BREAKING NEWS

ವೇಗವಾಗಿ ಬಂದ ವಾಹನ ಆಂಬುಲೆನ್ಸ್‌ಗೆ ಡಿಕ್ಕಿ : ಸ್ಥಳದಲ್ಲೇ ಮೂವರು ಸಾವು

ಚೆನ್ನೈ : ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ವೇಳೆ, ಅತಿವೇಗದಿಂದ ಬಂದ ವಾಹನವೊಂದು ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದಾರೆ. ಪೆರಂಬಲೂರಿನ ಚೆನ್ನೈ-ತಿರುಚಿ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.

ಇದಕ್ಕೂ ಮೊದಲು ವಾಹನವೊಂದು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಬಂದ ಆಂಬ್ಯುಲೆನ್ಸ್‌ಗೆ ವೇಗವಾಗಿ ಬಂದ ವಾಹನ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದಾರೆ.
ದಿಂಡಿಗಲ್‌ನ ನಾಗಲ್‌ನ 60 ವರ್ಷದ ಕುಪ್ಪುಸಾಮಿ ಎಂಬುವವರು ತಮ್ಮ ಸಂಬಂಧಿಕರೊಂದಿಗೆ ತಿರುವಣ್ಣಾಮಲೈನಿಂದ ಹಿಂದಿರುಗುತ್ತಿದ್ದರು. ಅವರ ವಾಹನವು ಪೆರಂಬಲೂರು ಸಮೀಪಿಸುತ್ತಿರುವಾಗ ಹಠಾತ್ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಕುಪ್ಪುಸಾಮಿ, ಟ್ರ್ಯಾಕ್ಟರ್ ಚಾಲಕ ಸಮಿದಾಸ್ ಮತ್ತು ಇನ್ನೊಬ್ಬ ಪ್ರಯಾಣಿಕ ಶೇಖರ್ ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಆಂಬುಲೆನ್ಸ್, ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದೆ. ಆ ವೇಳೆ ವೇಗವಾಗಿ ಬಂದ ವಾಹನ ಆಂಬುಲೆನ್ಸ್‌ಗೆ ಡಿಕ್ಕಿ ಹೊಡೆದು, ಮೂವರು ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಕುಪ್ಪುಸಾಮಿ, ಅವರ ಮೊಮ್ಮಗಳು ಕವಿಪ್ರಿಯಾ ಮತ್ತು ಆಂಬ್ಯುಲೆನ್ಸ್ ಚಾಲಕ ರಾಜೇಂದ್ರನ್ ಮೂವರು ಸಾವನ್ನಪ್ಪಿದ್ದಾರೆ. ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ.

50 ಪೊಲೀಸರು ಸ್ಥಳಕ್ಕೆ ಧಾವಿಸಿ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಮೃತರನ್ನು ಶವಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

lokesh

Recent Posts

ಯುವ ರೈತರ ಮದುವೆಯಾಗುವ ಯುವತಿಯರಿಗೆ 5 ಲಕ್ಷ ನೀಡಲಿ ; ಮನನೊಂದ ರೈತ ಮಕ್ಕಳು ಮುಖ್ಯಮಂತ್ರಿಗೆ ಮನವಿ

ಮಂಡ್ಯ : ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹವಾಗಿ ೫ ಲಕ್ಷ ರೂ.ಗಳನ್ನು ನೀಡುವಂತೆ ಮನನೊಂದ ರೈತ ಮಕ್ಕಳು ಮುಖ್ಯಮಂತ್ರಿಗಳಿಗೆ…

5 mins ago

ಕಾಲುಜಾರಿ ನೀರಿನಲ್ಲಿ ಮುಳುಗಿ ಯುವಕ ಸಾವು

ಸರಗೂರು : ನಾಲೆಯಲ್ಲಿ ಹಸುವಿಗೆ ನೀರು ಕುಡಿಸಲು ಹೋದಾಗ ಯುವಕನೊಬ್ಬ ಕಾಲುಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮೇಗೌಡರ…

14 mins ago

ನಗರಾಭಿವೃದ್ಧಿ ಇಲಾಖೆಯಿಂದ ಯುಜಿಡಿ ನಿರ್ವಹಣೆ ಅಸಾಧ್ಯ : ಸಚಿವ ಬೈರತಿ ಸುರೇಶ್

ವಿಧಾನಸಭೆ : ನಗರಾಭಿವೃದ್ಧಿ ಇಲಾಖೆಯಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಒಳಚರಂಡಿ ಮತ್ತು ಅದಕ್ಕೆ ಸಂಬಂಧಿಸಿದ ಸೇವೆಗಳ ನಿರ್ವಹಣೆ ಅಸಾಧ್ಯ ಎಂದು…

20 mins ago

ಹುಣಸೂರು | ಹೆಚ್ಚಿದ ಹುಲಿ ಉಪಟಳ : ರೈತರಿಂದ ಅಂತರರಾಜ್ಯ ಹೆದ್ದಾರಿ ಬಂದ್‌ ; ರೈತರ ಆಕ್ರೋಶ

ಹುಣಸೂರು : ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹಲವು ಗ್ರಾಮಗಳಲ್ಲಿ ನಡೆಯುತ್ತಿರುವ ನಿರಂತರ ಹುಲಿ ದಾಳಿಗಳ ಹಿನ್ನೆಲೆಯಲ್ಲಿ ರೈತರು ಅಂತರರಾಜ್ಯ…

26 mins ago

ಭಾಷೆ ಬೇರೆಯಾದರೂ, ದೇಶವೊಂದೇ ಭಾರತ

ಮೈಸೂರು : ಪ್ರಾಚೀನ ಕಾಲದಲ್ಲಿ ವ್ಯಾಸ, ವಾಲ್ಮೀಕಿ, ಕಾಳಿದಾಸರಂತಹ ಮಹಾನ್ ಕವಿಗಳು ರಚಿಸಿದ ಮಹಾನ್ ಗ್ರಂಥಗಳ ಫಲವಾಗಿ ಭಾರತೀಯ ಸಾಹಿತ್ಯ…

31 mins ago

ನಿವೃತ್ತಿಯಿಂದ ಹಿಂದೆ ಸರಿದ ವಿನೇಶ್‌ ಫೋಗಟ್‌ : ಅಖಾಡಕ್ಕಿಳಿಯಲು ಸಜ್ಜಾದ ಕುಸ್ತಿಪುಟು

ಹೊಸದಿಲ್ಲಿ : ಒಲಿಂಪಿಕ್ ಕನಸನ್ನು ಬೆನ್ನಟ್ಟಲು 18 ತಿಂಗಳ ವಿರಾಮದ ನಂತರ ಮತ್ತೆ ವಾಪಸ್ಸಾಗುವುದಾಗಿ ಕುಸ್ತಿಪಟು ವಿನೇಶ್ ಫೋಗಟ್ ಘೋಷಿಸಿದ್ದಾರೆ.…

48 mins ago