ಚಿಕ್ಕಮಗಳೂರು : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಮೂಲೆ, ಮೂಲೆಯಲ್ಲೂ ಚುನಾವಣಾಧಿಕಾರಿಗಳು, ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
ಆದರೂ ಅಕ್ರಮವಾಗಿ ಕಂತೆ ಕಂತೆ ನೋಟುಗಳು ಹಾಗೂ ಕೋಟ್ಯಾಂತರ ಬೆಲೆ ಬಾಳುವ ಚಿನ್ನಾಭರಣಗಳನ್ನು ಸಾಗಿಸೋ ಪ್ರಯತ್ನಗಳು ನಡೆಯುತ್ತಿವೆ. ಚಿಕ್ಕಮಗಳೂರಿನ ಪೊಲೀಸರು 23 ಕೋಟಿ ಮೌಲ್ಯದ 40 ಕೆಜಿ ಚಿನ್ನಾಭರಣವನ್ನ ವಶಕ್ಕೆ ಪಡೆಯಲಾಗಿದೆ.ತರೀಕೆರೆ ತಾಲ್ಲೂಕಿನ MC ಹಳ್ಳಿ ಚೆಕ್ಪೋಸ್ಟ್ ನಲ್ಲಿ ಬರೋಬ್ಬರಿ 40 ಕೆಜಿ ಚಿನ್ನಾಭರಣಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
23 ಕೋಟಿ ಮೌಲ್ಯದ ಚಿನ್ನದ ಒಡವೆಗಳನ್ನು ಕಂಟೈನರ್ನಲ್ಲಿ ಸಾಗಿಸಲಾಗುತ್ತಿತ್ತು. ಸೂಕ್ತ ದಾಖಲೆ ಇಲ್ಲದೆ ಕಂಟೈನರ್ನಲ್ಲಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಚಿನ್ನದ ಒಡವೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
23 ಕೋಟಿ ಬೆಲೆ ಬಾಳುವ ಚಿನ್ನಾಭರಣಗಳನ್ನ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಸಾಗಿಸುತ್ತಿದ್ದರು ಎನ್ನಲಾಗಿದೆ. ಪದೇ ಪದೇ ಇದೇ ಚೆಕ್ಪೋಸ್ಟ್ ನಲ್ಲಿ ಕೋಟ್ಯಾಂತರ ಮೌಲ್ಯದ ಚಿನ್ನ ಸೀಜ್ ಮಾಡಲಾಗಿದೆ. ಚಿನ್ನಾಭರಣ ವ್ಯಾಪಾರಿಗಳು ಸರ್ಕಾರಕ್ಕೆ ತೆರಿಗೆ ವಂಚನೆ ಮಾಡುತ್ತಿರುವ ಶಂಕೆ ವ್ಯಕ್ತವಾಗಿದೆ. ತೆರಿಗೆ ಇಲಾಖೆ ಅಧಿಕಾರಿಗಳು 40 ಕೆಜಿ ಚಿನ್ನಾಭರಣದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.
ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…