಪಂ-ಕೆಎಸ್‌ಆರ್‌ ಬೆಂಗಳೂರು ಮೆಮು ಸ್ಪೆಷಲ್‌ (ರೈಲು ಸಂಖ್ಯೆ. 01772) ರೈಲು ಬೆಂಗಳೂರು- ಬೆಂಗಳೂರು ಕಂಟೋನ್ಮೆಂಟ್‌ ನಡುವೆ, ಕೆಎಸ್‌ಆರ್‌ ಬೆಂಗಳೂರು-ಮಾರಿಕುಪ್ಪಂ ಮೆಮು ವಿಶೇಷ (ರೈಲು ಸಂಖ್ಯೆ. 06396) ರೈಲು ಕೆಎಸ್‌ಆರ್‌ ಬೆಂಗಳೂರು ಮತ್ತು ಬೆಂಗಳೂರು ಕಂಟೋನ್ಮೆಂಟ್‌ ನಡುವೆ ಭಾಗಶಃ ರದ್ದಾಗಲಿದೆ.

ರೈಲುಗಳ ಮಾರ್ಗ ಬದಲಾವಣೆ : ಏ.10ರಂದು ಮೈಸೂರು- ಎಂಜಿಆರ್‌ ಚೆನ್ನೈ ಸೆಂಟ್ರಲ್‌ ಕಾವೇರಿ ಡೈಲಿ ಎಕ್ಸ್‌ಪ್ರೆಸ್‌, ಎಂಜಿಆರ್‌ ಚೆನ್ನೈ ಸೆಂಟ್ರಲ್‌ನಿಂದ ಹೊರಡುವ ಮೈಸೂರು ಕಾವೇರಿ ಡೈಲಿ ಎಕ್ಸ್‌ಪ್ರೆಸ್‌, ಕೆಎಸ್‌ಆರ್‌ ಬೆಂಗಳೂರು – ನಾಂದೇಡ್‌ ಡೈಲಿ ಎಕ್ಸ್‌ಪ್ರೆಸ್‌, ಸರ್‌. ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು-ಮೈಸೂರು ವಿಶೇಷ ಎಕ್ಸ್‌ಪ್ರೆಸ್‌, ಬಂಗಾರಪೇಟೆ- ಕೆಎಸ್‌ಆರ್‌ ಬೆಂಗಳೂರು ಮೆಮು ವಿಶೇಷ ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

ಕಾರ್ಮೆಲರಾಮ್ ನಿಲ್ದಾಣದಲ್ಲಿ ರೈಲು ನಿಲುಗಡೆ : ಸರ್‌.ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು ಮತ್ತು ನಾಗರ್‌ಕೋಯಿಲ್ ನಡುವೆ ನಿತ್ಯ ಸಂಚರಿಸುವ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 17235 ಮತ್ತು 17236) ರೈಲುನ್ನು ಬೆಂಗಳೂರಿನ ಕಾರ್ಮೆಲರಾಮ್ ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಯನ್ನು ಪ್ರಾಯೋಗಿಕ ಆಧಾರದ ಮೇಲೆ ಆರು ತಿಂಗಳ ಅವಧಿವರೆಗೆ (ಏಪ್ರಿಲ್ 15 ರಿಂದ ಅಕ್ಟೋಬರ್ 14, 2023) ಪ್ರಸ್ತುತ ವೇಳಾಪಟ್ಟಿಯೊಂದಿಗೆ ಮುಂದುವರಿಸಲಾಗುತ್ತದೆ.

lokesh

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

4 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

8 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

8 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

9 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

9 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

10 hours ago