BREAKING NEWS

ಚುನಾವಣೆಗೆ ಮೂರು ದಿನ ಬಾಕಿ ಇರುವ ಬೆನ್ನಲ್ಲೇ ವೈರಲ್‌ ಆಯ್ತು ಕಾಂಗ್ರೆಸ್‌ ನಾಯಕರ ವಿಡಿಯೋ

ಬೆಂಗಳೂರು : ವಿಧಾನಸಭೆ ಚುನಾವಣೆಗೆ ಮೂರು ದಿನಗಳು ಬಾಕಿ ಇದೆ. ಈ ಮಹತ್ವದ ಸಮಯದಲ್ಲಿ ವಿಡಿಯೊವೊಂದು ವೈರಲ್ ಆಗಿದೆ. ಈ ವಿಡಿಯೊ ತುಣುಕಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಆಪ್ತ ಸಮಾಲೋಚನೆ ನಡೆಸುತ್ತಿರುವುದು ಕಂಡುಬಂದಿದೆ. ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯನವರ ಆರೋಗ್ಯವನ್ನು ವಿಚಾರಿಸುತ್ತಿರುವುದು ಇಲ್ಲಿ ಕಾಣಬಹುದಾಗಿದೆ.

ಉಭಯ ನಾಯಕರು ಹಲವಾರು ವಿಚಾರಗಳನ್ನು ಇಲ್ಲಿ ಮಾತನಾಡಿದ್ದಾರೆ. ಸಿದ್ದರಾಮಯ್ಯನವರ ಕೈ ಊದಿಕೊಂಡಿರುವ ವಿಚಾರ, ಡಿಕೆಶಿ ಹೆಲಿಕಾಪ್ಟರ್ ಅಪಘಾತದ ವಿಚಾರಗಳನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಇಂದಿರಾ ಕ್ಯಾಂಟಿನ್ ಮತ್ತೆ ತೆರೆಯುವ ಬಗ್ಗೆ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಜಗದೀಶ್ ಶೆಟ್ಟರ್ ಅವರನ್ನು ಕಣ್ಣೀರು ಹಾಕಿಸಿದ ಬಿಜೆಪಿ ಬಗ್ಗೆಯೂ ಉಭಯ ನಾಯಕರು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಐದು ಕ್ಷೇತ್ರಗಳನ್ನು ಕಾಂಗ್ರೆಸ್ ಗೆಲ್ಲಲಿದೆ, ಹಳೇ ಮೈಸೂರು ಭಾಗವನ್ನು ಫುಲ್ ಕವರ್ ಮಾಡಿದ್ದೇನೆ ಎಂದು ಡಿಕೆಶಿ ಹೇಳಿಕೊಂಡಿದ್ದಾರೆ. ಜನರು ನಮ್ಮ ಮೇಲೆ ನಂಬಿಕೆ ಇರಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ಇದನ್ನು ಕರ್ನಾಟಕ ಕಾಂಗ್ರೆಸ್ ಟ್ವಿಟರ್ ನಲ್ಲಿ ಹಂಚಿಕೊಂಡಿದೆ. ‘ಪ್ರಚಾರದ ಭರಾಟೆಯ ಮಧ್ಯೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ನಡೆದ ವಿಚಾರ ವಿನಿಮಯದ ತುಣುಕು ಇಲ್ಲಿದೆ. ರಾಜ್ಯದ ಆಗುಹೋಗುಗಳು, ಭವಿಷ್ಯದ ಯೋಜನೆಗಳ ಕುರಿತ ಚರ್ಚೆಯ ಸಂಪೂರ್ಣ ವಿಡಿಯೋ ಸದ್ಯದಲ್ಲಿಯೇ ಬರಲಿದೆ. ನಿರೀಕ್ಷಿಸಿ’ ಎಂದು ಕಾಂಗ್ರೆಸ್ ತಿಳಿಸಿದೆ.

ಇದನ್ನು ರೀಟ್ವೀಟ್ ಮಾಡಿಕೊಂಡಿರುವ ಟ್ವಿಟರ್ ಬಳಕೆದಾರರಾದ ಗಣೇಶ್ ಚೇತನ್ ಎಂಬುವವರು, ‘ಈ ವಿಡಿಯೋ ಕಾಂಗ್ರೆಸ್ ನ ಮಾಸ್ಟರ್ ಸ್ಟ್ರೋಕ್ ನಂತೆ ಕಾಣುತ್ತಿದೆ. ಯಡಿಯೂರಪ್ಪ ಮತ್ತು ಬಿಎಲ್ ಸಂತೋಷ್ ಅವರೊಂದಿಗೆ ನಾವು ಅಂತಹದನ್ನು ನೋಡಲು ಬಯಸುತ್ತೇವೆ. ಕುಮಾರಸ್ವಾಮಿ ಮತ್ತು ರೇವಣ್ಣ ಸಹ ಹೀಗೆ ಮಾತನಾಡಬೇಕೆಂದು ಬಯಸುತ್ತೇವೆ’ ಎಂಬುದಾಗಿ ತಿಳಿಸಿದ್ದಾರೆ.

ಅಧಿಕಾರಕ್ಕೆ ಬಂದ ನಂತರ ಕರ್ನಾಟಕದ ಕಾಂಗ್ರೆಸ್ ನಾಯಕರಿಂದ ಈಗ ಬೇಕಾಗಿರುವುದು ಮತ್ತು ನಿರೀಕ್ಷಿಸುತ್ತಿರುವ ಏಕೈಕ ವಿಷಯವೆಂದರೆ ಅವರು ನೀಡಿದ ಭರವಸೆಗಳನ್ನು ಉಳಿಸಿಕೊಳ್ಳುವುದು, ಪಕ್ಷದ ಒಳಗೆ ಮತ್ತು ಹೊರಗಿನ ಭ್ರಷ್ಟರ ವಿರುದ್ಧ ಬಲಶಾಲಿಯಾಗುವುದು, ಅಭಿವೃದ್ಧಿ ಮತ್ತು ಪ್ರಯೋಜನವು ಎಲ್ಲರಿಗೂ ತಲುಪುವುದನ್ನು ಖಚಿತಪಡಿಸಿಕೊಳ್ಳುವುದು. ಇವುಗಳು ಗ್ರಾಮ ಹಾಗೂ ನಗರಗಳಿಗೆ ತಲುಪುವಂತೆ ಮಾಡುವುದು’ ಎಂದು ಇನ್ನೊಬ್ಬರು ಕಾಮೆಂಟ್ ಮಾಡಿದ್ದಾರೆ.
https://twitter.com/INCKarnataka/status/1655123404717178880?t=HahmUHTGOUM2njiDpdzZuQ&s=08

lokesh

Recent Posts

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

1 hour ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಸ್ವಾಗತಾರ್ಹ

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…

2 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…

2 hours ago

ನಾವಿಕನೇ ಇಲ್ಲದ ಕೊಡಗು ಪ್ರವಾಸೋದ್ಯಮ ಇಲಾಖೆ..!

ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ  ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…

2 hours ago