BREAKING NEWS

ಚುನಾವಣೆಗೆ ಮೂರು ದಿನ ಬಾಕಿ ಇರುವ ಬೆನ್ನಲ್ಲೇ ವೈರಲ್‌ ಆಯ್ತು ಕಾಂಗ್ರೆಸ್‌ ನಾಯಕರ ವಿಡಿಯೋ

ಬೆಂಗಳೂರು : ವಿಧಾನಸಭೆ ಚುನಾವಣೆಗೆ ಮೂರು ದಿನಗಳು ಬಾಕಿ ಇದೆ. ಈ ಮಹತ್ವದ ಸಮಯದಲ್ಲಿ ವಿಡಿಯೊವೊಂದು ವೈರಲ್ ಆಗಿದೆ. ಈ ವಿಡಿಯೊ ತುಣುಕಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಆಪ್ತ ಸಮಾಲೋಚನೆ ನಡೆಸುತ್ತಿರುವುದು ಕಂಡುಬಂದಿದೆ. ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯನವರ ಆರೋಗ್ಯವನ್ನು ವಿಚಾರಿಸುತ್ತಿರುವುದು ಇಲ್ಲಿ ಕಾಣಬಹುದಾಗಿದೆ.

ಉಭಯ ನಾಯಕರು ಹಲವಾರು ವಿಚಾರಗಳನ್ನು ಇಲ್ಲಿ ಮಾತನಾಡಿದ್ದಾರೆ. ಸಿದ್ದರಾಮಯ್ಯನವರ ಕೈ ಊದಿಕೊಂಡಿರುವ ವಿಚಾರ, ಡಿಕೆಶಿ ಹೆಲಿಕಾಪ್ಟರ್ ಅಪಘಾತದ ವಿಚಾರಗಳನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಇಂದಿರಾ ಕ್ಯಾಂಟಿನ್ ಮತ್ತೆ ತೆರೆಯುವ ಬಗ್ಗೆ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಜಗದೀಶ್ ಶೆಟ್ಟರ್ ಅವರನ್ನು ಕಣ್ಣೀರು ಹಾಕಿಸಿದ ಬಿಜೆಪಿ ಬಗ್ಗೆಯೂ ಉಭಯ ನಾಯಕರು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಐದು ಕ್ಷೇತ್ರಗಳನ್ನು ಕಾಂಗ್ರೆಸ್ ಗೆಲ್ಲಲಿದೆ, ಹಳೇ ಮೈಸೂರು ಭಾಗವನ್ನು ಫುಲ್ ಕವರ್ ಮಾಡಿದ್ದೇನೆ ಎಂದು ಡಿಕೆಶಿ ಹೇಳಿಕೊಂಡಿದ್ದಾರೆ. ಜನರು ನಮ್ಮ ಮೇಲೆ ನಂಬಿಕೆ ಇರಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ಇದನ್ನು ಕರ್ನಾಟಕ ಕಾಂಗ್ರೆಸ್ ಟ್ವಿಟರ್ ನಲ್ಲಿ ಹಂಚಿಕೊಂಡಿದೆ. ‘ಪ್ರಚಾರದ ಭರಾಟೆಯ ಮಧ್ಯೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ನಡೆದ ವಿಚಾರ ವಿನಿಮಯದ ತುಣುಕು ಇಲ್ಲಿದೆ. ರಾಜ್ಯದ ಆಗುಹೋಗುಗಳು, ಭವಿಷ್ಯದ ಯೋಜನೆಗಳ ಕುರಿತ ಚರ್ಚೆಯ ಸಂಪೂರ್ಣ ವಿಡಿಯೋ ಸದ್ಯದಲ್ಲಿಯೇ ಬರಲಿದೆ. ನಿರೀಕ್ಷಿಸಿ’ ಎಂದು ಕಾಂಗ್ರೆಸ್ ತಿಳಿಸಿದೆ.

ಇದನ್ನು ರೀಟ್ವೀಟ್ ಮಾಡಿಕೊಂಡಿರುವ ಟ್ವಿಟರ್ ಬಳಕೆದಾರರಾದ ಗಣೇಶ್ ಚೇತನ್ ಎಂಬುವವರು, ‘ಈ ವಿಡಿಯೋ ಕಾಂಗ್ರೆಸ್ ನ ಮಾಸ್ಟರ್ ಸ್ಟ್ರೋಕ್ ನಂತೆ ಕಾಣುತ್ತಿದೆ. ಯಡಿಯೂರಪ್ಪ ಮತ್ತು ಬಿಎಲ್ ಸಂತೋಷ್ ಅವರೊಂದಿಗೆ ನಾವು ಅಂತಹದನ್ನು ನೋಡಲು ಬಯಸುತ್ತೇವೆ. ಕುಮಾರಸ್ವಾಮಿ ಮತ್ತು ರೇವಣ್ಣ ಸಹ ಹೀಗೆ ಮಾತನಾಡಬೇಕೆಂದು ಬಯಸುತ್ತೇವೆ’ ಎಂಬುದಾಗಿ ತಿಳಿಸಿದ್ದಾರೆ.

ಅಧಿಕಾರಕ್ಕೆ ಬಂದ ನಂತರ ಕರ್ನಾಟಕದ ಕಾಂಗ್ರೆಸ್ ನಾಯಕರಿಂದ ಈಗ ಬೇಕಾಗಿರುವುದು ಮತ್ತು ನಿರೀಕ್ಷಿಸುತ್ತಿರುವ ಏಕೈಕ ವಿಷಯವೆಂದರೆ ಅವರು ನೀಡಿದ ಭರವಸೆಗಳನ್ನು ಉಳಿಸಿಕೊಳ್ಳುವುದು, ಪಕ್ಷದ ಒಳಗೆ ಮತ್ತು ಹೊರಗಿನ ಭ್ರಷ್ಟರ ವಿರುದ್ಧ ಬಲಶಾಲಿಯಾಗುವುದು, ಅಭಿವೃದ್ಧಿ ಮತ್ತು ಪ್ರಯೋಜನವು ಎಲ್ಲರಿಗೂ ತಲುಪುವುದನ್ನು ಖಚಿತಪಡಿಸಿಕೊಳ್ಳುವುದು. ಇವುಗಳು ಗ್ರಾಮ ಹಾಗೂ ನಗರಗಳಿಗೆ ತಲುಪುವಂತೆ ಮಾಡುವುದು’ ಎಂದು ಇನ್ನೊಬ್ಬರು ಕಾಮೆಂಟ್ ಮಾಡಿದ್ದಾರೆ.
https://twitter.com/INCKarnataka/status/1655123404717178880?t=HahmUHTGOUM2njiDpdzZuQ&s=08

lokesh

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

4 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

9 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

13 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

13 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

13 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

16 hours ago