ಬೆಂಗಳೂರು : ವಿಧಾನಸಭೆ ಚುನಾವಣೆಗೆ ಮೂರು ದಿನಗಳು ಬಾಕಿ ಇದೆ. ಈ ಮಹತ್ವದ ಸಮಯದಲ್ಲಿ ವಿಡಿಯೊವೊಂದು ವೈರಲ್ ಆಗಿದೆ. ಈ ವಿಡಿಯೊ ತುಣುಕಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಆಪ್ತ ಸಮಾಲೋಚನೆ ನಡೆಸುತ್ತಿರುವುದು ಕಂಡುಬಂದಿದೆ. ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯನವರ ಆರೋಗ್ಯವನ್ನು ವಿಚಾರಿಸುತ್ತಿರುವುದು ಇಲ್ಲಿ ಕಾಣಬಹುದಾಗಿದೆ.
ಉಭಯ ನಾಯಕರು ಹಲವಾರು ವಿಚಾರಗಳನ್ನು ಇಲ್ಲಿ ಮಾತನಾಡಿದ್ದಾರೆ. ಸಿದ್ದರಾಮಯ್ಯನವರ ಕೈ ಊದಿಕೊಂಡಿರುವ ವಿಚಾರ, ಡಿಕೆಶಿ ಹೆಲಿಕಾಪ್ಟರ್ ಅಪಘಾತದ ವಿಚಾರಗಳನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಇಂದಿರಾ ಕ್ಯಾಂಟಿನ್ ಮತ್ತೆ ತೆರೆಯುವ ಬಗ್ಗೆ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಜಗದೀಶ್ ಶೆಟ್ಟರ್ ಅವರನ್ನು ಕಣ್ಣೀರು ಹಾಕಿಸಿದ ಬಿಜೆಪಿ ಬಗ್ಗೆಯೂ ಉಭಯ ನಾಯಕರು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಐದು ಕ್ಷೇತ್ರಗಳನ್ನು ಕಾಂಗ್ರೆಸ್ ಗೆಲ್ಲಲಿದೆ, ಹಳೇ ಮೈಸೂರು ಭಾಗವನ್ನು ಫುಲ್ ಕವರ್ ಮಾಡಿದ್ದೇನೆ ಎಂದು ಡಿಕೆಶಿ ಹೇಳಿಕೊಂಡಿದ್ದಾರೆ. ಜನರು ನಮ್ಮ ಮೇಲೆ ನಂಬಿಕೆ ಇರಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.
ಇದನ್ನು ಕರ್ನಾಟಕ ಕಾಂಗ್ರೆಸ್ ಟ್ವಿಟರ್ ನಲ್ಲಿ ಹಂಚಿಕೊಂಡಿದೆ. ‘ಪ್ರಚಾರದ ಭರಾಟೆಯ ಮಧ್ಯೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ನಡೆದ ವಿಚಾರ ವಿನಿಮಯದ ತುಣುಕು ಇಲ್ಲಿದೆ. ರಾಜ್ಯದ ಆಗುಹೋಗುಗಳು, ಭವಿಷ್ಯದ ಯೋಜನೆಗಳ ಕುರಿತ ಚರ್ಚೆಯ ಸಂಪೂರ್ಣ ವಿಡಿಯೋ ಸದ್ಯದಲ್ಲಿಯೇ ಬರಲಿದೆ. ನಿರೀಕ್ಷಿಸಿ’ ಎಂದು ಕಾಂಗ್ರೆಸ್ ತಿಳಿಸಿದೆ.
ಇದನ್ನು ರೀಟ್ವೀಟ್ ಮಾಡಿಕೊಂಡಿರುವ ಟ್ವಿಟರ್ ಬಳಕೆದಾರರಾದ ಗಣೇಶ್ ಚೇತನ್ ಎಂಬುವವರು, ‘ಈ ವಿಡಿಯೋ ಕಾಂಗ್ರೆಸ್ ನ ಮಾಸ್ಟರ್ ಸ್ಟ್ರೋಕ್ ನಂತೆ ಕಾಣುತ್ತಿದೆ. ಯಡಿಯೂರಪ್ಪ ಮತ್ತು ಬಿಎಲ್ ಸಂತೋಷ್ ಅವರೊಂದಿಗೆ ನಾವು ಅಂತಹದನ್ನು ನೋಡಲು ಬಯಸುತ್ತೇವೆ. ಕುಮಾರಸ್ವಾಮಿ ಮತ್ತು ರೇವಣ್ಣ ಸಹ ಹೀಗೆ ಮಾತನಾಡಬೇಕೆಂದು ಬಯಸುತ್ತೇವೆ’ ಎಂಬುದಾಗಿ ತಿಳಿಸಿದ್ದಾರೆ.
ಅಧಿಕಾರಕ್ಕೆ ಬಂದ ನಂತರ ಕರ್ನಾಟಕದ ಕಾಂಗ್ರೆಸ್ ನಾಯಕರಿಂದ ಈಗ ಬೇಕಾಗಿರುವುದು ಮತ್ತು ನಿರೀಕ್ಷಿಸುತ್ತಿರುವ ಏಕೈಕ ವಿಷಯವೆಂದರೆ ಅವರು ನೀಡಿದ ಭರವಸೆಗಳನ್ನು ಉಳಿಸಿಕೊಳ್ಳುವುದು, ಪಕ್ಷದ ಒಳಗೆ ಮತ್ತು ಹೊರಗಿನ ಭ್ರಷ್ಟರ ವಿರುದ್ಧ ಬಲಶಾಲಿಯಾಗುವುದು, ಅಭಿವೃದ್ಧಿ ಮತ್ತು ಪ್ರಯೋಜನವು ಎಲ್ಲರಿಗೂ ತಲುಪುವುದನ್ನು ಖಚಿತಪಡಿಸಿಕೊಳ್ಳುವುದು. ಇವುಗಳು ಗ್ರಾಮ ಹಾಗೂ ನಗರಗಳಿಗೆ ತಲುಪುವಂತೆ ಮಾಡುವುದು’ ಎಂದು ಇನ್ನೊಬ್ಬರು ಕಾಮೆಂಟ್ ಮಾಡಿದ್ದಾರೆ.
https://twitter.com/INCKarnataka/status/1655123404717178880?t=HahmUHTGOUM2njiDpdzZuQ&s=08
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…